ಕಂಠೀ​ರವ ಸಿಬ್ಬಂದಿಗೆ ಶೀಘ್ರ ವೇತನ: ಸಚಿವ ಈಶ್ವ​ರ​ಪ್ಪ

Published : Nov 20, 2019, 09:43 AM IST
ಕಂಠೀ​ರವ ಸಿಬ್ಬಂದಿಗೆ ಶೀಘ್ರ ವೇತನ: ಸಚಿವ ಈಶ್ವ​ರ​ಪ್ಪ

ಸಾರಾಂಶ

ಕಂಠೀರವ ಕ್ರೀಡಾಂಗಣದಲ್ಲಿನ ಸಿಬ್ಬಂದಿಗಳು ಕಳೆದ 3 ತಿಂಗಳಿನಿಂದ ವೇತನವಿಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ. ವೇತನ ಇಂದು, ನಾಳೆ ಎನ್ನುತ್ತಲೆ ಮೂರು ತಿಂಗಳು ಕೆಳೆದಿದೆ. ಸಿಬ್ಬಂದಿಗಳ ಬೇರೆ ದಾರಿ ಕಾಣದೆ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದೀಗ ಕ್ರೀಡಾ ಸಚಿವರು ಪ್ರತಿಭಟನಾ ನಿರತರಿಗೆ ಭರವಸೆ ನೀಡಿ

ಬೆಂಗಳೂರು(ನ.20) : ಕಳೆದ 3 ತಿಂಗಳಿಂದ ಮಾಸಿಕ ವೇತನ ನೀಡಿಲ್ಲ ಎಂದು ಪ್ರತಿಭಟನೆ ನಡೆಸುತ್ತಿರುವ ಕಂಠೀರವ ಕ್ರೀಡಾಂಗಣದ ನೌಕರರ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದು ಕ್ರೀಡಾ ಸಚಿವ ಕೆ.ಎಸ್‌. ಈಶ್ವರಪ್ಪ ಮಂಗ​ಳ​ವಾರ ಭರವಸೆ ನೀಡಿದರು. 

ಇದನ್ನೂ ಓದಿ: ಬೆಂಗಳೂರಿನ ಕಂಠೀರವದ ಸಿಂಥೆಟಿಕ್‌ ಟ್ರ್ಯಾಕ್‌ ಮತ್ತಷ್ಟುವಿಳಂಬ?

ಮಂಗ​ಳ​ವಾರ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ. ಪುರುಷೋತ್ತಮ ನೌಕರರ ಸಮಸ್ಯೆಯನ್ನು ಆಲಿ​ಸಿ​ದರು. ‘ಕನ್ನಡಪ್ರಭ’ಕ್ಕೆ ಪ್ರತಿಕ್ರಿಯಿಸಿದ ಪುರುಷೋತ್ತಮ, ‘ಇನ್ನೊಂದು ದಿನದಲ್ಲಿ ನೌಕರರ ವೇತನ ಸಮಸ್ಯೆ ಬಗೆಹರಿಯಲಿದೆ. ಈ ಬಗ್ಗೆ ಸಚಿವರು ಕೂಡ ಭರವಸೆ ನೀಡಿದ್ದಾರೆ’ ಎಂದರು. ಕಾರ್ಮಿಕ ಇಲಾಖೆಯ ಇನ್ಸ್‌ಪೆಕ್ಟರ್‌ ಅಲ್ತಾಫ್‌ ಸಹ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕ​ರ​ರೊಂದಿಗೆ ಚರ್ಚಿ​ಸಿ​ದರು.

ಇದನ್ನೂ ಓದಿ: 200 ಮೀಟರ್ ರೇಸ್ ಗೆದ್ದ 81 ವರ್ಷದ ಬೆಂಗಳೂರಿನ ಅಜ್ಜಿ..!

ವೇತನ ಬಾಕಿ ಉಳಿಸಿಕೊಂಡಿರುವ ವಿರುದ್ದ  ಸಿಬ್ಬಂದಿಗಳು ಹಲವು ಬಾರಿ ಮನವಿ ಮಾಡಿದ್ದರು. ಕೊನೆಗೆ ಬೇರೆ ದಾರಿ ಕಾಣದೆ ಪ್ರತಿಭಟನೆ ನಡೆಸಿದ್ದಾರೆ. ಸಿಬ್ಬಂದಿ ಪ್ರತಿಭಟನೆಗೆ ಮೊದಲ  ಹಂತದ ಜಯ ಸಿಕ್ಕಿದೆ. ವೇತನ ಸಮಸ್ಯೆ ಶೀಘ್ರದಲ್ಲೇ ಬಗೆಹರಿಸವು ಭರವಸೆ ಸಚಿವರಿಂದ ಸಿಕ್ಕಿದೆ. ಆದರೆ  ವೇತನ ಮತ್ತೆ ವಿಳಂಬವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!