ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಮಾಹಿತಿ : 16 ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ

Kannadaprabha News   | Asianet News
Published : Sep 16, 2021, 11:03 AM ISTUpdated : Sep 16, 2021, 12:40 PM IST
ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಮಾಹಿತಿ : 16 ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ

ಸಾರಾಂಶ

ರಾಜ್ಯ ರಾಜಕೀಯ ವಲಯದಲ್ಲೊಂದು ಸ್ಫೋಟಕ ಸುದ್ದಿ  16 ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಶೀಘ್ರ ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು (ಸೆ.16): ಮೈಸೂರು ಚಾಮುಂಡೇಶ್ವರಿ ಶಾಸಕ ಜಿ ಟಿ ದೇವೇಗೌಡ ಅವರ ನಂತರ ಇದೀಗ ಶ್ರೀನಿವಾಸ ಗೌಡ ಅವರು ಕಾಂಗ್ರೆಸ್‌ ನಾಯಕರ ಸಂಪರ್ಕಕ್ಕೆ  ಬರುವುದರೊಂದಿಗೆ ಜೆಡಿಎಸ್‌ನಿಂದ ದೊಡ್ಡ ಮಟ್ಟದ ಶಾಸಕರ ಪಡೆಯೇ ಮುಂದಿನ ಚುನಾವಣೆ ವೇಳೆಗೆ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿದೆ. 

ಮೂಲಗಳ ಪ್ರಕರಾರ ಜೆಡಿಎಸ್ ಹಾಗು ಬಿಜೆಪಿಯಿಂದ ಸುಮಾರು 16 ಶಾಸಕರು  ಈಗಾಗಲೇ ಕೆಪಿಸಿಸಿ ಅಧ್ಯಕ್ಷರ ಸಂಪರ್ಕದಲ್ಲಿದ್ದಾರೆ. ಟಿಕೆಟ್ ದೊರೆಯುವ  ಖಾತ್ರಿ ದೊರೆತರೆ ಇವರಲ್ಲಿ ಬಹುತೇಕ ಮಂದಿ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಆಪರೇಷನ್ ಜೆಡಿಎಸ್ : ಇಬ್ಬರು ಮುಖಂಡರು ಕಾಂಗ್ರೆಸ್‌ಗೆ

ಕೋಲಾರ ಶಾಸಕ ಶ್ರೀನಿವಾಸಗೌಡ ಬುಧವಾರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಒಲವು ತೋರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದಾರೆ.   2013 ರಲ್ಲಿ ಜೆಡಿಎಸ್ ಸೇರಿದ್ದ ಶ್ರೀನಿವಾಸಗೌಡ ಇದೀಗ ಕಾಂಗ್ರೆಸ್ ಸೇರಲು ಮತ್ತೊಮ್ಮೆ ಒಲವು ತೋರಿಸಿದ್ದಾರೆ.

ಈ ಮೂಲಕ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ವಿಚಾರ ತಲ್ಲಣವನ್ನೇ ಉಂಟು ಮಾಡುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌
ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌