ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ?

Published : Apr 06, 2024, 04:11 PM IST
ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ?

ಸಾರಾಂಶ

ಮೇಲ್ನೋಟಕ್ಕೆ ತೀವ್ರ ಗ್ಯಾಸ್ಟ್ರೋ ಎಂಟರೈಟಿಸ್‌ ಎಂದು ವೈದ್ಯರು ದೃಢಪಡಿಸಿದ್ದು, ಕಾಲರಾ ಶಂಕೆಯಿಂದ ರೋಗಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಮಲ್ಲೇಶ್ವರದ ಖಾಸಗಿ ಪಿಜಿಯಲ್ಲಿನ ಯುವತಿಗೆ ಕಾಲರಾ ಇಲ್ಲದಿರುವುದು ದೃಢಪಟ್ಟ ಬೆನ್ನಲ್ಲೇ ಇಷ್ಟು ಮಂದಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯರೇ ಅತಿಸಾರ ಬೇಧಿಯಿಂದ ಆಸ್ಪತ್ರೆಗೆ ದಾಖಲಾಗಿರುವುದು ತೀವ್ರ ಆತಂಕ ಉಂಟು ಮಾಡಿದೆ.

ಬೆಂಗಳೂರು(ಏ.06):  ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಬಿಎಂಆರ್‌ಸಿಐ) ವಿದ್ಯಾರ್ಥಿನಿಲಯದ 47 ಮಂದಿ ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೇಲ್ನೋಟಕ್ಕೆ ತೀವ್ರ ಗ್ಯಾಸ್ಟ್ರೋ ಎಂಟರೈಟಿಸ್‌ ಎಂದು ವೈದ್ಯರು ದೃಢಪಡಿಸಿದ್ದು, ಕಾಲರಾ ಶಂಕೆಯಿಂದ ರೋಗಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ. ಮಲ್ಲೇಶ್ವರದ ಖಾಸಗಿ ಪಿಜಿಯಲ್ಲಿನ ಯುವತಿಗೆ ಕಾಲರಾ ಇಲ್ಲದಿರುವುದು ದೃಢಪಟ್ಟ ಬೆನ್ನಲ್ಲೇ ಇಷ್ಟು ಮಂದಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯರೇ ಅತಿಸಾರ ಬೇಧಿಯಿಂದ ಆಸ್ಪತ್ರೆಗೆ ದಾಖಲಾಗಿರುವುದು ತೀವ್ರ ಆತಂಕ ಉಂಟು ಮಾಡಿದೆ.

ತೀವ್ರ ಬೇಧಿ, ವಾಂತಿ ಹಾಗೂ ನಿರ್ಜಲೀಕರಣ ಸಮಸ್ಯೆಯಿಂದ 47 ಮಂದಿ ವಿದ್ಯಾರ್ಥಿನಿಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಟ್ರಾಮಾ ಕೇರ್‌ ಘಟಕದಲ್ಲಿ 28 ಮಂದಿ, ಎಚ್‌ ಬ್ಲಾಕ್‌ನಲ್ಲಿ 15 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗ್ಳೂರಲ್ಲಿ ಕಾಲರಾ ರೋಗ ಪತ್ತೆ?

ತೀವ್ರ ಅಸ್ವಸ್ಥರಾಗಿರುವ ನಾಲ್ಕು ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಸಾಂಕ್ರಾಮಿಕ ಅತಿಸಾರ ಅಥವಾ ಹೊಟ್ಟೆ ಜ್ವರ (ಗ್ಯಾಸ್ಟ್ರೋಎಂಟರೈಟಿಸ್‌) ಸಮಸ್ಯೆ ಎಂದು ಪ್ರಾಥಮಿಕವಾಗಿ ಗುರುತಿಸಲಾಗಿದೆ. ಆ್ಯಂಟಿಬಯೋಟಿಕ್‌, ಐವಿ ಫ್ಲ್ಯೂಯೆಡ್ಸ್ ಸೇರಿದಂತೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಎಂಆರ್‌ಸಿಐ ಡೀನ್‌ ಹಾಗೂ ನಿರ್ದೇಶಕರಾದ ಡಾ.ಕೆ. ರಮೇಶ್‌ ಕೃಷ್ಣ ಮಾಹಿತಿ ನೀಡಿದ್ದಾರೆ.

ಕಾಲರಾ ಶಂಕೆ

ಆಹಾರ ಅಥವಾ ನೀರಿನ ಮೂಲಗಳು ಸೋಂಕಿತರ ಮಲದಿಂದ ಮಾಲಿನ್ಯಗೊಂಡು ಅಂತಹ ಕಲುಷಿತ ನೀರಿನ ಸೇವನೆಯಿಂದ ಅತಿಸಾರ ಅಥವಾ ಕಾಲರದಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಏಕಾಏಕಿ ಇಷ್ಟು ಮಂದಿಗೆ ಅತಿಸಾರ ಬೇಧಿ ಉಂಟಾಗಿರುವುದರಿಂದ ಕಾಲರಾ ಕಾಯಿಲೆಯ ಶಂಕೆ ವ್ಯಕ್ತಪಡಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳ ಮಲದ ಮಾದರಿಯನ್ನು (ಸ್ಟೂಲ್‌ ಕಲ್ಚರ್‌) ಕಾಲರಾ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಚಿತ್ರದುರ್ಗ ಕಲುಷಿತ ನೀರಲ್ಲಿ ಕಾಲರಾ ಅಂಶ: ಲ್ಯಾಬ್‌ ವರದಿ

ಮೇಲ್ನೋಟಕ್ಕೆ ತೀವ್ರ ಗ್ಯಾಸ್ಟ್ರೋ ಎಂಟರೈಟಿಸ್‌ ಎಂದು ವೈದ್ಯರು ದೃಢಪಡಿಸಿದ್ದು, ಕಾಲರಾ ಶಂಕೆಯಿಂದ ರೋಗಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಮಲ್ಲೇಶ್ವರದ ಖಾಸಗಿ ಪಿಜಿಯಲ್ಲಿನ ಯುವತಿಗೆ ಕಾಲರಾ ಇಲ್ಲದಿರುವುದು ದೃಢಪಟ್ಟ ಬೆನ್ನಲ್ಲೇ ಇಷ್ಟು ಮಂದಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯರೇ ಅತಿಸಾರ ಬೇಧಿಯಿಂದ ಆಸ್ಪತ್ರೆಗೆ ದಾಖಲಾಗಿರುವುದು ತೀವ್ರ ಆತಂಕ ಉಂಟು ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?