ಸಂಪುಟದಲ್ಲಿ ಈಗಲೂ 12 ಜಿಲ್ಲೆಗಿಲ್ಲ ಪ್ರಾತಿನಿಧ್ಯ

Kannadaprabha News   | Asianet News
Published : Jan 14, 2021, 10:17 AM ISTUpdated : Jan 14, 2021, 10:50 AM IST
ಸಂಪುಟದಲ್ಲಿ ಈಗಲೂ 12 ಜಿಲ್ಲೆಗಿಲ್ಲ ಪ್ರಾತಿನಿಧ್ಯ

ಸಾರಾಂಶ

ಬೆಂಗಳೂರಿಗೆ 8, ಬೆಳಗಾವಿಗೆ 5, ಹಾವೇರಿಗೆ 3, ಶಿವಮೊಗ್ಗಕ್ಕೆ 2 ಸಚಿವರು| ದಾವಣಗೆರೆ, ಕಲಬುರಗಿ, ಮೈಸೂರು ಸೇರಿ 12 ಜಿಲ್ಲೆಗೆ ಒಬ್ಬರೂ ಇಲ್ಲ| 

ಬೆಂಗಳೂರು(ಜ.14):  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ಬಹುತೇಕ ಭರ್ತಿಯಾದರೂ ಸುಮಾರು 12 ಜಿಲ್ಲೆಗಳಿಗೆ ಈಗಲೂ ಪ್ರಾತಿನಿಧ್ಯ ದೊರೆತಿಲ್ಲ.

"

ರಾಜಕೀಯ ಪ್ರಭಾವ ಹೊಂದಿರುವ ರಾಜಧಾನಿ ಬೆಂಗಳೂರು ನಗರ ಜಿಲ್ಲೆ ಉಪಮುಖ್ಯಮಂತ್ರಿ ಸೇರಿದಂತೆ ಎಂಟು ಸಚಿವ ಸ್ಥಾನಗಳ ಮೂಲಕ ಸಿಂಹಪಾಲು ಪಡೆದಿದೆ. ಇತ್ತ ಸದಾ ರಾಜಕೀಯ ತಂತ್ರಗಾರಿಕೆಯಿಂದ ಸದ್ದು ಮಾಡುವ ಬೆಳಗಾವಿ ಜಿಲ್ಲೆ ಸಹ ಉಪಮುಖ್ಯಮಂತ್ರಿ ಸೇರಿ ಐವರು ಸಚಿವರನ್ನು ದಕ್ಕಿಸಿಕೊಂಡಿದೆ. ಇದರ ನಂತರ ಹಾವೇರಿ ಜಿಲ್ಲೆಯ ಮೂವರು ಮಂತ್ರಿಗಳಾಗಿದ್ದಾರೆ. ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸೇರಿ ಇಬ್ಬರಿದ್ದಾರೆ. ಬಾಗಲಕೋಟೆಯಲ್ಲೂ ಒಬ್ಬ ಉಪಮುಖ್ಯಮಂತ್ರಿ ಹಾಗೂ ಒಬ್ಬ ಸಚಿವರಿದ್ದಾರೆ.

ಆದರೆ ಏಳು ಶಾಸಕರಿರುವ ದಾವಣಗೆರೆ, ಕಲುಬರಗಿ, ಮಡಿಕೇರಿ, ಮೈಸೂರು, ಉಡುಪಿ, ಚಿಕ್ಕಮಗಳೂರು, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಈ ಬಾರಿಯೂ ನಿರಾಸೆ ಮೂಡಿದೆ. ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿ ಶಾಸಕರಿಲ್ಲದಿದ್ದರೂ ವಿಧಾನಪರಿಷತ್‌ ಸದಸ್ಯರಿಗೆ ಅವಕಾಶ ಕೊಡಲಾಗಿದೆ.

ಸಂಪುಟಕ್ಕೆ ನೂತನ ಸಚಿವರ ಎಂಟ್ರಿ: ಯಾರಿಗೆ ಯಾವ ಖಾತೆ?

ಪ್ರಾತಿನಿಧ್ಯ ಸಿಕ್ಕಿದ ಜಿಲ್ಲೆಗಳು:

ಶಿವಮೊಗ್ಗ- ಬಿ.ಎಸ್‌.ಯಡಿಯೂರಪ್ಪ, ಕೆ.ಎಸ್‌.ಈಶ್ವರಪ್ಪ. ಬೆಂಗಳೂರು ನಗರ- ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಆರ್‌.ಅಶೋಕ್‌, ಎಸ್‌.ಸುರೇಶ್‌ ಕುಮಾರ್‌, ವಿ.ಸೋಮಣ್ಣ, ಕೆ.ಗೋಪಾಲಯ್ಯ, ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವರಾಜ್‌, ಅರವಿಂದ್‌ ಲಿಂಬಾವಳಿ. ಹಾವೇರಿ- ಬಸವರಾಜ ಬೊಮ್ಮಾಯಿ, ಬಿ.ಸಿ.ಪಾಟೀಲ್‌, ಎಸ್‌.ಶಂಕರ್‌. ಉಡುಪಿ- ಕೋಟ ಶ್ರೀನಿವಾಸ ಪೂಜಾರಿ. ದಕ್ಷಿಣ ಕನ್ನಡ- ಎಸ್‌.ಅಂಗಾರ. ತುಮಕೂರು- ಜೆ.ಸಿ.ಮಾಧುಸ್ವಾಮಿ, ಗದಗ- ಸಿ.ಸಿ.ಪಾಟೀಲ್‌. ಬೀದರ್‌- ಪ್ರಭು ಚವ್ಹಾಣ್‌. ಬೆಳಗಾವಿ- ಲಕ್ಷಣ್‌ ಸವದಿ, ಶಶಿಕಲಾ ಜೊಲ್ಲೆ, ರಮೇಶ್‌ ಜಾರಕಿಹೊಳಿ, ಉಮೇಶ್‌ ಕತ್ತಿ, ಶ್ರೀಮಂತ್‌ ಪಾಟೀಲ್‌. ಬಳ್ಳಾರಿ-ಆನಂದ್‌ ಸಿಂಗ್‌. ಧಾರವಾಡ- ಜಗದೀಶ್‌ ಶೆಟ್ಟರ್‌. ಚಿತ್ರದುರ್ಗ- ಬಿ.ಶ್ರೀರಾಮುಲು. ಚಿಕ್ಕಬಳ್ಳಾಪುರ- ಡಾ.ಕೆ.ಸುಧಾಕರ್‌. ಮಂಡ್ಯ-ನಾರಾಯಣಗೌಡ, ಉತ್ತರ ಕನ್ನಡ- ಶಿವರಾಮ್‌ ಹೆಬ್ಬಾರ್‌. ರಾಮನಗರ- ಸಿ.ಪಿ.ಯೋಗೇಶ್ವರ್‌. ಬಾಗಲಕೋಟೆ- ಗೋವಿಂದ ಕಾರಜೋಳ, ಮುರುಗೇಶ್‌ ನಿರಾಣಿ. ಬೆಂಗಳೂರು ಗ್ರಾಮಾಂತರ-ಎಂ.ಟಿ.ಬಿ ನಾಗರಾಜ್‌.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!