MLC ಎಲೆಕ್ಷನ್‌: 2 ಸ್ಥಾನಕ್ಕೆ ನಾಲ್ವರ ಹೆಸರು ಫೈನಲ್ ಮಾಡಿದ ಕಾಂಗ್ರೆಸ್

Published : Jun 16, 2020, 03:09 PM IST
MLC ಎಲೆಕ್ಷನ್‌: 2 ಸ್ಥಾನಕ್ಕೆ ನಾಲ್ವರ ಹೆಸರು ಫೈನಲ್ ಮಾಡಿದ ಕಾಂಗ್ರೆಸ್

ಸಾರಾಂಶ

ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೇವಲ ಎರಡು ದಿನಳ ಮಾತ್ರ ಬಾಕಿ ಇದ್ದು, ಕಾಂಗ್ರೆಸ್ ತನ್ನ ಎಡರು ಸ್ಥಾನಕ್ಕೆ ನಾಲ್ವರನ್ನ ಹೆಸರು ಪಟ್ಟಿ ಮಾಡಿ ಹೈಕಮಾಂಡ್‌ಗೆ ರವಾನಿಸಿದೆ. 

ಬೆಂಗಳೂರು,(ಜೂನ್. 16): ರಾಜ್ಯ ವಿಧಾನಪರಿಷತ್‌ ಚುನಾವಣೆಗೆ ಕಾಂಗ್ರೆಸ್ ತನ್ನ 2 ಸೀಟಿಗೆ ನಾಲ್ವರ ಹೆಸರಗಳನ್ನು ಅಂತಿಮಗೊಳಿಸಿದ್ದು, ಈ ಪೈಕಿ ಇಬ್ಬರ ಹೆಸರುಗಳನ್ನು ಫೈನಲ್‌ ಮಾಡಲು ಹೈಕಮಾಂಡ್‌ಗೆ ಬಿಟ್ಟಿದೆ.

ಇನ್ನು ಬಗ್ಗೆ  ಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಇಂದು (ಮಂಗಳವಾರ) ಸಿದ್ದರಾಮಯ್ಯ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನ ಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಬೇರೆ ಬೇರೆ ವರ್ಗಗಳ ನಾಯಕರು ಆಕಾಂಕ್ಷಿಗಳಿದ್ದಾರೆ. ನಾಲ್ವರನ್ನ ಈಗಾಗಲೇ ಆಯ್ಕೆ ಮಾಡಲಾಗಿದ್ದು, ಇನ್ನೊಮ್ಮೆ ಸಭೆ ಮಾಡಿ ಇಬ್ಬರು ಅಭ್ಯರ್ಥಿಗಳನ್ನು ನಿರ್ಧರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ವಿಧಾನಪರಿಷತ್ ಎಲೆಕ್ಷನ್: ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಫೈನಲ್

 ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ನೀಡಲು ನೋಡುತ್ತಿದ್ದೇವೆ. ಅವರಿಗೆ ಟಿಕೆಟ್ ಕೊಟ್ಟರೆ ಪಕ್ಷ ಸಂಘಟನೆ ಸುಲಭವಾಗಲಿದೆ. ನೋಡೋಣ  ಒಂದು ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು. ಆದ್ರೆ, ನಾಲ್ವರ ಹೆಸರು ಯಾವವು ಎನ್ನುವುದು ಮಾತ್ರ ಹೇಳಿಲಿಲ್ಲ.

7 ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ 4, ಜೆಡಿಎಸ್‌ಗೆ 1 ಮತ್ತು ಕಾಂಗ್ರೆಸ್‌ಗೆ 2 ಸ್ಥಾನಗಳಿದ್ದು, ಈ ಎರಡು ಸ್ಥಾನಕ್ಕೆ ನಾಲ್ವರನ್ನ ಫೈನಲ್‌ ಮಾಡಿ ಹೈಕಮಾಂಡ್‌ಗೆ ಪಟ್ಟಿ ರವಾನಿಸಲಾಗಿದೆ. 

ಇನ್ನೊಂದು ಸಭೆ ನಡೆಸಿ ನಾಲ್ವರಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಫೈನಲ್ ಮಾಡಿ ಅಧಿಕೃತ ಮಂಗಳವಾರ ಸಂಜೆ ಅಥವಾ ಬುಧವಾರ ಘೋಷಣೆ ಮಾಡುವ ಸಾಧ್ಯತೆಗಳಿವೆ. ಇನ್ನು ಬಿಜೆಪಿ ಸಹ ಕೋರ್ ಕಮಿಟಿ ಸಭೆಯಲ್ಲಿಅಭ್ಯರ್ಥಿಗಳನ್ನ ಅಂತಿಮಗೊಳಿಸಿ ಪಟ್ಟಿಯನ್ನ ಹೈಕಮಾಂಡ್‌ ರವಾನಿಸಿದೆ.

 ಕರ್ನಾಟಕ ವಿಧಾನಸಭೆಯಿಂದ ಒಟ್ಟು 7 ಸದಸ್ಯರನ್ನು ವಿಧಾನ ಪರಿಷತ್‌ಗೆ ಆಯ್ಕೆ ಮಾಡಲು ಜೂನ್ 29ರಂದು ಚುನಾವಣೆ ನಡೆಯಲಿದ್ದು, ಜೂನ್ 18 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!