ಮೊದಲ ಅಧಿವೇಶನ ದಿನವೇ ಸಂಘರ್ಷ; ಸದನದೊಳಗೆ ಮೊಳಗಿದ ಜೈಶ್ರೀರಾಮ್ ಘೋಷಣೆ!

Published : Jun 25, 2024, 04:56 AM IST
ಮೊದಲ ಅಧಿವೇಶನ ದಿನವೇ ಸಂಘರ್ಷ; ಸದನದೊಳಗೆ ಮೊಳಗಿದ ಜೈಶ್ರೀರಾಮ್ ಘೋಷಣೆ!

ಸಾರಾಂಶ

18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ಮೊದಲ ದಿನವೇ ‘ಸಂಘರ್ಷದ ಚಾಲನೆ’ ಸಿಕ್ಕಿದೆ. ಸಂಸತ್ತಿನಲ್ಲಿ ವಿಪಕ್ಷಗಳ ನಡವಳಿಕೆ, ತುರ್ತುಪರಿಸ್ಥಿತಿ ವಿಷಯ ಮುಂದಿಟ್ಟುಕೊಂಡು ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಚಾಟಿ ಬೀಸಿದ್ದಾರೆ.

ನವದೆಹಲಿ (ಜೂ.25): 18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ಮೊದಲ ದಿನವೇ ‘ಸಂಘರ್ಷದ ಚಾಲನೆ’ ಸಿಕ್ಕಿದೆ. ಸಂಸತ್ತಿನಲ್ಲಿ ವಿಪಕ್ಷಗಳ ನಡವಳಿಕೆ, ತುರ್ತುಪರಿಸ್ಥಿತಿ ವಿಷಯ ಮುಂದಿಟ್ಟುಕೊಂಡು ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಚಾಟಿ ಬೀಸಿದ್ದಾರೆ. ಇದಕ್ಕೆ ಪ್ರತಿಯಾಗಿ ವಿಪಕ್ಷಗಳು ಕೂಡಾ ಸಂಸತ್‌ ಕಲಾಪಕ್ಕೆ ಪ್ರಧಾನಿ ಮೋದಿ ಗೈರು ವಿಷಯ ಪ್ರಸ್ತಾಪಿಸುವುದರ ಜೊತೆಗೆ, ಕಳೆದ 10 ವರ್ಷದಲ್ಲಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕಿಸುವ ಮೂಲಕ ತಿರುಗೇಟು ನೀಡಿವೆ. ಅಲ್ಲದೆ ಮೋದಿ ಪ್ರಮಾಣ ವಚನ ಸ್ವೀಕರಿಸುವಾಗ ಅವರಿಗೆ ಸಂವಿಧಾನದ ಪ್ರತಿ ತೋರಿಸುವ ಮೂಲಕ ಬಿಜೆಪಿ ಸಂವಿಧಾನ ತಿರುಚಲು ಯತ್ನಿಸುತ್ತಿದೆ ಎಂಬ ತನ್ನ ಆರೋಪವನ್ನು ಮತ್ತೆ ಎಲ್ಲರ ಎದುರು ತೆರೆದಿಡುವ ಯತ್ನ ಮಾಡಿವೆ.

ಅಧಿವೇಶನದ ಮೊದಲ ದಿನವೇ ಎನ್‌ಡಿಎ ಮೈತ್ರಿಕೂಟ ಮತ್ತು ಇಂಡಿಯಾ ಮೈತ್ರಿಕೂಟದ ಸದಸ್ಯರು ತೋರಿಸಿದ ಈ ವರ್ತನೆ, ಪ್ರಸಕ್ತ ಅಧಿವೇಶನದ ಉಳಿದ ಭಾಗ ಮತ್ತು ಮುಂದಿನ ದಿನಗಳಲ್ಲಿ ಸಂಸತ್ತು ಸಾಗಬಹುದಾದ ದಾರಿಯ ಸುಳಿವು ನೀಡಿದೆ.

ಅಧಿವೇಶನದ ಮೊದಲ ದಿನವೇ ರಾಹುಲ್ ಗಾಂಧಿ ಲೇಟ್; ರಾಷ್ಟ್ರಗೀತೆ ಮುಗಿದ ನಂತ್ರ ಎಂಟ್ರಿ 

ಸೋಮವಾರ ಕಲಾಪ ಆರಂಭಕ್ಕೂ ಮುನ್ನ ಸಂಸತ್ತಿನ ಹೊರಗೆ ಸುದ್ದಿಗಾರರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ, ‘ಸಂಸತ್ತಲ್ಲಿ ಸತ್ವ (ಚರ್ಚೆ) ಬೇಕು, ಗಲಾಟೆ ಅಲ್ಲ. ಈವರೆಗೂ ಪ್ರತಿಪಕ್ಷಗಳು ತಮ್ಮ ಕರ್ತವ್ಯದಲ್ಲಿ ವಿಫಲವಾಗಿವೆ. ಈಗಲಾದರೂ ಸುಧಾರಿಸಿಕೊಳ್ಳಲಿ’ ಎಂದರು. ಅಲ್ಲದೆ, ‘1975ರಲ್ಲಿ ಹೇರಲಾಗಿದ್ದ ತುರ್ತುಸ್ಥಿತಿಗೆ ಜೂ.25ರಂದು 50 ವರ್ಷ ಆಗಲಿದೆ. ತುರ್ತುಸ್ಥಿತಿಯು ದೇಶಕ್ಕೆ ಒಂದು ಕಪ್ಪುಚುಕ್ಕೆ. ಏಕೆಂದರೆ ಸಂವಿಧಾನವನ್ನೇ ಆಗ ಕಿತ್ತೆಸೆಯಲಾಗಿತ್ತು’ ಎಂದು ಅಂದಿನ ಇಂದಿರಾ ಗಾಂಧಿ ಸರ್ಕಾರವನ್ನು ಟೀಕಿಸಿದರು. ಇದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ರಾಜ್ಯಸಭೆ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕರು ತಿರುಗೇಟು ನೀಡಿ, ‘ಕಳೆದ 10 ವರ್ಷ ಅಘೋಷಿತ ತುರ್ತುಸ್ಥಿತಿ ಇತ್ತು’ ಎಂದು ಚಾಟಿ ಬೀಸಿದರು.

ಇದಿಷ್ಟು ಸಂಸತ್ತಿನ ಹೊರಗೆ ಆದರೆ ಸಂಸತ್ತಿನ ಒಳಗೂ ಕಾವೇರಿದ ವಾತಾವರಣ ಉಂಟಾಯಿತು. ಚುನಾವಣೆ ವೇಳೆ ಸಂವಿಧಾನ ತಿರುಚುವಿಕೆ ಬಗ್ಗೆ ವಾಕ್ಸಮರ ನಡೆದಿದ್ದನ್ನೇ ಕಾರಣವಾಗಿ ಇಟ್ಟುಕೊಂಡ ವಿಪಕ್ಷಗಳ ಸಂಸದರು ಪಾಕೆಟ್‌ ಗಾತ್ರದ ಚಿಕ್ಕ ಸಂವಿಧಾನ ಪುಸ್ತಕ ಹಿಡಿದೇ ಸಂಸತ್‌ ಸಭಾಂಗಣ ಪ್ರವೇಶಿಸಿದರು. ‘ನಾವು ಸಂವಿಧಾನ ರಕ್ಷಣೆ ಮಾಡುತ್ತೇವೆ’ ಎಂದು ಪ್ರತಿಜ್ಞೆಗೈದರು.

ಮತ್ತೆ ಅಳಿಯ ಆಕಾಶ್‌ ಆನಂದ್‌ ನನ್ನ ಉತ್ತರಾಧಿಕಾರಿ ಎಂದು ಘೋಷಿಸಿದ ಮಾಯಾವತಿ

ಬಳಿಕ ಮೋದಿ ಸಂಸತ್‌ ಸದಸ್ಯರಾಗಿ ‘ಶ್ರೀರಾಮ’ನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವಾಗ ರಾಹುಲ್‌ ಗಾಂಧಿಯೂ ಸೇರಿದಂತೆ ವಿಪಕ್ಷಗಳ ಬಹುತೇಕ ಸದಸ್ಯರು ಮೋದಿಯತ್ತ ಸಂವಿಧಾನದ ಪುಸ್ತಕವನ್ನು ಪ್ರದರ್ಶಿಸಿದರು. ಆಡಳಿತ ಪಕ್ಷಗಳ ಸದಸ್ಯರು ಜೈಶ್ರೀರಾಂ ಘೋಷಣೆಯನ್ನು ಕೂಗಿ ಗಮನ ಸೆಳೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!