
ನವದೆಹಲಿ(ಮೇ.03): ಕೊರೋನಾ ವೈರಸ್ ಲಾಕ್ಡೌನ್ 3ನೇ ಹಂತಕ್ಕೆ ವಿಸ್ತರಣೆಯಾಗಿದೆ. ಆದರೆ ಕೆಲವು ಸಡಿಲಿಕೆ ನೀಡಲಾಗಿದೆ. ಇತ್ತ ಕೊರೋನಾ ವೈರಸ್ ಆರ್ಭಟ ಆರಂಭಿಸುತ್ತಿದ್ದಂತೆ ಭಾರತದಲ್ಲಿ ಮಾತ್ರವಲ್ಲ ವಿಶ್ವದಲ್ಲಿನ ಎಲ್ಲಾ ಕ್ರೀಡಾಕೂಟಗಳು ರದ್ದಾಗಿದೆ. ಇತ್ತ ಸಾಯಿ ಕೇಂದ್ರದಲ್ಲಿನ ತರಬೇತಿ ಶಿಬರಗಳೂ ಕೂಡ ರದ್ದು ಮಾಡಲಾಗಿತ್ತು. ಇದೀಗ ಮೇ. 17ಕ್ಕೆ 3ನೇ ಹಂತದ ಲಾಕ್ಡೌನ್ ಅಂತ್ಯವಾಗುತ್ತಿದೆ. ಹೀಗಾಗಿ ಮೇ. ಅಂತ್ಯದಿಂದ ಒಲಿಂಪಿಕ್ಸ್ ತರಬೇತಿ ಶಿಬರಗಳು ಆರಂಭಿಸಲು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಫೆಡ್ ಕಪ್ ಹಾರ್ಟ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಸಾನಿಯಾ, ಮೊದಲ ಭಾರತೀಯ ಅನ್ನೋ ಹೆಗ್ಗಳಿಕೆ!.
ಲಾಕ್ಡೌನ್ ತೆರವಾದ ಬಳಿಕ ಅಂದರೆ ಮೇ ಅಂತ್ಯದಲ್ಲಿ ಮೊದಲ ಹಂತದಲ್ಲಿ ಅಭ್ಯಾಸ ಶಿಬಿರ ಆರಂಭಿಸಲಾಗುವುದು. ಬೆಂಗಳೂರು ಹಾಗೂ ಪಟಿಯಾಲದ ಸಾಯಿ ಸೆಂಟರ್ನಲ್ಲಿ ಮೊದಲ ಹಂತದ ಅಭ್ಯಾಸ ಶಿಬಿರಗಳು ಆರಂಭವಾಗಲಿದೆ ಎಂದು ಕಿರಣ್ ರಿಜಿಜು ಹೇಳಿದ್ದಾರೆ. ಒಲಿಂಪಿಕ್ಸ್ ಅರ್ಹತೆ ಪಡೆದ ಕ್ರೀಡಾಪಟುಗಳಿಗೆ ಆರಂಭಿಕ ಹಂತದಲ್ಲಿ ಅಭ್ಯಾಸ ಶಿಬಿರ ಆಯೋಜಿಸಲಾಗುವುದು ಎಂದಿದ್ದಾರೆ.
ಎಲ್ಲವೂ ಕೂಡ ಕೊರೋನಾ ವೈರಸ್ ನಿಯಂತ್ರಣದಲ್ಲಿ ಬಂದರೆ ಮಾತ್ರ ಸಾಧ್ಯ. ಸದ್ಯದ ಪರಿಸ್ಥಿತಿಯಲ್ಲಿ ಭಾರತದಲ್ಲಿ ನಿಧಾನವಾಗಿ ಕೋವಿಡ್ 19 ನಿಯಂತ್ರಣಕ್ಕೆ ಬರುತ್ತಿದೆ. ಹೀಗಾಗಿ ಮೇ ಅಂತ್ಯಕ್ಕೆ ಎಲ್ಲವೂ ಸರಿಯಾಗಲಿದೆ. ಆದರೆ ಸಾಮಾಜಿಕ ಅಂತರ ಸೇರಿದಂತೆ ಹಲವು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವ ಮೂಲಕ ತರಬೇತಿ ಶಿಬಿರಗಳನ್ನು ಆರಂಭಿಸಲಾಗುವುದು ಎಂದು ಕಿರಣ್ ರಿಜಿಜು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.