
ನವದೆಹಲಿ(ಜೂ.09): ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ 2 ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ಸುಶೀಲ್ ಕುಮಾರ್ರನ್ನು ಇರಿಸಲಾಗಿರುವ ದೆಹಲಿಯ ಮಾಂಡೋಲಿ ಜೈಲಿನಲ್ಲೇ ಅವರನ್ನು ಕೊಲೆ ಮಾಡಲು, ದುಬೈನಲ್ಲಿದ್ದಾನೆ ಎನ್ನಲಾಗಿರುವ ಗ್ಯಾಂಗ್ಸ್ಟರ್ ಕಾಲಾ ಜಥೇಡಿ ಸುಪಾರಿ ನೀಡಿದ್ದಾನೆ ಎನ್ನುವ ಶಂಕೆ ಇದೆ. ತಮ್ಮ ಸಹಚರರ ಮೂಲಕ ಜಥೇಡಿ, ಮಾಂಡೋಲಿ ಜೈಲಿನಲ್ಲೇ ಇದ್ದ ಗ್ಯಾಂಗ್ಸ್ಟರ್ಗಳಾದ ಲಾರೆನ್ಸ್ ಬಿಷ್ಣೋಯ್ ಹಾಗೂ ಸಂಪತ್ ನೆಹ್ರಾಗೆ ಸುಶೀಲ್ರನ್ನು ಕೊಲ್ಲುವಂತೆ ತಿಳಿಸಿದ್ದ ಎನ್ನಲಾಗಿದೆ. ಈ ಕಾರಣದಿಂದಾಗಿ, ಲಾರೆನ್ಸ್ ಹಾಗೂ ಸಂಪತ್ರನ್ನು ತಿಹಾರ್ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
ಕೊಲೆ ಪ್ರಕರಣ: ಸುಶೀಲ್ ಕುಮಾರ್ ಶಸ್ತ್ರಾಸ್ತ್ರ ಪರವಾನಗಿ ಅಮಾನತು
38 ವರ್ಷದ ಸುಶೀಲ್ ಕುಮಾರ್ ಹಾಗೂ ಮತ್ತವರ ಬೆಂಬಲಿಗರು ನವದೆಹಲಿಯ ಛತ್ರಸಾಲ್ ಸ್ಟೇಡಿಯಂನಲ್ಲಿ ಜೂನಿಯರ್ ನ್ಯಾಷನಲ್ ಕುಸ್ತಿ ಚಾಂಪಿಯನ್ ಸಾಗರ್ ರಾಣಾ ಅವರನ್ನು ಹತ್ಯೆ ಮಾಡಿದ್ದಾರೆ ಎನ್ನುವ ಆರೋಪವಿದೆ. ಈ ಸಂಬಂಧ ತಲೆ ಮರೆಸಿಕೊಂಡಿದ್ದ ಸುಶೀಲ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಜೂನ್ 3ರಂದು 14 ದಿನಗಳ ಕಾಲ ಸುಶೀಲ್ ಕುಮಾರ್ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.