
ಗ್ವಾಂಗ್ಜು(ನ.19): ಕಳೆದ ವಾರ ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿ ಲಯಕ್ಕೆ ಮರಳಿರುವ ಭಾರತದ ತಾರಾ ಶಟ್ಲರ್ ಕಿದಂಬಿ ಶ್ರೀಕಾಂತ್, ಮಂಗಳವಾರರಿಂದ ಇಲ್ಲಿ ಆರಂಭಗೊಳ್ಳಲಿರುವ ಕೊರಿಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದ್ದಾರೆ.
ಅಯ್ಯೋ ವಿಧಿಯೇ... ಅರ್ಧ ಶತಕ ಬಾರಿಸಿ ಪ್ರಾಣಬಿಟ್ಟ ಕ್ರಿಕೆಟಿಗ..!
ಮೊದಲ ಸುತ್ತಿನಲ್ಲಿ ಶ್ರೀಕಾಂತ್ಗೆ ಹಾಂಕಾಂಗ್ನ ವೊಂಗ್ ವಿಂಗ್ ವಿನ್ಸೆಂಟ್ ಎದುರಾಗಲಿದ್ದಾರೆ. ವಾಂಗ್ ವಿರುದ್ಧ ಶ್ರೀಕಾಂತ್ 10-3ರ ಗೆಲುವು-ಸೋಲಿನ ದಾಖಲೆ ಹೊಂದಿದ್ದಾರೆ. ಕಳೆದ ಹಲವು ಟೂರ್ನಿಗಳಲ್ಲಿ ಮೊದಲ ಸುತ್ತಿನಲ್ಲೇ ಹೊರಬಿದ್ದ ಸೈನಾ ನೆಹ್ವಾಲ್, ಕೊರಿಯಾ ಮಾಸ್ಟರ್ಸ್ ಟೂರ್ನಿಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ.
ಹಾಂಕಾಂಗ್ ಓಪನ್: ಸೆಮೀಸ್ನಲ್ಲಿ ಮುಗ್ಗರಿಸಿದ ಶ್ರೀಕಾಂತ್
ಮುಂದಿನ ವಾರ ಲಖನೌನಲ್ಲಿ ನಡೆಯಲಿರುವ ಸಯ್ಯದ್ ಮೋದಿ ಟೂರ್ನಿಯಲ್ಲಿ ಅವರು ಕಣಕ್ಕಿಳಿಯುವ ಸಾಧ್ಯತೆ ಇದೆ. ಮಹಿಳಾ ಸಿಂಗಲ್ಸ್ ಹಾಗೂ ಡಬಲ್ಸ್ನ ಯಾವುದೇ ವಿಭಾಗದಲ್ಲಿ ಭಾರತೀಯರು ಸ್ಪರ್ಧಿಸುತ್ತಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.