'ಶೀಘ್ರದಲ್ಲೇ ಬಿಜೆಪಿಯಿಂದ ಕಾಂಗ್ರೆಸ್‌ಗೆ 40 ಶಾಸಕರು'

Suvarna News   | Asianet News
Published : Oct 03, 2021, 11:21 AM ISTUpdated : Oct 03, 2021, 11:29 AM IST
'ಶೀಘ್ರದಲ್ಲೇ ಬಿಜೆಪಿಯಿಂದ ಕಾಂಗ್ರೆಸ್‌ಗೆ 40 ಶಾಸಕರು'

ಸಾರಾಂಶ

*   ಬೆಳಗಾವಿಯ ಮೂರು ಜನ ಪ್ರಭಾವಿಗಳಿಗೆ ತಪ್ಪಿದ ಸಚಿವ ಸ್ಥಾನ *   ದಿನದಿಂದ‌ ದಿನಕ್ಕೆ ಕಡಿಮೆಯಾಗುತ್ತಿರುವ ಮೋದಿ ವರ್ಚಸ್ಸು *   ಬಿಜೆಪಿ ಪಕ್ಷದ ಮೇಲಿನ‌ ನಂಬಿಕೆ ಕಳೆದುಕೊಳ್ಳುತ್ತಿರುವ ಜನತೆ 

ಬೆಳಗಾವಿ(ಅ.03):  ಶೀಘ್ರದಲ್ಲೇ ಬಿಜೆಪಿಯಿಂದ(BJP) ಕಾಂಗ್ರೆಸ್‌ಗೆ(Congress) 40 ಶಾಸಕರು ಬರುತ್ತಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಮಾಜಿ ಶಾಸಕ ರಾಜು ಕಾಗೆ(Raju Kage) ಹೊಸ ಬಾಂಬ್ ಸಿಡಿಸಿದ್ದಾರೆ. 

ಇಂದು(ಭಾನುವಾರ) ಬೆಳಗಾವಿ(Belagavi) ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಳಗಾವಿಯ ಮೂರು ಜನ ಪ್ರಭಾವಿಗಳಿಗೆ ಸಚಿವ ಸ್ಥಾನ ಕೈ ತಪ್ಪಿಸಲಾಗಿದೆ. ಇದರಿಂದ ಬಿಜೆಪಿಯಲ್ಲಿ ಈಗ ಆಂತರಿಕ ಕಚ್ಚಾಟ ಶುರುವಾಗಿದೆ. ಮೂವರು ಪ್ರಭಾವಿ ಶಾಸಕರೊಂದಿಗೆ ಒಟ್ಟು ನಲವತ್ತು ಜನ ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಹೇಳಿದ್ದಾರೆ. 

ಬೆಲೆ ಏರಿಕೆಯಿಂದ ಪ್ರಧಾನಿ ನರೇಂದ್ರ ಮೋದಿ(Narendra Modi) ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ(BS Yediyurappa) ರಾಜ್ಯದ ಜನ ಹಿಡಿಶಾಪ ಹಾಕುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ದಿನದಿಂದ‌ ದಿನಕ್ಕೆ ಕಡಿಮೆಯಾಗುತ್ತಿದೆ. ಬಿಜೆಪಿ ಪಕ್ಷದ ಮೇಲಿನ‌ ನಂಬಿಕೆಯನ್ನು ಜನರು ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ನಮ್ಮ ಪಕ್ಷಕ್ಕೆ ಬಿಜೆಪಿಯಿಂದ 40 ಜನ ಶಾಸಕರು ಬರ್ತಾರೆ ಎಂದು ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಬಾಂಬ್ ಸಿಡಿಸಿದ್ದಾರೆ. 

ಸಂಜಯ್‌ ಹೇಳಿಕೆ ವೈಯಕ್ತಿಕವೇ? ಪಕ್ಷದ ಹೇಳಿಕೆಯೇ?: ಹೆಬ್ಬಾಳಕರ್‌

ಕುತೂಹಲ ಮೂಡಿಸಿದ ಸತೀಶ ಜಾರಕಿಹೊಳಿ, ಸಚಿವ ನಿರಾಣಿ ಭೇಟಿ

ಕೆಲವು ದಿನಗಳ ಹಿಂದೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಮುರಗೇಶ ನಿರಾಣಿ(Murugesh Nirani) ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಒಂದೇ ಕಾರಿನಲ್ಲಿ ಸಂಚರಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಎಡೆಮಾಡಿ ಕೊಟ್ಟಿತ್ತು. 

ಬೆಳಗಾವಿ ನಗರದ ಖಾಸಗಿ ಹೊಟೇಲ್ಲೊಂದರಲ್ಲಿ ನಿರಾಣಿ ಮತ್ತು ಸತೀಶ ಜಾರಕಿಹೊಳಿ(Satish Jarkiholi) ಮಾತುಕತೆ ನಡೆಸಿದ್ದು, ಬಳಿಕ ಇಬ್ಬರೂ ನಾಯಕರು ಒಂದೇ ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಯಾವ ವಿಚಾರವಾಗಿ ಚರ್ಚೆ ಮಾಡಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೇ, ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು. 

ಏತನ್ಮಧ್ಯೆ ರಾಜು ಕಾಗೆ ಹೊಸ ಬಾಂಬ್ ಸಿಡಿಸುವುದರ ಮೂಲಕ ರಾಜ್ಯ ರಾಜಕೀಯ ಹೊಸ ಸಂಚಲನಕ್ಕೆ ಕಾರಣವಾಗಿದೆ. ಬಿಜೆಪಿ ಯಾರ್ಯಾರು ಕಾಂಗ್ರೆಸ್‌ಗೆ ಬರ್ತಾರೆ ಎನ್ನುವುದನ್ನ ಕಾಲವೇ ಉತ್ತರಿಸಬೇಕಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ