ಗೈರಾದ ನಾಲ್ವರ ಶಾಸಕ ಸ್ಥಾನಕ್ಕೆ ಕುತ್ತು! ಕೈ ಮುಂದಿನ ಹೆಜ್ಜೆ ಏನು?

Published : Jan 18, 2019, 06:15 PM ISTUpdated : Jan 18, 2019, 06:18 PM IST
ಗೈರಾದ ನಾಲ್ವರ ಶಾಸಕ ಸ್ಥಾನಕ್ಕೆ ಕುತ್ತು! ಕೈ ಮುಂದಿನ ಹೆಜ್ಜೆ ಏನು?

ಸಾರಾಂಶ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಅಂತಿಮವಾಗಿ 4 ಜನ ಶಾಸಕರು ಗೈರಾಗಿದ್ದಾರೆ.  ಎದ್ದೆನೋ ಬಿದ್ದನೊ ಎಂದು ಎಲ್ಲೆಲ್ಲಿಂದಲೋ ಶಾಸಕರು ಸಭೆಗೆ ಓಡೋಡಿ ಬಂದಿದ್ದಾರೆ.

ಬೆಂಗಳೂರು[ಜ.18] ಕಾಂಗ್ರೆಸ್ ಶಾಸಕಾಂಗ ಸಭೆಗೆ 4 ಜನ ಶಾಸಕರು ಬಂದಿಲ್ಲ. ನಾರಾಯಣರಾವ್ ಓಡೋಡಿ ಬಂದು ಸಭೆ ಸೇರಿಕೊಂಡಿದ್ದಾರೆ. ಸಿದ್ದರಾಮಯ್ಯ ಪೋನ್ ಕರೆಗೆ ಅಕ್ಷರಶಃ ನಾರಾಯಣರಾವ್ ನಡುಗಿಹೋಗಿದ್ದರು.

ಕಾಂಗ್ರೆಸ್ ಬಳಿ ಇರುವ 80 ಶಾಸಕರ ಲೆಕ್ಕದಲ್ಲಿ ಗೋಕಾಕ್ ಶಾಸಕ,  ಶಾಸಕ ಮಹೇಶ್ ಕುಮಟಳ್ಳಿ, ಡಾ.ಉಮೇಶ್ ಜಾಧವ್, ಬಿ.ನಾಗೇಂದ್ರ  ಸಭೆಗೆ ಬಂದಿಲ್ಲ. ಉಮೇಶ್ ಜಾಧವ್ ಪತ್ರವೊಂದನ್ನು ಕಳಿಸಿದ್ದಾರೆ ಎನ್ನಲಾಗುತ್ತಿದೆ.

ಕಾಂಗ್ರೆಸ್ ಬಂಡಾಯಕ್ಕೆ ಹೊಸ ಟ್ವಿಸ್ಟ್ ಕೊಟ್ಟವರೆ ಇವರು

ಹಾಗಾದರೆ ಈ ರೆಬಲ್ ಶಾಸಕರು ಯಾವ ಶಿಕ್ಷೆಗೆ ಗುರಿಯಾಗಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ. ರಾಜ್ಯ ಕಾಂಗ್ರೆಸ್ ಮತ್ತು ಹೈಕಮಾಂಡ್ ಇವರ ಮೇಲೆ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬ ಚಿಂತನೆ ನಡೆಸಲಿದೆ.

ಆಯ್ಕೆ 1 ಪ್ರಾಥಮಿಕ ಸದಸ್ಯತ್ವದಿಂದ ವಜಾ: ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಬಹುದು. ಆದರೆ ಶಾಸಕ ಸ್ಥಾನಕ್ಕೆ ಯಾವುದೆ ಭಂಗ ತರಲು ಸಾಧ್ಯವಿಲ್ಲ.

ಆಯ್ಕೆ 2: ಸ್ಪೀಕರ್‌ಗೆ ದೂರು: ಶಾಸಕರು ಸರಿಯಾದ ರೀತಿಯಲ್ಲಿ ನಡೆದುಳ್ಳುತ್ತಿಲ್ಲ ಎಂದು ಸ್ಪೀಕರ್‌ಗೆ ದೂರು ನೀಡಿ ಅವರನ್ನು ಅನರ್ಹ ಮಾಡಿ ಎಂದು ಕೇಳಿಕೊಳ್ಳಬಹುದು.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ