ಬ್ಯಾಡ್ಮಿಂಟನ್ ಗುರು ಗೋಪಿಚಂದ್‌ರಿಂದ ಕೊರೋನಾ ಸಂಕಷ್ಟಕ್ಕೆ 26 ಲಕ್ಷ ರುಪಾಯಿ ದೇಣಿಗೆ

Suvarna News   | Asianet News
Published : Apr 07, 2020, 11:25 AM IST
ಬ್ಯಾಡ್ಮಿಂಟನ್ ಗುರು ಗೋಪಿಚಂದ್‌ರಿಂದ ಕೊರೋನಾ ಸಂಕಷ್ಟಕ್ಕೆ 26 ಲಕ್ಷ ರುಪಾಯಿ ದೇಣಿಗೆ

ಸಾರಾಂಶ

ಕೊರೋನಾ ಸಂಕಷ್ಟಕ್ಕೆ ಹೋರಾಡುತ್ತಿರುವ ಭಾರತಕ್ಕೆ ಹಲವು ಕ್ರೀಡಾತಾರೆಯರು ನೆರವಿನ ಹಸ್ತ ನೀಡಿದ್ದಾರೆ. ಇದೀಗ ಪಿಎಂ ಕೇರ್ಸ್‌ಗೆ ಬ್ಯಾಡ್ಮಿಂಟನ್ ಗುರು ಪುಲ್ಲೇಲಾ ಗೋಪಿಚಂದ್, ಹಾಕಿ ಮಾಜಿ ನಾಯಕ ಧನರಾಜ್ ಫಿಳ್ಳೈ ದೇಣಿಗೆ ನೀಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಏ.07): ಕೊರೋನಾ ವೈರಸ್‌ ವಿರುದ್ಧದ ಹೋರಾಟಕ್ಕೆ ಭಾರತದ ರಾಷ್ಟ್ರೀಯ ಬ್ಯಾಡ್ಮಿಂಟನ್‌ ಮುಖ್ಯ ಕೋಚ್‌ ಪುಲ್ಲೇಲ ಗೋಪಿಚಂದ್‌, ಬಿಲಿಯರ್ಡ್ಸ್ ಪಟು ಪಂಕಜ್‌ ಅಡ್ವಾಣಿ, ಭಾರತ ಹಾಕಿ ಮಾಜಿ ನಾಯಕ ಧನರಾಜ್‌ ಪಿಳ್ಳೈ ಪಿಎಂ ಕೇರ್ಸ್‌ಗೆ ದೇಣಿಗೆ ನೀಡಿದ್ದಾರೆ.

ಬ್ಯಾಡ್ಮಿಂಟನ್ ಆಟಗಾರರಿಗೆ ಪುಲ್ಲೇಲಾ ಗೋಪಿಚಂದ್‌ ವಾಟ್ಸ್‌ಆ್ಯಪ್‌ನಲ್ಲಿ ಪಾಠ

ಗೋಪಿಚಂದ್‌ 26 ಲಕ್ಷ ರುಪಾಯಿ ನೀಡಿದ್ದಾರೆ. ಇದರಲ್ಲಿ ಪ್ರಧಾನಮಂತ್ರಿ ಪರಿಹಾರ ನಿಧಿಗೆ 11 ಲಕ್ಷ, ತೆಲಂಗಾಣ ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ರುಪಾಯಿ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಲಕ್ಷ ರುಪಾಯಿ ನೀಡಿರುವುದಾಗಿ ಗೋಪಿಚಂದ್‌ ಹೇಳಿದ್ದಾರೆ. 

ಕೊರೋನಾ ಸಂಕಷ್ಟ: PM CARES Fund ಗೆ 50 ಲಕ್ಷ ರುಪಾಯಿ ದೇಣಿಗೆ ನೀಡಿದ ಯುವರಾಜ್ ಸಿಂಗ್..!

ಇನ್ನು ಬಿಲಿಯರ್ಡ್ಸ್ ಪಟು ಪಂಕಜ್ ಅಡ್ವಾಣಿ ಪಿಎಂ ಕೇರ್ಸ್‌ಗೆ 5 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ. ಭಾರತ ಹಾಕಿ ತಂಡದ ಮಾಜಿ ನಾಯಕ ಧನರಾಜ್‌ ಪಿಳ್ಳೈ ಕೂಡಾ ಪಿಎಂ ಕೇರ್ಸ್‌ಗೆ 5 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ. ಇನ್ನುಳಿದಂತೆ ಐ-ಲೀಗ್‌ನ ಮಿನರ್ವ ಫುಟ್ಬಾಲ್‌ ಕ್ಲಬ್‌, ಪಂಜಾಬ್‌, ಹರಾರ‍ಯಣ ಹಾಗೂ ಚಂಢೀಗಢ ರಾಜ್ಯ ಸರ್ಕಾರದ ಪರಿಹಾರ ನಿಧಿಗೆ ಕ್ರಮವಾಗಿ 5, 2 ಮತ್ತು 1 ಲಕ್ಷ ರುಪಾಯಿ ದೇಣಿಗೆ ನೀಡಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!