
ನವದೆಹಲಿ(ಮಾ.06): ಮುಂಬರುವ ವರ್ಷಗಳಲ್ಲಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸುವುದು ಭಾರತದ ಗುರಿಯಾಗಿದ್ದು, ಈ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುತ್ತಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರಿಜಿಜು, ‘ಕ್ರೀಡಾ ಕ್ಷೇತ್ರದಲ್ಲಿ ಭಾರತ ತಾನು ಗಳಿಸಬೇಕಿದ್ದ ಸ್ಥಾನವನ್ನು ಇನ್ನೂ ಗಳಿಸಿಲ್ಲ. ಒಲಿಂಪಿಕ್ಸ್ ಅತಿದೊಡ್ಡ ಕ್ರೀಡಾಕೂಟ. ಲಂಡನ್ 3 ಬಾರಿ ಒಲಿಂಪಿಕ್ಸ್ ಆಯೋಜಿಸಿದೆ. ಈ ಬಾರಿ ಒಲಿಂಪಿಕ್ಸ್ಗೆ ವೇದಿಕೆಯಾಗಲಿರುವ ಟೋಕಿಯೋ ಈ ಹಿಂದೆ 1964ರ ಕ್ರೀಡಾಕೂಟದ ಆತಿಥ್ಯ ವಹಿಸಿತ್ತು. ಒಲಿಂಪಿಕ್ಸ್ಗೆ ಆತಿಥ್ಯ ವಹಿಸುವ ವರೆಗೂ ಒಲಿಂಪಿಕ್ಸ್ ಅಭಿಯಾನ ಪೂರ್ಣಗೊಳ್ಳುವುದಿಲ್ಲ’ ಎಂದರು.
ಖೇಲೋ ಇಂಡಿಯಾ ವಿಂಟರ್ ಗೇಮ್ಸ್: 2ನೇ ಚಿನ್ನದ ಪದಕ ಮುಡಿಗೇರಿಸಿದ ಅಂಚಲ್ ಠಾಕೂರ್!
ಭಾರತದಲ್ಲಿ ಒಲಿಂಪಿಕ್ಸ್ ಆಯೋಜಿಸುವ ಕನಸನ್ನು ಸಾಕಷ್ಟು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಯುವ ಜನತೆ ಕ್ರೀಡೆಯಲ್ಲಿ ತೊಡಗಿಕೊಳ್ಳಲು ಭಾರತ ಸರ್ಕಾರ ಖೇಲೋ ಇಂಡಿಯಾ ಹಾಗೂ ಫಿಟ್ ಇಂಡಿಯಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ ಎಂದು ರಿಜಿಜು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.