ಮೊದಲ ದಿನವೇ ಅಧಿವೇಶನಕ್ಕೆ ಕೊರೋನಾ ಶಾಕ್: ಅನಂತ್ ಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಸೋಂಕು

Published : Sep 14, 2020, 04:10 PM ISTUpdated : Sep 14, 2020, 04:12 PM IST
ಮೊದಲ ದಿನವೇ ಅಧಿವೇಶನಕ್ಕೆ ಕೊರೋನಾ ಶಾಕ್: ಅನಂತ್ ಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಸೋಂಕು

ಸಾರಾಂಶ

ಇಂದಿನಿಂದ ಮುಂಗಾರು ಸಂಸತ್ ಅಧಿವೇಶನ ಆರಂಭವಾಗಿದೆ. ಆದ್ರೆ, ಮೊದಲ ದಿನವೇ ಅಧಿವೇಶನಕ್ಕೆ ಕೊರೋನಾ ಶಾಕ್ ಕೊಟ್ಟಿದೆ.

ನವದೆಹಲಿ, (ಸೆ.14): ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ, ಸೇರಿದಂತೆ  ಒಟ್ಟು 17  ಸಂಸದರಿಗೆ ಕೋವಿಡ್ -19 ಸೋಂಕು ತಾಗಿರುವುದು ದೃಢವಾಗಿದೆ.

 ಎಎನ್ ಐ ಈ ಬಗ್ಗೆ ವರದಿ ಮಾಡಿದ್ದು, ಮೀನಾಕ್ಷಿ ಲೇಖಿ, ಅನಂತ್ ಕುಮಾರ್ ಹೆಗಡೆ, ಪ್ರವೇಶ್ ಸಾಹೇಬ್ ಸಿಂಗ್ ಸೇರಿದಂತೆ 17 ಮಂದಿ ಸಂಸದರಿಗೆ ಕೋವಿಡ್ ಸೋಂಕು ದೃಢವಾಗಿದೆ ಎಂದು ತಿಳಿಸಿದೆ.

ರಾಜ್ಯಸಭಾ ಸದಸ್ಯ ಅಶೋಕ ಗಸ್ತಿಗೆ ಕೊರೋನಾ ಪಾಸಿಟಿವ್‌

ಸಂಸದರು ಈಗಾಗಲೇ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಭಾನುವಾರ ಐವರು ಸಂಸದರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿತ್ತು. ಇದೀಗ ಮತ್ತೆ ಕೆಲ ಸಂಸದರಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.

ಇಂದಿನಿಂದ ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಿದೆ. ಸಾಮಾಜಿಕ ಅಂತರ ಕಲ್ಪಿಸುವ ಉದ್ದೇಶದಿಂದ ಸದನದಲ್ಲಿ ಆಸನ ವ್ಯವಸ್ಥೆಯನ್ನು ಅದಲು ಬದಲು ಮಾಡಲಾಗಿದೆ. ಕೆಲವರಿಗೆ ತಮ್ಮ ತಮ್ಮ ಕಚೇರಿಗಳಲ್ಲಿ ಮತ್ತು ಮೊಗಸಾಲೆಗಳಲ್ಲಿ ಕುಳಿತು ಸದನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ