ಉಪಚುನಾವಣೆ : ಜೆಡಿಎಸ್‌ಗೆ 20 ಸ್ಟಾರ್‌ ಪ್ರಚಾರಕರು

By Kannadaprabha NewsFirst Published Oct 16, 2021, 8:08 AM IST
Highlights
  • ಸಿಂದಗಿ ಮತ್ತು ಹಾನಗಲ್‌ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಪಕ್ಷದ ಪರ ಪ್ರಚಾರಕ್ಕಾಗಿ 20 ಮಂದಿ ತಾರಾ ಪ್ರಚಾರಕರು
  •  ಚುನಾವಣೆಯಲ್ಲಿ ಗೆಲ್ಲುವ ಪಣತೊಟ್ಟ ಜೆಡಿಎಸ್‌ ನಿಂದ ನಿಯೋಜಿಸಿದೆ.

 ಬೆಂಗಳೂರು (ಅ.16):  ಸಿಂದಗಿ (Sindagi) ಮತ್ತು ಹಾನಗಲ್‌ (Hanagal) ವಿಧಾನಸಭಾ ಕ್ಷೇತ್ರಗಳ (Assembly Constituency) ಉಪಚುನಾವಣೆಗೆ (By Election) ಪಕ್ಷದ ಪರ ಪ್ರಚಾರಕ್ಕಾಗಿ 20 ಮಂದಿ ತಾರಾ ಪ್ರಚಾರಕರನ್ನು ಜೆಡಿಎಸ್‌ (JDS) ನಿಯೋಜಿಸಿದೆ.

ಇಂದಿನಿಂದ ಉಪಸಮರ ಕಣಕ್ಕೆ ರಂಗು: ಭರ್ಜರಿ ವಾಕ್ಸಮರ ಸಂಭವ!

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ (HD Devegowda), ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy), ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ (HK Kumaraswamy), ಜೆಡಿಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ಜಫ್ರುಲ್ಲಾ ಖಾನ್‌, ಮಾಜಿ ಸಚಿವರಾದ ಎಚ್‌.ಡಿ.ರೇವಣ್ಣ( HD Revanna), ಬಂಡೆಪ್ಪ ಕಾಶೆಂಪೂರ, ವೆಂಕಟರಾವ್‌ ನಾಡಗೌಡ, ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna), ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy), ಶಾಸಕರಾದ ಡಾ.ಕೆ.ಅನ್ನದಾನಿ, ಡಾ.ದೇವಾನಂದ ಚವ್ಹಾಣ್‌, ಬಿ.ಎಂ.ಫಾರೂಕ್‌, ರಾಜಾ ವೆಂಕಟಪ್ಪ ನಾಯಕ, ಮಾಜಿ ಶಾಸಕ ಎನ್‌.ಎಚ್‌.ಕೋನರೆಡ್ಡಿ, ಮುಖಂಡರಾದ ಬಿ.ಜಿ.ಪಾಟೀಲ್‌, ಮಲ್ಲಿಕಾರ್ಜುನ ಯಂಡಿಗೇರಿ, ನಾಜೀರ್‌ ಹುಸೇನ್‌ ಉಸ್ತಾದ್‌, ಸಯ್ಯದ್‌ ಮೋಹಿದ್‌ ಆಲ್ತಾಫ್‌, ರಾಜುಗೌಡ, ಬಿ.ಡಿ. ಪಾಟೀಲ್‌ ಇಂಡಿ ಅವರನ್ನು ಚುನಾವಣಾ ತಾರಾ ಪ್ರಚಾರಕರನ್ನಾಗಿ ನಿಯೋಜಿಲಾಗಿದೆ.

Mandya : JDS ಶಾಸಕರು, ಮುಖಂಡರ ಪಕ್ಷ ತೊರೆಯುವ ಸುಳಿವು ನೀಡಿ ಎಚ್ಚರಿಸಿದ ಮುಖಂಡ

ಸಿಂದಗಿ ಗೆಲ್ಲಲು ಗೌಡರ ಪ್ಲಾನ್

 

 ಸಿಂದಗಿ (Sindagi) ಕ್ಷೇತ್ರವನ್ನು ಉಳಿಸಿಕೊಳ್ಳಲು ಶಕ್ತಿ ಮೀರಿ ಪ್ರಯತ್ನಿಸಲಾಗುವುದು ಎಂದು ಜೆಡಿಎಸ್‌ (JDS) ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (HD Devegowda) ಹೇಳಿದರು.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನನ್ನ ಸಹಪಾಠಿಯಾಗಿದ್ದ ದಿವಂಗತ ಎಂ.ಸಿ.ಮನಗೂಳಿ (MC Managuli) ಅವರು ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಕ್ಷೇತ್ರಕ್ಕೆ ನಾನೂ ಸೇವೆ ಸಲ್ಲಿಸಿದ್ದೇನೆ. ಸಿಂದಗಿ ಕ್ಷೇತ್ರ ಉಳಿಸಿಕೊಳ್ಳಲು 9 ದಿನ ಇಲ್ಲಿಯೇ ಇದ್ದು ಗೆಲ್ಲಲು ಶ್ರಮಿಸಲಾಗುವುದು. ನನ್ನ ರಾಜಕೀಯ (Politics) ಜೀವನದಲ್ಲಿ ಜೀವನದ ಕೊನೆಯ ಘಟ್ಟದಲ್ಲಿ ಈ ಚುನಾವಣೆಯನ್ನು (Election) ಗೆಲ್ಲಲು ದೃಢವಾದ ಹೆಜ್ಜೆ ಇಡಲಾಗುವುದು. ಎಲ್ಲರ ಸಹಕಾರದಿಂದ ಜೆಡಿಎಸ್‌ (JDS) ಅಭ್ಯರ್ಥಿ ಗೆಲ್ಲಿಸಲು ಶ್ರಮ ಪಡಲಾಗುವುದು ಎಂದು ಹೇಳಿದರು.

ನಿಮ್ಮ ತಂದೆ ಕೂಡ ವಿಪಕ್ಷ ನಾಯಕರಾಗಿದ್ರು, ಅದು ಪುಟಗೋಸಿನಾ? ಎಚ್‌ಡಿಕೆಗೆ ಸಿದ್ದು ಗುದ್ದು

ಒಮ್ಮತದ ಅಭ್ಯರ್ಥಿ ಕಣಕ್ಕೆ:  ಎರಡು ದಿನ ಚರ್ಚೆ ನಡೆಸಿ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲಾಗಿದೆ. ಸಾರ್ವಜನಿಕ ಭಾಷಣಕ್ಕಷ್ಟೇ ಸೀಮಿತವಾಗದೆ ಗ್ರಾಮಗಳಿಗೆ ತೆರಳಿ ರೈತರು (Farmers), ಮಹಿಳೆಯರು, ಯುವ ಜನತೆಗೆ (Youths) ಮನವರಿಕೆ ಮಾಡುವ ಮೂಲಕ ಜೆಡಿಎಸ್‌ (JDS) ಗೆಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ನನ್ನ ಜೀವನದ ಕೊನೆಯ ಘಟ್ಟದಲ್ಲಿ ನಿಮ್ಮ ಮುಂದೆ ಬಂದಿದ್ದೇನೆ. ನಮ್ಮ ಅಭ್ಯರ್ಥಿ ಗೆಲ್ಲಿಸಿ ಎಂದು ಮತದಾರರಿಗೆ ಮನವಿ ಮಾಡಿಕೊಳ್ಳಲಾಗುವುದು ಎಂದೂ ಹೇಳಿದರು.

ಜೆಡಿಎಸ್‌ (JDS) ಮುಗಿಸಲು ಹುನ್ನಾರ:  ಕುಮಾರಸ್ವಾಮಿ (HD Kumaraswamy) ಅವರು ಎರಡೂ ಕ್ಷೇತ್ರಗಳಲ್ಲಿ ಚುನಾವಣೆ (Election) ಪ್ರಚಾರ ಮಾಡಲಿದ್ದಾರೆ. ಸಿಂದಗಿ ಕ್ಷೇತ್ರ ಗೆಲ್ಲಲು ಹೆಚ್ಚಿನ ಗಮನ ಹರಿಸಲಾಗಿದೆ. ಶಕ್ತಿಮೀರಿ ಪ್ರಯತ್ನಿಸಲಾಗುವುದು. ಅಂತಿಮವಾಗಿ ಮತದಾರರು ನಿರ್ಧಾರ ಕೈಗೊಳ್ಳಲಿದ್ದಾರೆ. ಜೆಡಿಎಸ್‌ (JDS) ಪಕ್ಷ ಮುಗಿಸಲು ಕಾಂಗ್ರೆಸ್‌ (Congress), ಬಿಜೆಪಿಗಳು (BJP) ಹುನ್ನಾರ ನಡೆಸಿವೆ. ಅದು ಸಾಧ್ಯವಾಗಲ್ಲ. ಕಾಶ್ಮೀರದಲ್ಲಿ 7 ವರ್ಷಗಳ ಹಿಂದೆ ಏನಿತ್ತು? ಇಂದು ಏನು ನಡೆದಿದೆ ಎಂದು ಎಲ್ಲವನ್ನು ವಿಶ್ಲೇಷಣೆ ಮಾಡಲ್ಲ. ಇಂದಿನ ಪರಿಸ್ಥಿತಿ ನಾಳೆ ಏನಾಗಲಿದೆ ಎಂದು ಈಗಲೇ ಏನನ್ನೂ ಹೇಳಲು ಆಗುವುದಿಲ್ಲ ಎಂದರು.

ಏಕಾಂಗಿಯಾಗಿ ಹೋರಾಟ:  ನಮಗೆ ಯಾವುದೇ ಪಕ್ಷದೊಂದಿಗೆ ಚುನಾವಣೆ ಸಂಬಂಧ ಇಲ್ಲ. ಏಕಾಂಗಿಯಾಗಿ ಹೋರಾಡುತ್ತೇವೆ. 2023ರ ಸಾರ್ವತ್ರಿಕ ಚುನಾವಣೆಯಲ್ಲಿ (2023 Assembly Election) ರಾಜ್ಯಾದ್ಯಂತ ಸಂಚರಿಸುತ್ತೇನೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆದಾಗಿನಿಂದ ಸರ್ಕಾರ ಹೋಗುವ ತನಕ ಏನಾಯಿತು ಎಂದು ಹೇಳಬೇಕು ಎಂದ ಅವರು, ನನ್ನನ್ನು ಏಕ ವಚನದಲ್ಲಿ ಮಾತನಾಡಿದ್ದಾರೆ ಎಂದು ತಿಳಿಸಿದರು.

 

click me!