ಒತ್ತಡಕ್ಕೆ ಮಣಿದು ಕಂಬಳ ವೀರನಿಗೆ ಟ್ರಯಲ್ಸ್‌ಗೆ ಆಹ್ವಾನ!

Suvarna News   | Asianet News
Published : May 04, 2020, 08:16 AM IST
ಒತ್ತಡಕ್ಕೆ ಮಣಿದು ಕಂಬಳ ವೀರನಿಗೆ ಟ್ರಯಲ್ಸ್‌ಗೆ ಆಹ್ವಾನ!

ಸಾರಾಂಶ

ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದ ಕಂಬಳ ಜಾಕಿ ಶ್ರೀನಿವಾಸ್ ಗೌಡ ಹಾಗೂ ಮಧ್ಯ ಪ್ರದೇಶ ಗ್ರಾಮೀಣ ಪ್ರತಿಭೆ ರಾಮೇಶ್ವರ್‌ ಗುಜ್ಜಾರ್‌ಗೆ ಸಾಯ್ ಆಯ್ಕೆ ಟ್ರಯಲ್ಸ್ ನಡೆಸಲು ಮುಂದಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ನವದೆಹಲಿ(ಮೇ.04): ಒತ್ತಡಕ್ಕೆ ಮಣಿದು ಸಾಮಾಜಿಕ ತಾಣಗಳಲ್ಲಿ ರಾತ್ರೋರಾತ್ರಿ ಹೀರೋಗಳಾದ ಕ್ರೀಡಾಪಟುಗಳನ್ನು ಸಾಯ್‌ ಕೇಂದ್ರಗಳಲ್ಲಿ ಆಯ್ಕೆ ಟ್ರಯಲ್ಸ್‌ಗೆ ಆಹ್ವಾನಿಸಲಾಯಿತು ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ತಿಳಿಸಿದ್ದಾರೆ. 

‘ದ.ಕನ್ನಡದ ಕಂಬಳ ಓಟಗಾರ ಶ್ರೀನಿವಾಸ್‌ ಗೌಡ ಹಾಗೂ ಮಧ್ಯಪ್ರದೇಶದ ರಾಮೇಶ್ವರ್‌ ಗುಜ್ಜಾರ್‌, 100 ಮೀ. ಓಟವನ್ನು 10 ಸೆಕೆಂಡ್‌ಗಳಲ್ಲಿ ಪೂರ್ಣಗೊಳಿಸಿದ್ದಾರೆ ಎಂದು ಸಾಮಾಜಿಕ ತಾಣಗಳಲ್ಲಿ ವಿಡಿಯೋಗಳು ವೈರಲ್‌ ಆಗಿದ್ದವು. ಇಂತಹ ಕ್ರೀಡಾಪಟುಗಳ ಮೇಲೆ ಗಮನ ಹರಿಸುವಂತೆ ಪ್ರತಿಯೊಬ್ಬರೂ ಒತ್ತಾಯಿಸಿದರು. ಅವರ ಒತ್ತಡಕ್ಕೆ ಮಣಿದು, ಆಯ್ಕೆ ಟ್ರಯಲ್ಸ್‌ಗೆ ಕರೆದೆವು’ ಎಂದು ರಿಜಿಜು ಹೇಳಿದ್ದಾರೆ. 

ಓಟದ ಮೈದಾನದಲ್ಲಿ ಗುರ್ಜಾರ್ ಘರ್ಜನೆ: ರಿಜಿಜು ಅಂದರು ಟ್ರೈನಿಂಗ್ ಕೊಡ್ತೇನೆ!

‘ಸಾಮಾಜಿಕ ತಾಣಗಳಲ್ಲಿ ಪ್ರತಿಕ್ರಿಯಿಸುವವರಿಗೆ ಕ್ರೀಡೆಯ ಬಗ್ಗೆ ಜ್ಞಾನವಿರುವುದಿಲ್ಲ. ಕ್ರೀಡಾಪಟುಗಳನ್ನು ಸಿದ್ಧಪಡಿಸುವ ಬಗ್ಗೆ ಮಾಹಿತಿ ಕೊರತೆ ಇರುತ್ತದೆ. ಹಾಗೆಂದು ನಾವು ನಿರ್ಲಕ್ಷ್ಯ ತೋರಿದರೆ ಕ್ರೀಡಾ ಸಚಿವರು ಏನು ಮಾಡುತ್ತಿಲ್ಲ ಎನ್ನುತ್ತಾರೆ’ ಎಂದು ರಿಜಿಜು ಬೇಸರ ವ್ಯಕ್ತಪಡಿಸಿದ್ದಾರೆ.

ದಾಖಲೆಗಳ ಮೇಲೆ ದಾಖಲೆ ಬರೆದ ಕಂಬಳದ ಉಸೇನ್‌ ಬೋಲ್ಟ್‌ ಶ್ರೀನಿ

ಕಳೆದ ವರ್ಷ ಮಧ್ಯಪ್ರದೇಶದ ರಾಮೇಶ್ವರ್‌ ಗುಜ್ಜಾರ್ ಓಡುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಉಸೇನ್ ಬೋಲ್ಟ್‌ಗಿಂತ ವೇಗವಾಗಿ ಓಡುತ್ತಿರುವ ಭಾರತದ ಯುವಕ ಎಂದು ಬರೆದುಕೊಂಡಿದ್ದರು. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇನ್ನು ಕಂಬಳ ಜಾಕಿ 28 ವರ್ಷದ ಶ್ರೀನಿವಾಸ್ ಗೌಡ 100 ಮೀಟರ್ ಕಂಬಳ ರೇಸ್‌ನ್ನು ಕೇವಲ 9.55  ಸೆಕೆಂಡ್‌ಗಳಲ್ಲಿ ತಲುಪಿ ಸಂಚಲನ ಮೂಡಿಸಿದ್ದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!