
ಬೆಂಗಳೂರು(ನ.20) : ಕಳೆದ 3 ತಿಂಗಳಿಂದ ಮಾಸಿಕ ವೇತನ ನೀಡಿಲ್ಲ ಎಂದು ಪ್ರತಿಭಟನೆ ನಡೆಸುತ್ತಿರುವ ಕಂಠೀರವ ಕ್ರೀಡಾಂಗಣದ ನೌಕರರ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು ಎಂದು ಕ್ರೀಡಾ ಸಚಿವ ಕೆ.ಎಸ್. ಈಶ್ವರಪ್ಪ ಮಂಗಳವಾರ ಭರವಸೆ ನೀಡಿದರು.
ಇದನ್ನೂ ಓದಿ: ಬೆಂಗಳೂರಿನ ಕಂಠೀರವದ ಸಿಂಥೆಟಿಕ್ ಟ್ರ್ಯಾಕ್ ಮತ್ತಷ್ಟುವಿಳಂಬ?
ಮಂಗಳವಾರ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ. ಪುರುಷೋತ್ತಮ ನೌಕರರ ಸಮಸ್ಯೆಯನ್ನು ಆಲಿಸಿದರು. ‘ಕನ್ನಡಪ್ರಭ’ಕ್ಕೆ ಪ್ರತಿಕ್ರಿಯಿಸಿದ ಪುರುಷೋತ್ತಮ, ‘ಇನ್ನೊಂದು ದಿನದಲ್ಲಿ ನೌಕರರ ವೇತನ ಸಮಸ್ಯೆ ಬಗೆಹರಿಯಲಿದೆ. ಈ ಬಗ್ಗೆ ಸಚಿವರು ಕೂಡ ಭರವಸೆ ನೀಡಿದ್ದಾರೆ’ ಎಂದರು. ಕಾರ್ಮಿಕ ಇಲಾಖೆಯ ಇನ್ಸ್ಪೆಕ್ಟರ್ ಅಲ್ತಾಫ್ ಸಹ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ನೌಕರರೊಂದಿಗೆ ಚರ್ಚಿಸಿದರು.
ಇದನ್ನೂ ಓದಿ: 200 ಮೀಟರ್ ರೇಸ್ ಗೆದ್ದ 81 ವರ್ಷದ ಬೆಂಗಳೂರಿನ ಅಜ್ಜಿ..!
ವೇತನ ಬಾಕಿ ಉಳಿಸಿಕೊಂಡಿರುವ ವಿರುದ್ದ ಸಿಬ್ಬಂದಿಗಳು ಹಲವು ಬಾರಿ ಮನವಿ ಮಾಡಿದ್ದರು. ಕೊನೆಗೆ ಬೇರೆ ದಾರಿ ಕಾಣದೆ ಪ್ರತಿಭಟನೆ ನಡೆಸಿದ್ದಾರೆ. ಸಿಬ್ಬಂದಿ ಪ್ರತಿಭಟನೆಗೆ ಮೊದಲ ಹಂತದ ಜಯ ಸಿಕ್ಕಿದೆ. ವೇತನ ಸಮಸ್ಯೆ ಶೀಘ್ರದಲ್ಲೇ ಬಗೆಹರಿಸವು ಭರವಸೆ ಸಚಿವರಿಂದ ಸಿಕ್ಕಿದೆ. ಆದರೆ ವೇತನ ಮತ್ತೆ ವಿಳಂಬವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.