ಭಾರತ್‌ ಜೋಡೋ ದೇಶದ 2ನೇ ಸ್ವಾತಂತ್ರ್ಯ ಸಂಗ್ರಾಮ: ಪಿ.ಚಿದಂಬರಂ

Published : Sep 08, 2022, 03:00 AM IST
ಭಾರತ್‌ ಜೋಡೋ ದೇಶದ 2ನೇ ಸ್ವಾತಂತ್ರ್ಯ ಸಂಗ್ರಾಮ: ಪಿ.ಚಿದಂಬರಂ

ಸಾರಾಂಶ

ದೇಶ ವಿಭಜಿಸುವ ಶಕ್ತಿಗಳ ವಿರುದ್ಧ ಕಾಂಗ್ರೆಸ್‌ ಹೋರಾಟ, ದೇಶದ ರಾಜಕೀಯ ಇತಿಹಾಸಕ್ಕೆ ಯಾತ್ರೆಯಿಂದ ತಿರುವು

ಕನ್ಯಾಕುಮಾರಿ(ಸೆ.08):  ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬುಧವಾರ ಚಾಲನೆ ನೀಡಿದ ‘ಭಾರತ್‌ ಜೋಡೋ ಯಾತ್ರೆ’ ದೇಶದ 2ನೇ ಸ್ವಾತಂತ್ರ್ಯ ಸಂಗ್ರಾಮವಾಗಿದೆ. ಇದು ದೇಶವನ್ನು ವಿಭಜಿಸುವ ಶಕ್ತಿಗಳ ವಿರುದ್ಧ ಜಯಗಳಿಸುವವರೆಗೂ ನಡೆಯಲಿದೆ ಎಂದು ಕಾಂಗ್ರೆಸ್‌ ಹೇಳಿದೆ. ಅಲ್ಲದೆ ಈ ಯಾತ್ರೆ ದೇಶದ ರಾಜಕೀಯ ಇತಿಹಾಸದಲ್ಲೊಂದು ಮಹತ್ವದ ತಿರುವಾಗಿದ್ದು, ಹೊಸ ಅಧ್ಯಾಯಕ್ಕೆ ಕಾರಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಕ್ಷದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ‘ನಮ್ಮ ಭಾರತ್‌ ಜೋಡೋ ಯಾತ್ರೆಯನ್ನು ಟೀಕಿಸುತ್ತಿರುವವರು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈಗ ನಡೆಯುತ್ತಿರುವ 2ನೇ ಸ್ವಾತಂತ್ರ್ಯ ಹೋರಾಟದಲ್ಲೂ ನಿಮ್ಮ (ಬಿಜೆಪಿ) ಪಾತ್ರ ಇಲ್ಲ. ದೇಶವನ್ನು ವಿಭಜಿಸುವ ಶಕ್ತಿಗಳ ವಿರುದ್ಧ ಗೆಲ್ಲುವವರೆಗೂ ಈ ಹೋರಾಟ ನಿಲ್ಲುವುದಿಲ್ಲ’ ಎಂದು ಹೇಳಿದ್ದಾರೆ.

ದ್ವೇಷದ ರಾಜಕೀಯಕ್ಕೆ ತಂದೆ ಕಳೆದುಕೊಂಡೆ, ನನ್ನ ಪ್ರೀತಿಯ ದೇಶ ಕಳೆದುಕೊಳ್ಳಲ್ಲ: Rahul Gandhi

ಪಕ್ಷದ ಇನ್ನೊಬ್ಬ ಇರಿಯ ನಾಯಕ ಜೈರಾಂ ರಮೇಶ್‌ ಮಾತನಾಡಿ , ‘2022ರ ಸೆ.7ರಂದು ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷ, ಅತ್ಯಂತ ಸುದೀರ್ಘ ಪಾದಯಾತ್ರೆಗೆ ಚಾಲನೆ ನೀಡುತ್ತಿದೆ. ಇದು ಭಾರತದ ರಾಜಕೀಯಕ್ಕೆ ತಿರುವು ನೀಡುವ ಹಂತ. ಇದು ಹೊಸ ಅಧ್ಯಾಯದ ಆರಂಭ. ದೇಶ ಮತ್ತು ಪಕ್ಷ ಎರಡನ್ನೂ ಪುನರುಜ್ಜೀವನಗೊಳಿಸುವ ಮಹತ್ವದ ನಿರ್ಣಾಯಕ ಘಟ್ಟ. ಈ ಯಾತ್ರೆ ಬಗ್ಗೆ ದೇಶಾದ್ಯಂತ ಇರುವ ಪಕ್ಷದ ಕಾರ್ಯಕರ್ತರಲ್ಲಿ ಭಾರೀ ಉತ್ಸಾಹವಿದೆ. ಇದು ಸ್ವತಂತ್ರ್ಯ ಭಾರತದಲ್ಲಿ ಅತ್ಯಂತ ದೊಡ್ಡ ಮಟ್ಟದಲ್ಲಿ ಜನಸಮೂಹವನ್ನು ಒಗ್ಗೂಡಿಸುವ ಕಾರ್ಯಕ್ರಮ’ ಎಂದು ಹೇಳಿದ್ದಾರೆ.

ಜಿ23 ಬೆಂಬಲ: 

ಈ ನಡುವೆ ಪಕ್ಷ ಆಯೋಜಿಸಿರುವ ಯಾತ್ರೆಗೆ ಜಿ23 ನಾಯಕರು ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಆನಂದ್‌ ಶರ್ಮಾ, ಈ ಯಾತ್ರೆ ಪ್ರಜಾಪ್ರಭುತ್ವದ ಸಮಗ್ರ ಒಳಗೊಳ್ಳುವಿಕೆ ಮತ್ತು ಐಕ್ಯತೆಯನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ. ಇದರ ನೇತೃತ್ವ ವಹಿಸಿರುವ ರಾಹುಲ್‌ ಗಾಂಧಿಗೆ ಶುಭ ಹಾರೈಕೆಗಳು ಎಂದಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ