
ಭೋಪಾಲ್[ಮಾ.11]: ಮಧ್ಯಪ್ರದೇಶದ ರಾಜಕೀಯ ಮಂಗಳವಾರ ಮತ್ತೊಂದು ರಾಜಕೀಯ ತಿರುವು ಪಡೆದುಕೊಂಡಿದೆ. ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಂಗಳವಾರ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಬಳಿಕ ಕೆಲವೇ ಹೊತ್ತಿನಲ್ಲಿ ಅವರನ್ನು ಕಾಂಗ್ರೆಸ್ ಪಕ್ಷ ಉಚ್ಚಾಟಿಸಿದೆ. ಅವರು ಬಿಜೆಪಿ ಸೇರುವುದು ನಿಚ್ಚಳವಾಗಿದೆ.
ಹೀಗಿರುವಾಗ 18 ವರ್ಷ ಕಾಂಗ್ರೆಸ್ನಲ್ಲಿದ್ದು ಜನ ಸೇವೆ ಮಾಡಿದ್ದ, ಬಿಜೆಪಿ ವಿರೋಧಿಸಿದ್ದ ಸಿಂಧಿಯಾ ಇದ್ದಕ್ಕಿದ್ದಂತೆ ಪಕ್ಷ ತೊರೆದಿದ್ದೇಕೆ? ಇಂತಹ ನಿರ್ಧಾರಕ್ಕೇನು ಕಾರಣ? ಇದು ಸಿಂಧಿಯಾ ಹಳೇ ಸೇಡಿಗೆ ಕೊಟ್ಟ ಹೊಸ ಪೆಟ್ಟು.
18 ವರ್ಷ ಬಿಜೆಪಿ ವಿರೋಧಿಸಿದ್ದ ಜ್ಯೋತಿರಾದಿತ್ಯ!
- ಮಧ್ಯಪ್ರದೇಶದಲ್ಲಿ ಕಮಲ್ನಾಥ್ ಅವರಿಗೂ ಸಿಂಧಿಯಾಗೂ ವೈಮನಸ್ಯ
- ತಮ್ಮನ್ನು ಮ.ಪ್ರ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಪರಿಗಣಿಸದ ಹೈಕಮಾಂಡ್
- ಮಧ್ಯಪ್ರದೇಶದಿಂದ ರಾಜ್ಯಸಭೆ ಟಿಕೆಟ್ ಕೊಡಲೂ ವರಿಷ್ಠರ ನಕಾರ
- ಹೈಕಮಾಂಡ್ ತಮ್ಮನ್ನು ಅನಿಶ್ಚಿತ ಸ್ಥಿತಿಯಲ್ಲಿ ಇಟ್ಟಿದ್ದಕ್ಕೆ ಸಿಂಧಿಯಾರಲ್ಲಿ ಒಳಬೇಗುದಿ
- ಮ.ಪ್ರ. ವಿಚಾರದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲು ಹೈಕಮಾಂಡ್ ವಿಫಲವಾಗಿದ್ದು
ಸಿಂಧಿಯಾ ರಾಜೀನಾಮೆ : ಬಿಜೆಪಿಗೆ ಸೇರ್ಪಡೆ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.