ಉಳಿದವರನ್ನೆಲ್ಲ ಬಿಟ್ಟು ಬೊಮ್ಮಾಯಿ ಆಯ್ಕೆಗೆ ಕಾರಣವಾದ 4 ಪ್ಲಸ್ ಪಾಯಿಂಟ್‌ಗಳು

Published : Jul 27, 2021, 10:30 PM IST
ಉಳಿದವರನ್ನೆಲ್ಲ ಬಿಟ್ಟು ಬೊಮ್ಮಾಯಿ ಆಯ್ಕೆಗೆ ಕಾರಣವಾದ 4 ಪ್ಲಸ್ ಪಾಯಿಂಟ್‌ಗಳು

ಸಾರಾಂಶ

* ಬಸವರಾಜ್ ಬೊಮ್ಮಾಯಿ ಕರ್ನಾಟಕದ ನೂತನ ಸಿಎಂ * ಬೊಮ್ಮಾಯಿ ಆಯ್ಕೆಗೆ ಪ್ರಮುಖ ಕಾರಣಗಳು * ಉತ್ತರ ಕರ್ನಾಟಕದ ನಾಯಕನಿಗೆ ಪಟ್ಟ

ಬೆಂಗಳೂರು(ಜು. 27)  ಎಸ್‌ ಆರ್ ಬೊಮ್ಮಾಯಿ ಅವರ ಪುತ್ರ ಬಸವರಾಜ ಸೋಮಪ್ಪ ಬೊಮ್ಮಾಯಿ ಕರ್ನಾಟಕದ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಬುಧವಾರ ಪ್ರಮಾಣ ವಚನಕ್ಕೂ ಸಿದ್ಧತೆ ಮಾಡಿಕೊಂಡಿದ್ದಾರೆ. ತಿಂಗಳುಗಳಿಂದ ಸಿಎಂ ರೇಸ್ ನಲ್ಲಿ ಅನೇಕರ ಹೆಸರುಗಳು ಕೇಳಿ ಬರುತ್ತಿದ್ದವು.  ಪ್ರಹ್ಲಾದ್ ಜೋಶಿ, ಉದಾಸಿ, ಬೆಲ್ಲದ್, ಸಿಟಿ ರವಿ, ನಿರಾಣಿ,  ವಿಶ್ವೇಶ್ವರ ಹೆಗಡೆ ಕಾಗೇರಿ ಹೀಗೆ ಹೆಸರುಗಳು ಓಡಾಡುತ್ತಿದ್ದು  ಅಂತಿಮವಾಗಿ ಸಿಎಂ ಗಾದಿ ಬೊಮ್ಮಾಯಿ ಪಾಲಾಯಿತು. ಹಾಗಾದರೆ ಬೊಮ್ಮಾಯಿಗೆ ಪ್ಲಸ್ ಆದ ಅಂಶಗಳು ಯಾವವು?

ಲಿಂಗಾಯತ ಸಮುದಾಯ: ರಾಜೀನಾಮೆ ನೀಡಿದ ಬಿಎಸ್ ಯಡಿಯೂರಪ್ಪ ಅವರಂತೆ ಬಸವರಾಜ ಬೊಮ್ಮಾಯಿ ಸಹ ಕರ್ನಾಟಕದ ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದವರು.  ಬಬಿಜೆಪಿ ಹೈಕಮಾಂಡ್ ಬೇರೆ ಸಮುದಾಯದವರನ್ನು ಸಿಎಂ ಸ್ಥಾನದಲ್ಲಿ ಕುಳ್ಳಿರಿಸಿ ಹೊಸ ಸವಾಲು ಎದುರಿಸಲು ಸಿದ್ಧವಾಗಲಿಲ್ಲ

ಸಿಎಂ ಗಾದಿವರೆಗಿನ ಹಾದಿ; ಬೊಮ್ಮಾಯಿ ಪರಿಚಯ

ಬಿಎಸ್‌ವೈ ಆಶೀರ್ವಾದ:  ನಿರ್ಗಮಿತ ನಾಯಕ ಬಿಎಸ್ ಯಡಿಯೂರಪ್ಪ ಅಭಿಪ್ರಾಯವನ್ನು ಸಹಜವಾಗಿಯೇ ಬಿಜೆಪಿ ಹೈಕಮಾಂಡ್ ಕೇಳಿದೆ. ಈ ವೇಳೆ ಯಡಿಯೂರಪ್ಪ ಸಹ ತಮ್ಮ ಎರಡನೇ ಆಯ್ಕೆ ಬೊಮ್ಮಾಯಿ ಎಂದು ತಿಳಿಸಿದ್ದಾರೆ. ಬಿಎಸ್‌ವೈ ಕೆಜೆಪಿ ಕಟ್ಟಿದಾಗ ಅಲ್ಲಿಗೆ ಹೋಗದೆ ಬಿಜೆಪಿಯಲ್ಲೇ ಇದ್ದು ಪಕ್ಷ ನಿಷ್ಠೆ ಮೆರೆದಿದ್ದರು. 

ಉತ್ತರ ಕರ್ನಾಟಕ ಭಾಗ: ಉತ್ತರ ಕರ್ನಾಟಕ ಭಾಗದ ನಾಯಕನಿಗೆ ಸಿಎಂ ಸ್ಥಾನ ನೀಡಬೇಕು ಎಂಬುದು ಬಹಳ ದಿನಗಳಿಂದ ಕೇಳಿಬರುತ್ತಿದ್ದ ಮಾತು.  ಬಿಜೆಪಿ ಆ ನಿಟ್ಟಿನಲ್ಲಿಯೂ ಹೆಜ್ಜೆ ಇಡುವ ಕೆಲಸ ಮಾಡಿದೆ.

ಮೃದು ನಡವಳಿಕೆ; ಬೊಮ್ಮಾಯಿ ಮೊದಲಿನಿಂದಲೂ ಮೃದು ನಡವಳಿಕೆಯಿಂದ ಇದ್ದವರು. ಜನತಾ ಪರಿವಾರದಿಂದ ಬಿಜೆಪಿಗೆ ಬಂದು ಇಲ್ಲಿಯೂ ಎಲ್ಲರ ಜತೆ ಸ್ನೇಹದಿಂದ ಇದ್ದವರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ