ಕರ್ನಾಟಕ ರಾಜ್ಯದಲ್ಲಿ 31 ಖೇಲೋ ಇಂಡಿಯಾ ಕೇಂದ್ರ ಆರಂಭ: ಕಿರಣ್ ರಿಜಿಜು

Suvarna News   | Asianet News
Published : May 26, 2021, 01:02 PM IST
ಕರ್ನಾಟಕ ರಾಜ್ಯದಲ್ಲಿ 31 ಖೇಲೋ ಇಂಡಿಯಾ ಕೇಂದ್ರ ಆರಂಭ: ಕಿರಣ್ ರಿಜಿಜು

ಸಾರಾಂಶ

*  7 ರಾಜ್ಯದಲ್ಲಿ 143 ಖೇಲೋ ಇಂಡಿಯಾ ಕ್ರೀಡಾ ಕೇಂದ್ರಗಳನ್ನು ಆರಂಭಿಸಲು ಮುಂದಾದ ಕೇಂದ್ರ ಸರ್ಕಾರ * ಪ್ರತಿ ಜಿಲ್ಲೆಯಲ್ಲಿ ಒಂದೊಂದು ಖೇಲೋ ಇಂಡಿಯಾ ಕ್ರೀಡಾ ಕೇಂದ್ರ ತೆರೆಯಲು ಕ್ರೀಡಾ ಸಚಿವಾಲಯ ತೀರ್ಮಾನ * ಕರ್ನಾಟಕದಲ್ಲಿ 31 ಕ್ರೀಡಾ ಕೇಂದ್ರಗಳನ್ನು ತೆರೆಯುವುದಾಗಿ ಘೋಷಿಸಿದ ಕ್ರೀಡಾ ಸಚಿವ ಕಿರಣ್ ರಿಜಿಜು

ನವದೆಹಲಿ(ಮೇ.26): ಖೇಲೋ ಇಂಡಿಯಾ ಯೋಜನೆಯಡಿ 7 ರಾಜ್ಯದಲ್ಲಿ 143 ಕ್ರೀಡಾ ಕೇಂದ್ರಗಳನ್ನು ಆರಂಭಿಸುವುದಾಗಿ ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಮಂಗಳವಾರ ತಿಳಿಸಿದ್ದಾರೆ. ಸುಮಾರು 14.30 ಕೋಟಿ ರುಪಾಯಿ ವೆಚ್ಚದಡಿ ಈ ಕೇಂದ್ರಗಳನ್ನು ತೆರೆಯಲು ಭಾರತ ಸರ್ಕಾರ ಮುಂದಾಗಿದೆ

ಕೇಂದ್ರ ಸರ್ಕಾರವು ಮಹಾರಾಷ್ಟ್ರ, ಮಿಜೋರಾಂ, ಗೋವಾ, ಕರ್ನಾಟಕ, ಮಧ್ಯಪ್ರದೇಶ, ಅರುಣಾಚಲ ಪ್ರದೇಶ ಹಾಗೂ ಮಣಿಪುರದಲ್ಲಿ ಖೇಲೋ ಇಂಡಿಯಾ ಕ್ರೀಡಾ ಕೇಂದ್ರಗಳನ್ನು ತೆರೆಯುವುದಾಗಿ ರಿಜಿಜು ತಿಳಿಸಿದ್ದಾರೆ. ಈ ಪೈಕಿ ಕರ್ನಾಟಕದಲ್ಲಿ 3.10 ಕೋಟಿ ರು. ವೆಚ್ಚದಲ್ಲಿ 31 ಕೇಂದ್ರಗಳನ್ನು ತೆರೆಯಲಾಗುವುದು ಎಂದಿದ್ದಾರೆ.  ಗ್ರಾಮೀಣ ಮಟ್ಟದ ಪ್ರತಿಭೆಗಳನ್ನು ಹುಡುಕಿ ಅವರಿಗೆ ಸೂಕ್ತ ತರಬೇತಿ ನೀಡಿ, ಮುಂದಿನ ಹಂತಕ್ಕೆ ಬಡ್ತಿ ಸಿಗುವಂತೆ ಮಾಡುವುದೇ ಈ ಯೋಜನೆಯ ಉದ್ದೇಶ ಎಂದು ರಿಜಿಜು ತಿಳಿಸಿದ್ದಾರೆ. ಈ ಕ್ರೀಡಾ ಕೇಂದ್ರಗಳಿಗೆ ಕೋಚ್‌ಗಳನ್ನು ನೇಮಿಸುವ ಹೊಣೆಯನ್ನು ಕೇಂದ್ರವು, ರಾಜ್ಯ ಸರ್ಕಾರಗಳಿಗೆ ನೀಡಿದೆ.

2025-26ರ ವರೆಗೂ ಖೇಲೋ ಇಂಡಿಯಾ ವಿಸ್ತರಣೆ; ಕಿರಣ್‌ ರಿಜಿಜು

ಕಳೆದ ಜೂನ್ 2020ರಲ್ಲಿ ಮುಂಬರುವ ನಾಲ್ಕು ವರ್ಷಗಳ ಅವಧಿಯಲ್ಲಿ 1,000 ಹೊಸ ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸುವುದಾಗಿ ಕ್ರೀಡಾ ಸಚಿವಾಲಯವು ಘೋಷಿಸಿತ್ತು. ಈ ಪೈಕಿ ದೇಶದ ಪ್ರತಿಜಿಲ್ಲೆಯಲ್ಲಿ ಕನಿಷ್ಠ ಒಂದು ಖೇಲೋ ಇಂಡಿಯಾ ಕ್ರೀಡಾ ಕೇಂದ್ರ ತೆರೆಯುವುದು ಭಾರತ ಸರ್ಕಾರದ ಉದ್ದೇಶವಾಗಿದೆ. ದೇಶದ ತಳಮಟ್ಟದಲ್ಲಿರುವ ಕ್ರೀಡಾಪ್ರತಿಭೆಗಳನ್ನು ಗುರುತಿಸಿ ಬೇರು ಹಂತದಲ್ಲೇ ಅವರಿಗೆ ಕ್ರೀಡಾ ವಾತಾವರಣವನ್ನು ಕಲ್ಪಿಸುವ ಮೂಲಕ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಕೇಂದ್ರ ಸರ್ಕಾರವು ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಿದೆ. 

2028ರ ಒಲಿಂಪಿಕ್ಸ್‌ ವೇಳೆಗೆ ಪದಕ ಪಟ್ಟಿಯಲ್ಲಿ ಭಾರತ ದೇಶವು ಟಾಪ್ 10 ಒಳಗೆ ಸ್ಥಾನ ಪಡೆಯುವಂತೆ ನಮ್ಮ ಮುಖ್ಯ ಗುರಿಯಾಗಿದೆ. ಈ ಗುರಿ ಸಾಕಾರವಾಗಬೇಕಿದ್ದರೆ, ದೇಶದ ಕ್ರೀಡಾ ಪ್ರತಿಭೆಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಪ್ರೋತ್ಸಾಹಿಸಬೇಕಾಗುತ್ತದೆ. ಜಿಲ್ಲಾ ಮಟ್ಟದಲ್ಲೇ ಖೇಲೋ ಇಂಡಿಯಾ ಕೇಂದ್ರಗಳನ್ನು ತೆರೆದು ಉತ್ತಮ ಸೌಕರ್ಯ ಹಾಗೂ ಅನುಭವಿ ಕೋಚ್‌ಗಳನ್ನು ಒದಗಿಸುವುದು ನಮ್ಮ ಉದ್ಧೇಶವಾಗಿದೆ. ಸರಿಯಾದ ಪ್ರತಿಭಾನ್ವಿತ ಮಕ್ಕಳನ್ನು, ಸರಿಯಾದ ಸಮಯದಲ್ಲಿ ಸರಿಯಾದ ಕ್ರೀಡೆಯನ್ನು ಆಯ್ಕೆ ಮಾಡಿಕೊಳ್ಳಲು ಈ ಖೇಲೋ ಇಂಡಿಯಾ ಕೇಂದ್ರಗಳು ಸಹಕಾರಿಯಾಗಲಿದೆ ಎನ್ನುವ ವಿಶ್ವಾಸವಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್; ಟೂರ್ನಿಯ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ
ಸತತ ಎರಡನೇ ಬಾರಿಗೆ ಭಾರತ ಮಹಿಳೆಯರಿಗೆ ಒಲಿದ ಕಬಡ್ಡಿ ವಿಶ್ವಕಪ್ ಚಾಂಪಿಯನ್ ಪಟ್ಟ!