ಮತ್ತೆ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಬದಲಾವಣೆ

Suvarna News   | Asianet News
Published : May 07, 2021, 12:38 PM ISTUpdated : May 07, 2021, 12:44 PM IST
ಮತ್ತೆ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಬದಲಾವಣೆ

ಸಾರಾಂಶ

ಐದು ದಿನಗಳ ಹಿಂದಷ್ಟೇ  6 ಜಿಲ್ಲೆಗಳಿಗೆ ಉಸ್ತುವಾರಿ ಬದಲಾಯಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ಉಸ್ತುವಾರಿಗಳ ಬದಲಾವಣೆ ಮಾಡಿದೆ. 3 ಜಿಲ್ಲೆಗಳಿಗೆ ನೂತನ ಉಸ್ತುವಾರಿ ಸಚಿವರ ಬದಲಾಯಿಸಿದೆ. 

ಬೆಂಗಳೂರು (ಮೇ.07): ಕಳೆದ ಐದು ದಿನಗಳ ಹಿಂದಷ್ಟೇ  6 ಜಿಲ್ಲೆಗಳಿಗೆ ಉಸ್ತುವಾರಿ ಬದಲಾಯಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ಉಸ್ತುವಾರಿಗಳ ಬದಲಾವಣೆ ಮಾಡಿದೆ. 

ಮತ್ತೆ ಮೂರು ಜಿಲ್ಲೆಗಳಿಗೆ ನೂತನ ಉಸ್ತುವಾರಿ ಸಚಿವರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಕೊರೋನಾ ಆತಂಕ ಪ್ರತೀ ಜಿಲ್ಲೆಯಲ್ಲಿಯೂ ಹೆಚ್ಚಾಗುತ್ತಲೇ ಇದ್ದು, ಜಿಲ್ಲೆಯ ಉಸ್ತುವಾರಿಗಳನ್ನು ಬದಲಾವಣೆ ಮಾಡಿ ಜವಾಬ್ದಾರಿ ಹೆಚ್ಚಿಸಲಾಗಿದೆ.  

6 ಜಿಲ್ಲೆಗಳಿಗೆ ನೂತನ ಉಸ್ತುವಾರಿ : ಯಾರಿಗೆ ಯಾವ ಜಿಲ್ಲೆ..?

 ಕೋಲಾರ ಜಿಲ್ಲೆಯ ಉಸ್ತುವಾರಿಯನ್ನು ಎಂಟಿಬಿ ನಾಗಾರಾಜ್ ಅವರಿಂದ ಇದೀಗ  ಅರವಿಂದ ಲಿಂಬಾವಳಿಗೆ  ವಹಿಸಲಾಗಿದೆ. ಬೀದರ್‌ ಉಸ್ತುವಾರಿಯನ್ನು ಹಿಂಪಡೆದು ಕೋಲಾರದ ಜವಾಬ್ದಾರಿ ವಹಿಸಲಾಗಿದೆ.  ಮೇ 2ರ ಬದಲಾವಣೆಯನ್ನು ಮತ್ತೊಮ್ಮೆ  ಪರಿಷ್ಕರಣೆ ಮಾಡಲಾಗಿದೆ. 

ಲಿಂಬಾವಳಿಯವರಿಂದ ಹಿಂಪಡೆದ ಬೀದರ್ ಉಸ್ತುವಾರಿಯನ್ನು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರಿಗೆ ವಹಿಸಲಾಗಿದೆ. 

ನೂತನವಾಗಿ ಆರ್‌. ಶಂಕರ್‌ ಅವರಿಗೆ ಯಾದಗಿರಿ ಉಸ್ತುವಾರಿಯನ್ನು ವಹಿಸಲಾಗಿದೆ.

ಅರವಿಂದ ಲಿಂಬಾವಳಿ (ಅರಣ್ಯ ಮತ್ತು ಕನ್ನಡ-ಸಂಸ್ಕೃತಿ ಸಚಿವರು ) : ಕೋಲಾರ 
 ಪ್ರಭು ಚೌಹಾಣ್ (ಪಶು ಸಂಗೋಪನಾ ಸಚಿವರು ) : ಬೀದರ್
 ಆರ್ ಶಂಕರ್‌ (ತೋಟಗಾರಿಕೆ ಮತ್ತು ರೇಷ್ಮೆ ಸಚಿವ ) : ಯಾದಗಿರಿ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ