
ನವದೆಹಲಿ(ಏ.10): ದೇಶದಲ್ಲಿ ನಿತ್ಯ ಒಂದು ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗುತ್ತಿರುವ ಕಾರಣ, ರಾಷ್ಟ್ರೀಯ ಉನ್ನತ ತರಬೇತಿ ಕೇಂದ್ರ(ಎನ್ಸಿಒಇ)ಗಳಲ್ಲಿ ಅಭ್ಯಾಸ ನಡೆಸುತ್ತಿರುವ ಕ್ರೀಡಾಪಟುಗಳಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) 3 ವಾರಗಳ ರಜೆ ಘೋಷಿಸಿದೆ. ಆದರೆ ಟೋಕಿಯೋ ಒಲಿಂಪಿಕ್ಸ್ಗೆ ಸಿದ್ಧತೆ ನಡೆಸುತ್ತಿರುವ ಕ್ರೀಡಾಪಟುಗಳು ಮಾತ್ರ ತಮ್ಮ ಅಭ್ಯಾಸ ಮುಂದುವರಿಸಲಿದ್ದಾರೆ ಎಂದು ಸಾಯ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇತ್ತೀಚೆಗಷ್ಟೇ ಪಟಿಯಾಲಾ, ಬೆಂಗಳೂರು ಹಾಗೂ ಸೋನೆಪತ್ ತರಬೇತಿ ಕೇಂದ್ರಗಳಲ್ಲಿ ಗಣನೀಯ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ಕ್ರೀಡಾಪಟುಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾಯ್ ತಿಳಿಸಿದೆ.
ಆದರೆ ಟೋಕಿಯೋ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿರುವ ಯಾವುದೇ ಕ್ರೀಡಾಪಟು ಸಹ ಸೋಂಕಿಗೆ ತುತ್ತಾಗಿಲ್ಲ. ತರಬೇತಿ ಶಿಬಿರಗಳಲ್ಲಿ ಅಭ್ಯಾಸ ಮುಂದುವರಿಸುವ ಕ್ರೀಡಾಪಟುಗಳು ವಾರಕೊಮ್ಮೆ ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಬೇಕಿದೆ. ರಜೆ ಮೇಲೆ ತಮ್ಮ ಊರುಗಳಿಗೆ ತೆರಳಲಿರುವ ಕ್ರೀಡಾಪಟುಗಳಿಗೆ ಸಾಯ್ ವಿಮಾನ, ರೈಲು ವ್ಯವಸ್ಥೆ ಕಲ್ಪಿಸುವುದಾಗಿ ಸಾಯ್ ತಿಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.