
ನವದೆಹಲಿ(ಮೇ.21): ಖೇಲ್ ರತ್ನ, ಅರ್ಜುನ ಪ್ರಶಸ್ತಿ ಸೇರಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳಿಗೆ ಕೇಂದ್ರ ಕ್ರೀಡಾ ಸಚಿವಾಲಯ ಗುರುವಾರ ಅರ್ಜಿ ಆಹ್ವಾನಿಸಿದೆ.
ಕೊರೋನಾದಿಂದಾಗಿ ಸತತ 2ನೇ ವರ್ಷ ಆನ್ಲೈನ್ನಲ್ಲೇ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಕ್ರೀಡಾಪಟುಗಳು, ಕೋಚ್ಗಳು ಅರ್ಜಿ ಸಲ್ಲಿಸಲು ಜೂ.21ರಂದು ಕೊನೆ ದಿನವಾಗಿದೆ ಎಂದು ಸಚಿವಾಲಯ ತಿಳಿಸಿದೆ. ಕಳೆದ ವರ್ಷ 74 ಮಂದಿ ವಿವಿಧ ಕ್ರೀಡಾ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಸದ್ಯದ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಈ ವರ್ಷವೂ ಆನ್ಲೈನ್ನಲ್ಲೇ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಕ್ರೀಡಾಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕಳೆದ ವರ್ಷ ಮೊದಲ ಬಾರಿಗೆ ವೈಯುಕ್ತಿವಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಇದರ ಜತೆಗೆ ರಾಷ್ಟ್ರೀಯ ಕ್ರೀಡಾ ಫೆಡರೇಷನ್ಗಳಿಂದಲೂ ಅರ್ಜಿ ಶಿಫಾರಸು ಮಾಡಲು ಅನುವು ಮಾಡಿಕೊಡಲಾಗಿತ್ತು. ಈ ಬಾರಿಯೂ ಇದೇ ನಿಯಮಗಳು ಮುಂದುವರೆಯಲಿವೆ ಎಂದು ಕ್ರೀಡಾ ಸಚಿವಾಲಯ ತಿಳಿಸಿದೆ.
ಕಳೆದ ವರ್ಷದಿಂದಲೇ ಪ್ರಶಸ್ತಿಯ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ದೇಶದ ಅತ್ಯುನ್ನತ ಕ್ರೀಡಾಪ್ರಶಸ್ತಿಯಾದ ಖೇಲ್ ರತ್ನ ಪ್ರಶಸ್ತಿಗೆ ಪಾತ್ರರಾದವರು 25 ಲಕ್ಷ ರುಪಾಯಿ ಹಾಗೂ ಸ್ಮರಣಿಕೆಗಳನ್ನು ಪಡೆಯಲ್ಲಿದ್ದಾರೆ. ಇನ್ನುಳಿದಂತೆ ಅರ್ಜುನ ಪ್ರಶಸ್ತಿಗೆ 15 ಲಕ್ಷ, ದ್ರೋಣಾಚಾರ್ಯ(ಜೀವಮಾನ ಸಾಧನೆ)ಗೆ 15 ಲಕ್ಷ ಮತ್ತು ಧ್ಯಾನ್ ಚಂದ್ ಪ್ರಶಸ್ತಿ ವಿಜೇತರು 10 ಲಕ್ಷ ರುಪಾಯಿ ಬಹುಮಾನ ಪಡೆಯಲಿದ್ದಾರೆ.
ಕ್ರೀಡಾ ಸಾಧಕರಿಗೆ ಸಿಹಿ ಸುದ್ದಿ: ಪ್ರಶಸ್ತಿಗಳ ನಗದು ಮೊತ್ತ ಗಣನೀಯ ಹೆಚ್ಚಳ!
ಕಳೆದ ವರ್ಷ ದಾಖಲೆ ಎನ್ನುವಂತೆ ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ, ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್, ಮಹಿಳಾ ಕುಸ್ತಿಪಟು ವಿನೇಶ್ ಪೋಗತ್, ಪ್ಯಾರಾ ಒಲಿಂಪಿಯನ್ ಮರಿಯಪ್ಪನ್ ತಂಗವೇಲು ಮತ್ತು ಟೇಬಲ್ ಟೆನಿಸ್ ಆಟಗಾರ್ತಿ ಮನಿಕಾ ಭಾತ್ರಾ ಹೀಗೆ ಒಟ್ಟು 5 ಮಂದಿ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.