ಕಿಸಾನ್ ಸಮ್ಮಾನ್ ಯೋಜನೆ: 1 ಸಾವಿರ ಕೋಟಿ ರೂ ರಿಲೀಸ್, ಚೆಕ್ ಮಾಡಿಕೊಳ್ಳುವಂತೆ ರೈತರಿಗೆ ಮನವಿ

Published : Aug 16, 2020, 04:13 PM IST
ಕಿಸಾನ್ ಸಮ್ಮಾನ್ ಯೋಜನೆ: 1 ಸಾವಿರ ಕೋಟಿ ರೂ ರಿಲೀಸ್, ಚೆಕ್ ಮಾಡಿಕೊಳ್ಳುವಂತೆ ರೈತರಿಗೆ ಮನವಿ

ಸಾರಾಂಶ

ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಹಣ ಜಮೆ ಮಾಡಲಾಗಿದ್ದು, ರೈತರು ಖಾತೆ ಚೆಕ್ ಮಾಡಿಕೊಳ್ಳುವಂತೆ ಸಚಿವ ಬಿಸಿ ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ

ಬೆಂಗಳೂರು, (ಆ.16): ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 1 ಸಾವಿರ ಕೋಟಿ ರೂ.ಗಳನ್ನು 50 ಲಕ್ಷ ರೈತರಿಗೆ ಬಿಡುಗಡೆಯಾಗಿದ್ದು, ಕಳೆದ ಶನಿವಾರದಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ ಎಂದು ಕೃಷಿ ಸಚಿವ  ಬಿಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯದ ರೈತ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಬಿಸಿ ಪಾಟೀಲ್, 2019-20ನೇ ಸಾಲಿನ ಬೆಳೆ ವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದ್ದು, ವಿಮೆಗಾಗಿ ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವುದಾಗಲೀ ಚಿಂತಿಸುವ ಅವಶ್ಯಕತೆಯಿಲ್ಲ. ರೈತ ಬಾಂಧವರು ತಮ್ಮ ಖಾತೆಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ.

ಬಂದೇ ಬಾರಿಗೆ ಸಿಎಂ, ಪಿಎಂನಿಂದ ರೈತರಿಗೆ ಭರ್ಜರಿ ಗಿಫ್ಟ್...!

 ರಾಜ್ಯದಲ್ಲಿ ಯೂರಿಯಾ ಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ಕಳೆದ ಸಾಲಿಗಿಂತ ಈ ವರ್ಷ ಶೇ.25 ರಷ್ಟು ಹೆಚ್ಚಿನದಾಗಿ ಬಿತ್ತನೆಯಾಗಿದೆ. ಆದ್ದರಿಂದ ಈ ವರ್ಷ 65 ಸಾವಿರ ಮೆಟ್ರಿಕ್ ಟನ್ ಯೂರಿಯಾ ಹೆಚ್ಚಿನದಾಗಿ ಪೂರೈಕೆಯಾಗುತ್ತಿದೆ. ಈ ವಾರ 37 ಸಾವಿರ ಟನ್ ಯೂರಿಯಾ ಸರಬರಾಜು ಆಗುತ್ತಿದೆ ಎಂದು ಮಾಹಿತಿ ನೀಡಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್‌ ದೆವ್ವದ ಮನೆ, ದಿನಕ್ಕೊಂದು ಬಿಳಿ-ಕರಿ ದೆವ್ವ ಹೊರ ಬರ್ತಿವೆ: ಆರ್.ಅಶೋಕ್ ವ್ಯಂಗ್ಯ
ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಶೀಘ್ರ ಜಾರಿ: ಸಚಿವ ಶಿವರಾಜ ತಂಗಡಗಿ