'ಡ್ರಗ್ಸ್​ ದಂಧೆಯಲ್ಲಿ ರಾಜಕಾರಣಿಗಳು, ಸಾಕ್ಷಿ ಸಮೇತ 32 ಜನರ ಲಿಸ್ಟ್ ಗೃಹ ಸಚಿವರ ಕೈ ಸೇರಲಿದೆ '

Published : Sep 12, 2020, 02:30 PM ISTUpdated : Sep 12, 2020, 03:18 PM IST
'ಡ್ರಗ್ಸ್​ ದಂಧೆಯಲ್ಲಿ ರಾಜಕಾರಣಿಗಳು, ಸಾಕ್ಷಿ ಸಮೇತ 32  ಜನರ ಲಿಸ್ಟ್ ಗೃಹ ಸಚಿವರ ಕೈ ಸೇರಲಿದೆ '

ಸಾರಾಂಶ

ಡ್ರಗ್ಸ್ ದಂಧೆಯಲ್ಲಿ ಶಾಸಕ ಜಮೀರ್ ಅಹ್ಮದ್ ಪಾತ್ರ ಶೇ.100ರಷ್ಟು ಇದೆ. ರಾಜಕಾರಣದಲ್ಲಿ ವ್ಯವಹಾರ ಇಟ್ಟುಕೊಂಡಿರುವುದರಿಂದ ಅವರ​ನ್ನು ಅರೆಸ್ಟ್ ಮಾಡ್ತಿಲ್ಲ ಎಂದು ಗಂಭೀರ ಆರೋಪ ಮಾಡಿದ್ದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್, ಇದೀಗ ಮತ್ತೊಂದು ಬಾಂಬ್​ ಸಿಡಿಸಿದ್ದಾರೆ.

ಮಂಡ್ಯ, (ಸೆ.12): ಡ್ರಗ್ಸ್​ ದಂಧೆಯಲ್ಲಿ ಬರೋಬ್ಬರಿ 32 ರಾಜಕಾರಣಿಗಳಿದ್ದು, ಈ ಬಗ್ಗೆ ಹೋಂ ಮಿನಿಸ್ಟರ್‌ಗೆ ಆಧಾರ ಸಹಿತ ಲಿಸ್ಟ್​ ಕೊಡ್ತೀನಿ ಎಂದು  ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್ ಹೊಸ ಬಾಂಬ್ ಸಿಡಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ.

"

ಶನಿವಾರ ಮಂಡ್ಯದಲ್ಲಿ ಮಾತನಾಡಿದ ಮುತಾಲಿಕ್, ರಾಜಕಾರಣಿಗಳದ್ದೇ ಪಬ್, ಕ್ಲಬ್, ಬಾರ್​ಗಳಿವೆ. ಅವರಿಗೆ ಸಾವಿರಾರು ಕೋಟಿ ರೂ. ವ್ಯಾಪಾರ ಆಗುತ್ತಿರುವುದೇ ಡ್ರಗ್ಸ್‌ನಿಂದ. ವೈನ್, ಡ್ರಗ್ಸ್​ ಲಾಬಿ‌ ರಾಜಕೀಯವನ್ನು ಕೈಯಲ್ಲಿ ಹಿಡಿದುಕೊಂಡಿದೆ. ಈ ಮಾಫಿಯಾದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ನವರೂ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಕಲಬುರಗಿ ಗಾಂಜಾಕೋರ ಬಿಜೆಪಿ ಕಾರ್ಯಕರ್ತ: ಕಾಂಗ್ರೆಸ್‌

8 ಮತ್ತು 9ನೇ ತರಗತಿ ಮಕ್ಕಳವರೆಗೆ ಡ್ರಗ್ಸ್ ಪ್ರವೇಶ ಮಾಡಿದೆ. ಮೈಸೂರಿನ ಶಾಲೆಯಲ್ಲಿ ಒಬ್ಬ ಹುಡುಗ ಪೆನ್ ಮೂಸಿ ನೋಡುತ್ತಿದ್ದ. ಅದರೊಳಗೆ ಡ್ರಗ್ಸ್ ಇತ್ತು. ತನಿಖೆ ಮಾಡಿದ್ರೆ 10 ಜನ ವಿದ್ಯಾರ್ಥಿ ಆ ಜಾಲದಲ್ಲಿ ಇರುವುದು ಗೊತ್ತಾಯಿತು ಎಂದು ಹೇಳಿದರು.

"

ಸದ್ಯ ಸಿಸಿಬಿ ಅಧಿಕಾರಿಗಳು ಸ್ಯಾಂಡಲ್‌ವುಡ್‌ನ್ನು ಜಾಲಾಡುತ್ತಿದ್ದಾರೆ. ಆದ್ರೆ, ಈ ಪ್ರಕರಣದಲ್ಲಿ ರಾಜಕೀಯ ನಾಯಕ ಮೇಲೆ ಆರೋಪಗಳು ಕೇಳಿಬರುತ್ತಿವೆಯಾದರೂ ಇದರುವರೆಗೂ ಒಬ್ಬರಿಗೂ ನೋಟಿಸ್ ನೀಡಿಲ್ಲ. ಇದು ಮುಂದಿನ ದಿನಗಳಲ್ಲಿ ಯಾವ ರೀತಿಯಾಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!