ರಾಜಕಾರಣಿಗಳ ಗಿಫ್ಟ್ ತಿರಸ್ಕರಿಸಿದರೆ ₹5000 ಬಹುಮಾನ: ರವಿ ಕೃಷ್ಣಾರೆಡ್ಡಿ ಘೋಷಣೆ

Published : Jan 31, 2023, 08:37 AM IST
ರಾಜಕಾರಣಿಗಳ ಗಿಫ್ಟ್ ತಿರಸ್ಕರಿಸಿದರೆ ₹5000 ಬಹುಮಾನ: ರವಿ ಕೃಷ್ಣಾರೆಡ್ಡಿ ಘೋಷಣೆ

ಸಾರಾಂಶ

ಚುನಾವಣೆ ವೇಳೆ ಮತದಾರರಿಗೆ ಜನಪ್ರತಿನಿಧಿಗಳು ಆಮಿಷವೊಡ್ಡಲು ವಸ್ತುಗಳನ್ನು ನೀಡಿದರೆ ಅದನ್ನು ಪ್ರಶ್ನಿಸಿ, ತಿರಸ್ಕರಿಸುವವರಿಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷ ವತಿಯಿಂದ .5 ಸಾವಿರ ಬಹುಮಾನ ಘೋಷಣೆ ಮಾಡಲಾಗಿದೆ.

ಬೆಂಗಳೂರು (ಜ.31) : ಚುನಾವಣೆ ವೇಳೆ ಮತದಾರರಿಗೆ ಜನಪ್ರತಿನಿಧಿಗಳು ಆಮಿಷವೊಡ್ಡಲು ವಸ್ತುಗಳನ್ನು ನೀಡಿದರೆ ಅದನ್ನು ಪ್ರಶ್ನಿಸಿ, ತಿರಸ್ಕರಿಸುವವರಿಗೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷ ವತಿಯಿಂದ .5 ಸಾವಿರ ಬಹುಮಾನ ಘೋಷಣೆ ಮಾಡಲಾಗಿದೆ.

ಕೆಆರ್‌ಎಸ್‌ ಪಕ್ಷ(KRS Party)ದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಅವರು ಪಾರದರ್ಶಕ, ನ್ಯಾಯಸಮ್ಮತ ಚುನಾವಣೆ ನಡೆಯಬೇಕು ಎಂಬ ಉದ್ದೇಶದಿಂದ ಬಹುಮಾನವನ್ನು ಘೋಷಣೆ ಮಾಡಿದ್ದಾರೆ.

ಜನರೇ ಜನಪ್ರತಿನಿಧಿಗಳ ಆಮಿಷಗಳನ್ನು ತಿರಸ್ಕರಿಸುವ ಮತ್ತು ಚುನಾವಣಾ ಅಕ್ರಮಗಳನ್ನು ನಿಲ್ಲಿಸುವ ಕಾರ್ಯಕ್ಕೆ ಮುಂದಾಗಬೇಕು. ಯಾವುದೇ ವ್ಯಕ್ತಿ ಕುಕ್ಕರ್‌, ಮಿಕ್ಸಿ, ತಟ್ಟೆಇತ್ಯಾದಿ ವಸ್ತುಗಳನ್ನು ನೀಡಿದರೆ ಆದನ್ನು ಪ್ರಶ್ನಿಸಿ, ತಿರಸ್ಕರಿಸುವ ಘಟನೆಯ ವಿಡಿಯೋ ಮಾಡಿ ಮೊ.ಸಂ. 88617-75862ಗೆ ಕಳುಹಿಸುವವರಿಗೆ .5 ಸಾವಿರ ಬಹುಮಾನ ನೀಡಲಾಗುವುದು ಎಂದು ರವಿಕೃಷ್ಣಾ ರೆಡ್ಡಿ(Ravikrishnareddy) ತಿಳಿಸಿದ್ದಾರೆ.

ಈ ನಡುವೆ, ಮತಕ್ಕಾಗಿ ಮತದಾರರಿಗೆ ಆಮಿಷವೊಡ್ಡುವ ಚುನಾವಣಾ ಅಕ್ರಮಗಳನ್ನು ನಿಲ್ಲಿಸಲು ಮತ್ತು ರಾಜ್ಯದಲ್ಲಿ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸುವಂತೆ ಒತ್ತಾಯಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಭೇಟಿ ನೀಡುವ ಅಭಿಯಾನವನ್ನು ಕೈಗೊಂಡಿದ್ದಾರೆ. ಈಗಾಗಲೇ ಅಭಿಯಾನ ಪ್ರಾರಂಭಿಸಿರುವ ರವಿಕೃಷ್ಣಾ ರೆಡ್ಡಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಸೋಮವಾರದಿಂದ ವಿವಿಧ ಜಿಲ್ಲೆಗಳ ಭೇಟಿ ಮುಂದುವರೆಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ