
ಲಂಡನ್(ಜೂ.24): ಭಾರತದ ರಾಮ್ಕುಮಾರ್ ರಾಮನಾಥನ್ ವಿಂಬಲ್ಡನ್ ಅರ್ಹತಾ ಸುತ್ತಿನ ಪಂದ್ಯದಲ್ಲಿ ಇನ್ನೊಂದು ಗೆಲುವು ದಾಖಲಿಸಿದರೆ ಚೊಚ್ಚಲ ಬಾರಿಗೆ ಗ್ರ್ಯಾನ್ಸ್ಲಾಂ ಪ್ರಧಾನ ಸುತ್ತಿಗೆ ಅರ್ಹತೆಗಿಟ್ಟಿಸಿಕೊಳ್ಳಲಿದ್ದಾರೆ. ಅರ್ಹತಾ ಸುತ್ತಿನ ಎರಡನೇ ಪಂದ್ಯದಲ್ಲಿ ಅರ್ಜಿಂಟೀನಾದ ಥಾಮಸ್ ಎಕ್ವೆರ್ರಿ ಎದುರು 6-3, 6-4 ನೇರ ಸೆಟ್ಗಳಲ್ಲಿ ಭಾರತದ ರಾಮ್ಕುಮಾರ್ ರಾಮನಾಥನ್ ಗೆಲುವು ದಾಖಲಿಸಿದ್ದಾರೆ.
ವಿಂಬಲ್ಡನ್ ಅರ್ಹತಾ ಸುತ್ತು: ಅಂಕಿತಾ ರೈನಾ ಔಟ್
ಭಾರತದ ಟೆನಿಸ್ ಆಟಗಾರ್ತಿ ಅಂಕಿತಾ ರೈನಾ ವಿಂಬಲ್ಡನ್ ಗ್ರ್ಯಾನ್ ಸ್ಲಾಂ ಟೂರ್ನಿಯ ಪ್ರಧಾನ ಸುತ್ತಿಗೇರುವಲ್ಲಿ ವಿಫಲರಾಗಿದ್ದಾರೆ.
ಡೆಲ್ಲಿ ಕ್ರೀಡಾ ವಿವಿ ಉಪಕುಲಪತಿಯಾಗಿ ಒಲಿಂಪಿಕ್ ಪದಕ ವಿಜೇತೆ ಕರ್ಣಂ ಮಲ್ಲೇಶ್ವರಿ ನೇಮಕ
ಮಹಿಳಾ ಸಿಂಗಲ್ಸ್ ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿ ಅಮೆರಿಕದ ವಾರ್ವರಾ ಲೆಪ್ಚೆನ್ಕೋ ವಿರುದ್ಧ 3-6, 6-7 ಸೆಟ್ಗಳಲ್ಲಿ ಸೋಲುಂಡರು. ಪುರುಷರ ಸಿಂಗಲ್ಸ್ನ ಅರ್ಹತಾ ಸುತ್ತಿನಲ್ಲಿ ಪ್ರಜ್ನೇಶ್ ಗುಣೇಶ್ವರನ್ ಸಹ ಮೊದಲ ಪಂದ್ಯದಲ್ಲೇ ಸೋತು ಹೊರಬಿದ್ದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.