ಸಿಎಂ, ಕೃಷಿ ಸಚಿವರ ಜಿಲ್ಲೆಯಲ್ಲೇ 112 ರೈತರ ಆತ್ಮಹತ್ಯೆ; ಗುಂಡೂರಾವ್ ಗರಂ

Published : Oct 22, 2022, 03:05 PM ISTUpdated : Oct 22, 2022, 03:07 PM IST
ಸಿಎಂ, ಕೃಷಿ ಸಚಿವರ ಜಿಲ್ಲೆಯಲ್ಲೇ 112 ರೈತರ ಆತ್ಮಹತ್ಯೆ; ಗುಂಡೂರಾವ್ ಗರಂ

ಸಾರಾಂಶ

ಸಿಎಂ ಬೊಮ್ಮಾಯಿ ಮತ್ತು ಕೃಷಿ ಸಚಿವರ ಜಿಲ್ಲೆಯಲ್ಲೇ 112ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಉಳಿದ ಜಿಲ್ಲೆಗಳ ಸ್ಥಿತಿ ಹೇಗಿರಬಹುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಹಾವೇರಿ (ಅ.22) : ಸಿಎಂ ಬೊಮ್ಮಾಯಿ ಮತ್ತು ಕೃಷಿ ಸಚಿವರ ಜಿಲ್ಲೆಯಲ್ಲೇ 112ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಉಳಿದ ಜಿಲ್ಲೆಗಳ ಸ್ಥಿತಿ ಹೇಗಿರಬಹುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಈ ಸರ್ಕಾರದಿಂದ ರೈತರ ಉದ್ಧಾರ ಎಷ್ಟಾಗಿದೆ ಎಂಬುದಕ್ಕೆ ಈ ಆತ್ಮಹತ್ಯೆಗಳೇ ಸಾಕ್ಷಿ ಎಂದಿರುವ ಅವರು, ರಾಜ್ಯದ ಉಳಿದ ಜಿಲ್ಲೆಗಳ ಅಂಕಿ ಅಂಶ ತೆಗೆದರೆ ಬೊಮ್ಮಾಯಿ ಸರ್ಕಾರವೇ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದಿದ್ದಾರೆ.

ಹಾವೇರಿಯಲ್ಲಿ ಕಳೆದ 10 ತಿಂಗಳಲ್ಲಿ ಬೆಳೆಹಾನಿ ಹಾಗೂ ಸಾಲಬಾಧೆಗೆ 112 ರೈತರು ಆತ್ಮಹತ್ಯೆಗೆ ಶರಣಾಗಿರುವುದು ಗಂಭೀರವಾದ ವಿಷಯ ಎಂದಿರುವ ಅವರು  ಈ ಸರ್ಕಾರದಲ್ಲಿ ರೈತರ ಜೀವನ ತುಂಬಾ ಕಷ್ಟಕರವಾಗಿದೆ. ಸಿಎಂ, ಕೃಷಿ ಸಚಿವರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿನ ರೈತರನ್ನೇ ಉದ್ಧಾರ ಮಾಡಲಾಗದವರು. ಈ ರಾಜ್ಯದ ಜನರನ್ನು ಉದ್ಧಾರ ಮಾಡುತ್ತಾರಾ? ಬಿಜೆಪಿ ಸರ್ಕಾರ ಬಂದ ಬಳಿಕ ರೈತರ ಬದುಕು ಅಸಹನೀಯವಾಗಿದೆ. ಹೀಗಾಗಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಕೆಶಿ ವಿರುದ್ದ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್