ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ

Kannadaprabha News   | Kannada Prabha
Published : Feb 12, 2026, 06:18 AM IST
congress

ಸಾರಾಂಶ

ಒಂದೆಡೆ ಮುಂದುವರೆದ ನಾಯಕತ್ವ ಗೊಂದಲ, ಮತ್ತೊಂದೆಡೆ ಬಜೆಟ್‌ ಸಿದ್ಧತೆ, ಇದರ ನಡುವೆಯೇ ಆಡಳಿತ ಪಕ್ಷ ಕಾಂಗ್ರೆಸ್‌ನ ಸುಮಾರು 13ಕ್ಕೂ ಹೆಚ್ಚು ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರು ವಿದೇಶ ಪ್ರವಾಸಕ್ಕೆ ಸಜ್ಜಾಗಿದ್ದಾರೆ.

ಬೆಂಗಳೂರು : ಒಂದೆಡೆ ಮುಂದುವರೆದ ನಾಯಕತ್ವ ಗೊಂದಲ, ಮತ್ತೊಂದೆಡೆ ಬಜೆಟ್‌ ಸಿದ್ಧತೆ, ಇದರ ನಡುವೆಯೇ ಆಡಳಿತ ಪಕ್ಷ ಕಾಂಗ್ರೆಸ್‌ನ ಸುಮಾರು 13ಕ್ಕೂ ಹೆಚ್ಚು ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರು ವಿದೇಶ ಪ್ರವಾಸಕ್ಕೆ ಸಜ್ಜಾಗಿದ್ದಾರೆ.

ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ನೇತೃತ್ವದಲ್ಲಿ 13ಕ್ಕೂ ಹೆಚ್ಚು ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರು ಇದೇ 18ರಿಂದ ಮಾರ್ಚ್‌ 3ರವರೆಗೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ಪ್ರವಾಸ ಕೈಗೊಂಡಿದ್ದಾರೆ. ಸರ್ಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದೇ ಪ್ರವಾಸಕ್ಕೆ ಹೊರಟಿದ್ದಾರೆ ಎಂದು ತಿಳಿದು ಬಂದಿದೆ.

ಪ್ರವಾಸಕ್ಕೆ ತೆರಳುತ್ತಿರುವ ಶಾಸಕರ ಪಟ್ಟಿ

ಪ್ರವಾಸಕ್ಕೆ ತೆರಳುತ್ತಿರುವ ಶಾಸಕರ ಪಟ್ಟಿಯಲ್ಲಿ ಎಚ್‌.ಡಿ.ತಮ್ಮಯ್ಯ, ಹಂಪನಗೌಡ ಬಾದರ್ಲಿ, ಬಿ.ದೇವೇಂದ್ರಪ್ಪ, ಯಶವಂತರಾಯಗೌಡ ಪಾಟೀಲ್‌, ರಘುಮೂರ್ತಿ, ಬಿ.ಎಂ.ನಾಗರಾಜ, ಜೆ.ಟಿ.ಪಾಟೀಲ್‌, ಅಲ್ಲಮಪ್ರಭು ಪಾಟೀಲ್‌, ಸಿ.ಪುಟ್ಟರಂಗಶೆಟ್ಟಿ, ಬಸನಗೌಡ ಬಾದರ್ಲಿ, ಎ.ಆರ್‌.ಕೃಷ್ಣಮೂರ್ತಿ, ಬಸನಗೌಡ ತುರುವಿಹಾಳ್‌, ಎನ್‌.ಎಚ್‌.ಕೋನರೆಡ್ಡಿ ಸೇರಿದಂತೆ ಸುಮಾರು 13 ಶಾಸಕರು, ಎಂಎಲ್‌ಸಿಗಳ ಹೆಸರು ಹರಿದಾಡುತ್ತಿದೆ. ಈ ಮಧ್ಯೆ, ಕೋನರೆಡ್ಡಿ ಅವರು ತಾವು ಪ್ರವಾಸಕ್ಕ ಹೋಗುತ್ತಿಲ್ಲ ಎಂದು ಹೇಳಿದ್ದಾರೆ.

ಸ್ವಂತ ಖರ್ಚಿನಲ್ಲಿ ಪ್ರವಾಸ: ಸಿಎಂ

ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅವರ ದುಡ್ಡಲ್ಲಿ ಅವರು ಹೋದರೆ ತಪ್ಪೇನು? ಬೇಡ ಅನ್ನಲಾಗುತ್ತಾ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಇಂದು ಬಾಂಗ್ಲಾ ಚುನಾವಣೆ : ಹಸೀನಾ ಪಕ್ಷಕ್ಕೆ ನಿರ್ಬಂಧ
Vande Mataram: ವಂದೇ ಮಾತರಂ ಗೀತೆಗೆ ಬುನಾದಿಹಾಕಿದ್ದೇ ಕಾಂಗ್ರೆಸ್‌ ಪಕ್ಷ ಎಂದ ಡಿಸಿಎಂ