
ನವದೆಹಲಿ(ಮೇ.27): 2 ಬಾರಿ ಒಲಿಂಪಿಕ್ ಪದಕ ವಿಜೇತ, ದಿಗ್ಗಜ ಕುಸ್ತಿಪಟು ಸುಶೀಲ್ ಕುಮಾರ್ ಗ್ಯಾಂಗ್ಸ್ಟರ್ಗಳ ಜೊತೆ ನಂಟು ಹೊಂದಿದ್ದಾರೆ ಎನ್ನುವ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಕುಸ್ತಿಪಟು ಸಾಗರ್ ರಾಣಾ ಸಾವಿನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸುಶೀಲ್, ವಿಚಾರಣೆ ವೇಳೆ ಸುಲಿಗೆ ಪ್ರಕರಣಗಳಲ್ಲೂ ಭಾಗಿಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ ಎನ್ನಲಾಗಿದೆ.
ಬಂಧಿತ ಗ್ಯಾಂಗ್ಸ್ಟರ್ ನೀರಜ್ ಬಾವನಾ ಅವರೊಂದಿಗೆ ಸುಶೀಲ್ ಕೈಜೋಡಿಸಿದ್ದರು ಎನ್ನಲಾಗಿದ್ದು, ಸಾಗರ್ ಮರಣ ಹೊಂದಿದ ಛತ್ರಾಸಲ್ ಕ್ರೀಡಾಂಗಣದಲ್ಲಿ ನೀರಜ್ಗೆ ಸಹಚರರಿಗೆ ಸೇರಿದ ವಾಹನವೊಂದು ಪತ್ತೆಯಾಗಿದೆ. ಅಲ್ಲದೇ ಘಟನೆ ನಡೆದ ರಾತ್ರಿ ಸುಶೀಲ್ ಜೊತೆ ನೀರಜ್ರ ಹಲವು ಸಹಚರರು ಸಹ ಇದ್ದರು ಎನ್ನಲಾಗಿದೆ.
ಕುಸ್ತಿಪಟು ಸಾವು: ರೈಲ್ವೆ ಹುದ್ದೆಯಿಂದ ಸುಶೀಲ್ ಅಮಾನತು
ದೆಹಲಿಯ ಮಾಡೆಲ್ ಟೌನ್ ನಗರದಲ್ಲಿ ಸ್ಥಳೀಯ ಕೇಬಲ್ ವ್ಯವಹಾರ ಮಾಡುವ ವ್ಯಕ್ತಿಯೊಬ್ಬನಿಗೆ ಕುಖ್ಯಾತ ಗ್ಯಾಂಗ್ಸ್ಟರ್ ಸಂದೀಪ್ ಅಲಿಯಾಸ್ ಕಾಲಾ ಜತೇಡಿ 1 ಕೋಟಿ ರು. ನೀಡುವಂತೆ ಬೇಡಿಕೆ ಇಟ್ಟಿದ್ದ. ಆತನಿಗೆ ಸುಶೀಲ್ ಮೂಲಕವೇ ಬೆದರಿಕೆ ಕರೆ ಹೋಗಿತ್ತು ಎನ್ನಲಾಗಿದೆ. ಜೊತೆಗೆ ದೆಹಲಿ, ಉತ್ತರ ಪ್ರದೇಶ, ಹರ್ಯಾಣದಲ್ಲಿ ಟೋಲ್ ಬೂತ್ಗಳ ಮೇಲೆ ನಿಯಂತ್ರಣ ಸಾಧಿಸಲು ಕಾಲಾ ಜತೇಡಿ ಮುಂದಾಗಿದ್ದ, ಈ ವೇಳೆ ಹಣ ಹಂಚಿಕೆ ವಿಚಾರದಲ್ಲಿ ಸುಶೀಲ್ ಹಾಗೂ ಕಾಲಾ ಜತೇಡಿ ನಡುವೆ ಜಗಳವಾದ ಕಾರಣ ಸುಶೀಲ್, ನೀರಜ್ ಜೊತೆ ಕೈಜೋಡಿಸಿದ್ದರು ಎನ್ನಲಾಗಿದೆ. ಕುಸ್ತಿಪಟು ಸಾಗರ್ ರಾಣಾ ಸಾವಿನ ಬಳಿಕ ಸುಶೀಲ್ ಪೊಲೀಸರಿಗೆ ಮಾತ್ರವಲ್ಲ, ಕಾಲಾ ಜತೇಡಿಗೂ ಹೆದರಿ ತಲೆಮರಿಸಿಕೊಂಡಿದ್ದರು ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.