ಮೋದಿ ಮಂಗಳೂರು ಸಮಾವೇಶಕ್ಕೆ 2 ಲಕ್ಷ ಜನ?

Published : Aug 28, 2022, 01:30 AM IST
ಮೋದಿ ಮಂಗಳೂರು ಸಮಾವೇಶಕ್ಕೆ 2 ಲಕ್ಷ ಜನ?

ಸಾರಾಂಶ

1 ಲಕ್ಷ ವಿವಿಧ ಯೋಜನೆಗಳ ಫಲಾನುಭವಿಗಳು, 1 ಲಕ್ಷ ಬಿಜೆಪಿ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ, 30 ಎಕರೆ ಪ್ರದೇಶದಲ್ಲಿ ವೇದಿಕೆ ಮತ್ತಿತರ ನಿರ್ಮಾಣ ಕಾರ್ಯ, 4 ಪ್ರವೇಶ ದ್ವಾರ ನಿರ್ಮಾಣ, ಪ್ರತ್ಯೇಕ ಹೆಲಿಪ್ಯಾಡ್‌

ಮಂಗಳೂರು(ಆ.28):  ಸೆ.2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಅವರು ಮಂಗಳೂರಿಗೆ ಆಗಮಿಸುವ ವೇಳೆ ಸುಮಾರು ಎರಡು ಲಕ್ಷ ಮಂದಿಯ ಐತಿಹಾಸಿಕ ಸಮಾವೇಶ ನಡೆಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ವಿಶಾಲ ಸಭಾಂಗಣ ನಿರ್ಮಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದೆ.

ಮೋದಿ ಕಾರ್ಯಕ್ರಮಕ್ಕೆ ಈ ಹಿಂದೆ ಒಂದು ಲಕ್ಷ ಫಲಾನುಭವಿಗಳನ್ನು ಸೇರಿಸಿ ಸಮಾವೇಶ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ಒಂದು ಲಕ್ಷ ಫಲಾನುಭವಿಗಳು ಹಾಗೂ ಮತ್ತೆ ಒಂದು ಲಕ್ಷ ಬಿಜೆಪಿ ಕಾರ್ಯಕರ್ತರು ಸೇರಿ 2 ಲಕ್ಷ ಮಂದಿಯನ್ನು ಸೇರಿಸುವ ಪ್ರಯತ್ನ ನಡೆಯುತ್ತಿದೆ. ಸಮಾವೇಶಕ್ಕಾಗಿ ಮಂಗಳೂರು ಹೊರ ವಲಯದ ಬಂಗ್ರಕೂಳೂರಿನ 30 ಎಕರೆ ಜಾಗದಲ್ಲಿ ಪ್ರಧಾನ ವೇದಿಕೆ ನಿರ್ಮಾಣ ಕಾರ್ಯ ಶನಿವಾರ ಆರಂಭವಾಗಿದೆ. ಈಗಾಗಲೇ ಇಲ್ಲಿ ಜಲ್ಲಿ, ಮಣ್ಣು ಮಿಶ್ರಣ ಮಾಡಿ ಜಾಗ ಸಮತಟ್ಟುಗೊಳಿಸಲಾಗಿದ್ದು, ವೇದಿಕೆ ನಿರ್ಮಾಣಕ್ಕೆ ಬೇಕಾದ ಸಲಕರಣೆಗಳನ್ನು ಸಿದ್ಧಗೊಳಿಸಲಾಗಿದೆ.

ಮಂಗಳೂರು: ಮೋದಿ ಸಮಾವೇಶಕ್ಕೆ ಮಳೆ ಭೀತಿ, ಕಾರ್ಯಕ್ರಮಕ್ಕೆ ವಿಶಾಲ ಜರ್ಮನ್‌ ಪೆಂಡಾಲ್‌ ಅಳವಡಿಕೆ

4 ಪ್ರವೇಶ ದ್ವಾರ: 

ಪ್ರಧಾನಿ ಕಾರ್ಯಕ್ರಮ ನಡೆಯುವ ಮೈದಾನಕ್ಕೆ ನಾಲ್ಕು ಪ್ರತ್ಯೇಕ ಪ್ರವೇಶ ದ್ವಾರಗಳನ್ನು ರಚಿಸಲಾಗುತ್ತಿದೆ. ಪ್ರಧಾನ ವೇದಿಕೆ, ಸಭಾಂಗಣ ಪ್ರವೇಶಕ್ಕೂ ಪ್ರತ್ಯೇಕ ಪ್ರವೇಶ ದ್ವಾರ ರಚಿಸಲಾಗುತ್ತಿದೆ. ಇದಲ್ಲದೆ ಇತರೆ ಪ್ರವೇಶ ದ್ವಾರಗಳನ್ನೂ ಮಾಡಲಾಗುತ್ತಿದೆ.

ಪ್ರತ್ಯೇಕ ಹೆಲಿಪ್ಯಾಡ್‌ ರಚನೆ: ಗೋಲ್ಡ್‌ಫಿಂಚ್‌ ಸಿಟಿ ಮೈದಾನದ ಪಕ್ಕದಲ್ಲೇ, ಹೊರಗೆ ಸ್ಟಾಕ್‌ ಎಕ್ಸ್‌ಚೇಂಜ್‌ ಹಿಂಭಾಗದಲ್ಲಿ ಮೂರು ಪ್ರತ್ಯೇಕ ಹೆಲಿಪ್ಯಾಡ್‌ ನಿರ್ಮಾಣವಾಗಲಿದೆ.ಅಲ್ಲದೆ ವಿಮಾನ ನಿಲ್ದಾಣದಿಂದ ಸಮಾವೇಶ ತಲುಪುವ ರಸ್ತೆಯನ್ನು ದುರಸ್ತಿ ಪಡಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರು ರಸ್ತೆ ಮಾರ್ಗ ಅಥವಾ ಹೆಲಿಕಾಪ್ಟರ್‌ ಮೂಲಕ ಸಮಾವೇಶಕ್ಕೆ ಆಗಮಿಸುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಭಾನುವಾರದಿಂದ ಹೆಲಿಪ್ಯಾಡ್‌ ನಿರ್ಮಾಣ ನಡೆಯಲಿದೆ.

ಮಾಜಿ ಸಿಎಂ ಬಿಎಸ್‌ವೈ ಭಾಗಿ?:

ಮಂಗಳೂರಲ್ಲಿ ನಡೆಯುವ ಪ್ರಧಾನಿ ಮೋದಿ ಅವರ ಪ್ರಥಮ ಸರ್ಕಾರಿ ಸಮಾವೇಶಕ್ಕೆ ಈ ಬಾರಿ ಮಾಜಿ ಸಿಎಂ ಯಡಿಯೂರಪ್ಪ ಆಗಮಿಸುವ ಸಾಧ್ಯತೆ ಇದೆ. ಇದು ಸರ್ಕಾರಿ ಕಾರ್ಯಕ್ರಮವಾದರೂ ಯಡಿಯೂರಪ್ಪ ಉಪಸ್ಥಿತಿ ಸಮಾವೇಶದ ಕಳೆ ಇನ್ನಷ್ಟು ಹೆಚ್ಚಿಸಲಿದೆ. ಪಕ್ಷಕ್ಕೂ ಹೆಚ್ಚಿನ ವರದಾನವಾಗಲಿದೆ ಎನ್ನುವುದು ಮುಖಂಡರೊಬ್ಬರ ಅನಿಸಿಕೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!