ಸಿದ್ದರಾಮೋತ್ಸವಕ್ಕೆ ಹರಿದು ಬಂದ 10 ಲಕ್ಷ ಜನ: ಜನಸ್ತೋಮ ನೋಡಿ ಕಾಂಗ್ರೆಸ್ಸಿಗರಿಗೇ ಅಚ್ಚರಿ..!

Published : Aug 04, 2022, 05:20 AM IST
ಸಿದ್ದರಾಮೋತ್ಸವಕ್ಕೆ ಹರಿದು ಬಂದ 10 ಲಕ್ಷ ಜನ: ಜನಸ್ತೋಮ ನೋಡಿ ಕಾಂಗ್ರೆಸ್ಸಿಗರಿಗೇ ಅಚ್ಚರಿ..!

ಸಾರಾಂಶ

ಕಾರ್ಯಕ್ರಮ ಸ್ಥಳಕ್ಕೆ ತಲುಪಲಾಗದೆ ಸಾವಿರಾರು ಮಂದಿ ನಡುದಾರಿಯಿಂದಲೇ ವಾಪಸ್‌

ದಾವಣಗೆರೆ(ಆ.04):  ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ರಾಜ್ಯ ವಿವಿಧ ಭಾಗಗಳಿಂದ ನದಿಗಳಂತೆ ಹರಿದು ಬಂದ ಜನ ಸಾಗರ ದಾವಣಗೆರೆ ಸೇರಿತ್ತು. ಕಣ್ಣಾಡಿಸಿದ ಕಡೆಯಲ್ಲಾ ಕಿ.ಮೀಗಟ್ಟಲೆ ಕಾಣುವ ಜನ ಸಮೂಹ. ಈ ಮೂಲಕ ರಾಜ್ಯ ರಾಜಕೀಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಜನ ಸೇರಿದ ಕಾರ್ಯಕ್ರಮ ಎಂಬುದಕ್ಕೆ ಸಿದ್ದರಾಮಯ್ಯ ಅಮೃತೋತ್ಸವ ಅಕ್ಷರಶಃ ಸಾಕ್ಷಿಯಾಗಿತ್ತು.

ಮಂಗಳವಾರ ರಾತ್ರಿ 50 ಸಾವಿರಕ್ಕೂ ಅಧಿಕ ಮಂದಿ, ಬೆಳಿಗ್ಗೆ 7 ಗಂಟೆಗೆ ಮೂರು ಲಕ್ಷಕ್ಕೂ ಅಧಿಕ ಮಂದಿ, ಬೆಳಿಗ್ಗೆ 10 ಗಂಟೆಗೆ ಐದು ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕ್ರಮ ನಡೆಯುವ ಮೈದಾನ ಸೇರಿದರು. ಆ ಬಳಿಕ ಟ್ರಾಫಿಕ್‌ ಜಾಮ್‌ ಆಗಿದ್ದರಿಂದ ಮಧ್ಯಾಹ್ನ 1 ಗಂಟೆವರೆಗೂ ಜನ ಆಗಮಿಸುತ್ತಲೇ ಇದ್ದರು. ಇನ್ನು ಕೆಲವೆಡೆ ಹೆಚ್ಚಿನ ಟ್ರಾಫಿಕ್‌ ಎಂದು ನೂರಾರು ವಾಹನಗಳಲ್ಲಿ ಹಿಂದಿರುಗಿದ್ದಾರೆ ಎನ್ನಲಾಗಿದೆ. ಕಾರ್ಯಕ್ರಮಕ್ಕೆ ಒಟ್ಟಾರೆ 10 ಲಕ್ಷ ಮಂದಿ ಆಗಮಿಸಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Siddaramotsava: ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ: ಸಿ.ಟಿ.ರವಿ ಪ್ರಶ್ನೆ

ಮಂಗಳವಾರ ಸಂಜೆ ರಾಜ್ಯದ ವಿವಿಧ ಊರುಗಳಿಂದ ಹೊರಟಿದ್ದ ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್‌ ಕಾರ್ಯಕರ್ತರ ಪೈಕಿ ಲಕ್ಷಾಂತರ ಮಂದಿ ಮಧ್ಯರಾತ್ರಿ ವೇಳೆಗೆ ದಾವಣಗೆರೆ ತಲುಪಿದ್ದರು. ಆ ವೇಳೆಗೆ ನೇರವಾಗಿ ವೇದಿಕೆ ಇದ್ದ ಶಾಮನೂರು ಪ್ಯಾಲೆಸ್‌ ಮೈದಾನ ತಲುಪಿ ಅಲ್ಲಿಯೇ ಬೀಡುಬಿಟ್ಟಿದ್ದರು. ಬೆಳಕು ಹರಿಯುತ್ತಿದ್ದಂತೆ ಪುಣೆ ಬೆಂಗಳೂರು ಹೆದ್ದಾರಿ ಒಂದು ದಿಕ್ಕಿನಿಂದ ಉತ್ತರ ಕರ್ನಾಟಕದ ಗದಗ, ವಿಜಯಪುರ, ಹುಬ್ಬಳ್ಳಿ ಧಾರವಾಡ, ಕಲಬುರಗಿ, ಬಳ್ಳಾರಿ, ಬೆಳಗಾವಿ, ಬೀದರ್‌ ಜಿಲ್ಲೆಗಳಿಂದ, ಮತ್ತೊಂದು ದಿಕ್ಕಿನಿಂದ ದಕ್ಷಿಣ ಕರ್ನಾಟಕದ ಮೈಸೂರು, ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಂದ ಸಾಗರೋಪದಾದಿಯಲ್ಲಿ ಜನ ಆಗಮಿಸಿದರು.

ಐತಿಹಾಸಿಕ ದಾಖಲೆ:

ಕಾಂಗ್ರೆಸ್‌ ಹಿರಿಯ ನಾಯಕರಾದ ಎಚ್‌.ಕೆ.ಪಾಟೀಲ್‌, ವೀರಪ್ಪ ಮೊಯ್ಲಿ, ರಮೇಶ್‌ ಕುಮಾರ್‌, ಬಿ.ಕೆ.ಹರಿಪ್ರಸಾದ್‌ ಅವರು ಕಾರ್ಯಕ್ರಮದ ಜನಸ್ತೋಮ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಲ್ಲದೆ ತಮ್ಮ ಭಾಷಣಗಳಲ್ಲಿಯೂ ನಮ್ಮ ರಾಜಕೀಯ ಇತಿಹಾಸದಲ್ಲಿ ಇಷ್ಟೊಂದು ಜನ ಸೇರಿದ್ದು ನೋಡಿಲ್ಲ ಎಂದು ಉಲ್ಲೇಖಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!