ಅಂಬೇಡ್ಕರ್ ನಿಗಮದಲ್ಲೂ 200 ಕೋಟಿ ಅಕ್ರಮ: ಎನ್.ರವಿಕುಮಾರ್‌

Published : Sep 02, 2024, 09:34 AM IST
ಅಂಬೇಡ್ಕರ್ ನಿಗಮದಲ್ಲೂ 200 ಕೋಟಿ ಅಕ್ರಮ: ಎನ್.ರವಿಕುಮಾರ್‌

ಸಾರಾಂಶ

'ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಹಗರಣದ ಮಾದರಿಯಲ್ಲೇ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲೂ ನಡೆದಿರುವ ನೂರಾರು ಕೋಟಿ ರು. ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು' ಎಂದು ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಎನ್.ರವಿಕುಮಾರ್‌ ಆಗ್ರಹಿಸಿದ್ದಾರೆ. 

ಬೆಂಗಳೂರು (ಸೆ.02): 'ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ಹಗರಣದ ಮಾದರಿಯಲ್ಲೇ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲೂ ನಡೆದಿರುವ ನೂರಾರು ಕೋಟಿ ರು. ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು' ಎಂದು ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಎನ್.ರವಿಕುಮಾರ್‌ ಆಗ್ರಹಿಸಿದ್ದಾರೆ. ಅಂಬೇಡ್ಕರ್ ನಿಗಮದಲ್ಲಿನ ಬೃಹತ್ ಹಗರಣದ ಬಗ್ಗೆ ಕನ್ನಡಪ್ರಭದ ಸಹೋದರ ಸಂಸ್ಥೆ ಏಷ್ಯಾನೆಟ್ ಸುವರ್ಣ ನ್ಯೂಸ್ 'ಕವರ್ ಸ್ಟೋರಿ' ಬಿತ್ತರಿಸಿದ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಿಗಮದಿಂದ ನೀಡಲಾಗುವ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಕೊಟ್ಯಂತರ ರು. ಹಗರಣ ನಡೆದಿದೆ. ಸುಮಾರು 200 ಕೋಟಿ ರು.ಗೂ ಹೆಚ್ಚು ಹಣ ಬೇರೆ ಬೇರಮ ಖಾತೆಗಳಿಗೆ ವರ್ಗಾವಣೆಯಾಗಿದೆ. ಭ್ರಷ್ಟಾಚಾರದ ಹಣ ಚುನಾವ ಣೆಗೂ ಬಳಸಿರುವ ಗುಮಾನಿ ಇದೆ. ಹೀಗಾಗಿ, ಹೈಕೋರ್ಟ್ ನ್ಯಾಯ ಮೂರ್ತಿಗಳ ಮೇಲ್ವಿಚಾರಣೆಯಲ್ಲಿ ತನಿಖೆಯಾಗಬೇಕು ಸಮಗ್ರ ಎಂದು ಆಗ್ರಹಿಸಿದರು. 'ಪರಿಷತ್ತಿನ ಮಾಜಿ ಪ್ರತಿಪಕ್ಷದ ನಾಯಕ, ಹಾಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭ್ರಷ್ಟಾಚಾರದ ಕುರಿತು ತನಿಖೆಗೆ ಒತ್ತಾಯಿಸಿದ್ದರೂ ಸರ್ಕಾರ ತನಿಖೆ ನಡೆಸಿಲ್ಲ ಎಂದರು.

ಕೋವಿಡ್ ತನಿಖಾ ವರದಿ ಒತ್ತಡ ಹಾಕಿ ಸ್ವೀಕಾರ: ಪ್ರಾಣ ಒತ್ತೆಯಿಟ್ಟು ಕೆಲಸ ಮಾಡಿದ್ದೇನೆಂದ ಸಂಸದ ಸುಧಾಕರ್

ಅಂಬೇಡ್ಕ‌ರ್ ಅಭಿವೃದ್ಧಿ ನಿಗಮದಿಂದ ನೀಡಲಾಗುವ ಸಾಲ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳ 200 ಕೋಟಿ ರು.ಗೂ ಹೆಚ್ಚು ಹಣ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿದೆ. ತನಿಖೆಗೆ ಆಗ್ರಹಿಸಿ ಧರಣಿ ನಡೆಸುವೆ.
-ರವಿಕುಮಾರ್ ಬಿಜೆಪಿ ಶಾಸಕ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌