
ನವದೆಹಲಿ(ಸೆ.16): ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ.
ಅರ್ಜುನ, ದ್ರೋಣಾಚಾರ್ಯ ಹಾಗೂ ಧ್ಯಾನ್ಚಂದ್ ಖೇಲ್ರತ್ನ ಪ್ರಶಸ್ತಿಗಾಗಿ ಈ ವರ್ಷ 600ಕ್ಕೂ ಅಧಿಕ ಕ್ರೀಡಾಪಟುಗಳು ಹಾಗೂ ಕೋಚ್ಗಳು ಅರ್ಜಿ ಸಲ್ಲಿಸಿದ್ದಾರೆ. ಪ್ರವಾಹದ ರೂಪದಲ್ಲಿ ಅರ್ಜಿಗಳು ಸಲ್ಲಿಕೆ ಆಗಿದ್ದು, ಕಳೆದ ವರ್ಷ 400 ಮಂದಿ ಅರ್ಜಿ ಸಲ್ಲಿಸಿದ್ದರು.
ಈ ವರ್ಷದಿಂದ ಮರುನಾಮಕರಣಗೊಂಡಿರುವ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ 35 ಮಂದಿ ಸಲ್ಲಿಸಿದ್ದು, ಅರ್ಜುನ ಪ್ರಶಸ್ತಿಗೆ ದಾಖಲೆಯ 215 ಮಂದಿ ಅರ್ಜಿ ಸಲ್ಲಿಸಿದ್ದಾರೆ. ದ್ರೋಣಾಚಾರ್ಯ ಪ್ರಶಸ್ತಿಗೂ 100ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಸಾಮಾನ್ಯವಾಗಿ ಪ್ರತಿವರ್ಷ ಸುಮಾರು 48 ಅರ್ಜಿಗಳು ಸಲ್ಲಿಕೆ ಆಗುತ್ತಿದ್ದವು. ಹಾಕಿ ಮಾಂತ್ರಿಕ ಧ್ಯಾನ್ಚಂದ್ ಹೆಸರಿನಲ್ಲಿ ನೀಡಲಾಗುವ ಜೀವಮಾನದ ಶ್ರೇಷ್ಠ ಸಾಧನೆ ಪ್ರಶಸ್ತಿಗೆ 138ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಆಯ್ಕೆ ಸಮಿತಿಗೆ ವೆಂಕಟೇಶ್ ಪ್ರಸಾದ್, ದೇವೇಂದ್ರ ಝಝಾರಿಯಾ ನೇಮಕ
ಈ ವರ್ಷ ಖೇಲ್ ರತ್ನ ಪ್ರಶಸ್ತಿಯ ಮೊತ್ತವನ್ನು 7.5 ಲಕ್ಷ ರುಪಾಯಿಗಳಿಂದ 25 ಲಕ್ಷ ರುಪಾಯಿಗೆ ಏರಿಕೆ ಮಾಡಲಾಗಿದ್ದು, ಅರ್ಜುನ ಪ್ರಶಸ್ತಿಯ ಮೊತ್ತವನ್ನು 10 ಲಕ್ಷದಿಂದ 15 ಲಕ್ಷ ರುಪಾಯಿಗೆ ಏರಿಕೆ ಮಾಡಲಾಗಿದೆ. ಟೋಕಿಯೋ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ಸಾಧಕರ ಹೆಸರನ್ನು ಖೇಲ್ ರತ್ನಗೆ ಪರಿಗಣಿಸಬೇಕೆಂದು ಕ್ರೀಡಾ ಸಚಿವಾಲಯವು ಪ್ರಶಸ್ತಿ ಆಯ್ಕೆ ಸಮಿತಿಗೆ ಶಿಫಾರಸು ಮಾಡಲಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.