6 ಕೋಟಿ ಅಕ್ರಮ ಹಣದ ಆರೋಪಿಗೆ ಅದ್ಧೂರಿ ಮೆರವಣಿಗೆ ಬೇಕೇ.?: ಮಾಡಾಳ್ ವಿರುಪಾಕ್ಷಪ್ಪನಿಂದ ಬಿಜೆಪಿಗೆ ಮುಜುಗರ

Published : Mar 07, 2023, 04:39 PM ISTUpdated : Mar 07, 2023, 04:48 PM IST
6 ಕೋಟಿ ಅಕ್ರಮ ಹಣದ ಆರೋಪಿಗೆ ಅದ್ಧೂರಿ ಮೆರವಣಿಗೆ ಬೇಕೇ.?: ಮಾಡಾಳ್ ವಿರುಪಾಕ್ಷಪ್ಪನಿಂದ ಬಿಜೆಪಿಗೆ ಮುಜುಗರ

ಸಾರಾಂಶ

ಲೋಕಾಯುಕ್ತ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಹೈಕೋರ್ಟ್‌ ಜಾಮೀನು ಸಿಕ್ಕಿದ ಕೆಲವೇ ನಿಮಿಷಗಳಲ್ಲಿ ಜನರ ಮುಂದೆ ಸ್ವಕ್ಷೇತ್ರದಲ್ಲಿ ಪತ್ತೆಯಾಗಿದ್ದಾರೆ. ಅದ್ಧೂರಿ ಮೆರವಣಿಗೆ ಮಾಡಿಸಿಕೊಂಡು ಮನೆಗೆ ಹೋಗಿದ್ದು, ಬಿಜೆಪಿಗೆ ಭಾರಿ ಮುಜುಗರ ಉಂಟಾಗಿದೆ.

ದಾವಣಗೆರೆ (ಮಾ.07): ಲೋಕಾಯುಕ್ತ ಪೊಲೀಸರಿಂದ ತಪ್ಪಿಸಿಕೊಂಡು 6 ದಿನಗಳ ಕಾಲ ಅವಿತು ಕುಳಿತಿದ್ದ ಕೆಎಸ್‌ಡಿಎಲ್‌ ಅಧ್ಯಕ್ಷ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಹೈಕೋರ್ಟ್‌ ಜಾಮೀನು ಸಿಕ್ಕ ಕೆಲವೇ ನಿಮಿಷಗಳಲ್ಲಿ ಜನರ ಮುಂದೆ ಪ್ರತ್ಯಕ್ಷವಾಗಿದ್ದಾರೆ. ತನಗೆ 74 ವರ್ಷವಾಗಿದ್ದು, ಹೃದಯ ಸಂಬಂಧಿ ಕಾಯಿಲೆಯಿದೆ ಎಂದು ಜಾಮೀನು ಪಡೆದ ಶಾಸಕರ ಆರೋಗ್ಯ ಮೆರವಣಿಗೆ ವೇಳೆಗೆ ಸರಿ ಹೋಗುತ್ತೇ.? ಇದರಿಂದ ಬಿಜೆಪಿಗೆ ಮುಜುಗರ ಆಗಲಿಲ್ಲವೇ.?

ಕಳೆದ ಆರು ದಿನಗಳ ಹಿಂದೆ ಲೋಕಾಯುಕ್ತ ದಾಳಿಯ ವೇಳೆ 6 ಕೋಟಿ ರೂ. ದಾಖಲೆಯಿಲ್ಲದ ಹಣ ಸಿಕ್ಕಿದ ಕೂಡಲೇ ಬಂಧನದಿಂದ ತಪ್ಪಿಸಿಕೊಳ್ಳಲು ಸ್ವಕ್ಷೇತ್ರ ಚನ್ನಗಿರಿಯಲ್ಲೇ ಆರು ದಿನಗಳ ಕಾಲ ಅವಿತು ಕುಳಿತಿದ್ದ ಕೆಎಸ್‌ಡಿಎಲ್‌ ಅಧ್ಯಕ್ಷ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಇಂದು ಪ್ರತ್ಯಕ್ಷವಾಗಿದ್ದಾರೆ. ತನಗೆ 74 ವರ್ಷವಾಗಿದ್ದು, ಹೃದಯ ಸಂಬಂಧಿ ಕಾಯಿಲೆಯಿದೆ ಎಂದು ನೆಪವೊಡ್ಡಿ ಜಾಮೀನು ಪಡೆದವರು ಶಾಸಕ ಕಾರ್ಯಕರ್ತರ ಅದ್ಧೂರಿ ಮೆರವಣಿಗೆ ಮೂಲಕ ಮನೆಗೆ ಆಗಮಿಸುತ್ತಿರುವಾಗ ಅನಾರೋಗ್ಯ ಸರಿ ಹೋಗಿದೆಯೇ.? ಎಂಬುದು ರಾಜ್ಯದ ಜನತೆಯ ಯಕ್ಷ ಪ್ರಶ್ನೆಯಾಗಿದೆ.

ಹೈಕೋರ್ಟ್‌ ಜಾಮೀನು ಬೆನ್ನಲ್ಲೇ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಪ್ರತ್ಯಕ್ಷ: ಅದ್ಧೂರಿ ಸ್ವಾಗತ

ಶಾಸಕರ ಅಜ್ಞಾತ ಸ್ಥಳ ಎಲ್ಲಿದೆ? : ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಬೆಂಗಳೂರಿನ ಖಾಸಗಿ ಕಚೇರಿ ಎಂ.ಸ್ಟೂಡಿಯೋದಲ್ಲಿ ಶಾಸಕರ ಪುತ್ರ ಪ್ರಶಾಂತ್‌ ಮಾಡಾಳ್‌ 40 ಲಕ್ಷ ರೂ. ಹಣ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದರು. ಇನ್ನು ಈ ಹಣ ಕೆಎಸ್‌ಡಿಎಲ್‌ನ ಟೆಂಡರ್‌ ಹಂಚಿಕೆಯ ಕುರಿತಾದ ಲಂಚದ ಹಣವೆಂದು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಎ.1 ಆರೋಪಿಯಾಗಿ ಅದರ ಅಧ್ಯಕ್ಷ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರನ್ನು ಬಂಧಿಸಲು ವಾರೆಂಟ್‌ ಸಿದ್ಧಗೊಳಿಸಲಾಗಿತ್ತು. ಆದರೆ, ಅವರು ಆರು ದಿನಗಳ ಕಾಲ ಅಜ್ಞಾತ ಸ್ಥಳಕ್ಕೆ ತೆರಳಿದ್ದು, ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಆದರೆ, ಇಂದು ಜಾಮೀನು ಸಿಕ್ಕಿದ ಬೆನ್ನಲ್ಲೇ ಕೆಲವೇ ನಿಮಿಷಗಳಲ್ಲಿ ಸ್ವಕ್ಷೇತ್ರದಲ್ಲಿನ ಮನೆಗೆ ಅದ್ಧೂರಿ ಮೆರವಣಿಗೆ ಮೂಲಕ ವಾಪಸ್‌ ಬಂದಿದ್ದಾರೆ. ಅಂದರೆ, ಅವರು ಅವಿತುಕೊಂಡಿದ್ದ ಅಜ್ಞಾತ ಸ್ಥಳ ಚನ್ನಗಿರಿ ಎಂದೇ ಸ್ಪಷ್ಟವಾಗಿ ಊಹಿಸಬಹುದಾಗಿದೆ.

ಕೆಲವೇ ಗಂಟೆಗಳಲ್ಲಿ ಜನರ ಮುಂದೆ ಹಾಜರ್: ಲೋಕಾಯುಕ್ತ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿ ನಂ.1 ಮಾಡಾಳ್‌ ವಿರುಪಾಕ್ಷಪ್ಪ ಚನ್ನಗಿರಿಯಲ್ಲೇ ತಲೆಮರೆಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಹೈಕೋರ್ಟ್​ನಿಂದ ಜಾಮೀನು ಸಿಗುತ್ತಿದ್ದಂತೆ ವಿರೂಪಾಕ್ಷಪ್ಪ ಪ್ರತ್ಯಕ್ಷವಾಗಿದ್ದಾರೆ. ಹೈಕೋರ್ಟ್ ಆದೇಶ ಬಂದ ಕೆಲವೇ ಗಂಟೆಯಲ್ಲಿ ಹೊರ ಬಂದಿದ್ದಾರೆ. ಮಧ್ಯಾಹ್ನ 12.30ಕ್ಕೆ ಹೈಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಆದೇಶ ಹೊರಬಂದಿದ್ದು, ಆದೇಶ ಬಂದ ಕೇವಲ ಎರಡೂವರೆ ಗಂಟೆಯಲ್ಲಿ ಜನರ ಮುಂದೆ ಪ್ರತ್ಯಕ್ಷರಾಗಿದ್ದಾರೆ. 

ಪೊಲೀಸರ ಕಾರ್ಯವೈಖರಿ ಮೇಲೆ ಅನುಮಾನ:  ಬಂಧನ ಭೀತಿಯಿಂದ ನಾಪತ್ತೆಯಾಗಿದ್ದ ಲಂಚದ ಕೇಸ್ ಆರೋಪಿ ಮಾಡಾಳ್‌ ವಿರುಪಾಕ್ಷಪ್ಪ ಚನ್ನಗಿರಿಯಲ್ಲೇ ಇದ್ದರೂ ಪೊಲೀಸರಿಗೆ ಸಿಗದೇ ಹೇಗೆ ತಪ್ಪಿಸಿಕೊಂಡಿದ್ದರು.? ಚನ್ನಗಿರಿಯಲ್ಲೇ ಇದ್ದರೂ ಮಾಡಾಳ್ ಬಗ್ಗೆ ಪೊಲೀರಿಗೆ ಮಾಹಿತಿ ಸಿಕ್ಕಿರಲಿಲ್ವಾ..? ಲೋಕಾಯುಕ್ತ ದಾಳಿಯ ಮರುದಿನವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದ ಮಾಡಾಳ್ ವಿರುಪಾಕ್ಷಪ್ಪ ಚನ್ನಗಿರಿಗೆ ಹೋಗಿದ್ಯಾವಾಗ..? ಮಾಡಾಳ್ ಓಡಾಟದ ಬಗ್ಗೆ ಪೊಲೀಸರಿಗೆ ಮಾಹಿತಿಯೇ ಸಿಕ್ಕಿರಲಿಲ್ವಾ..? ಇದರ ಹಿಂದೆ ಷಡ್ಯಂತ್ರವೇನಾದರೂ ಇದೆಯೇ ಎಂಬ ಅನುಮಾನಗಳು ಮೂಡುತ್ತಿವೆ.

ಶಾಸಕ ಮಾಡಾಳು ವಿರುಪಾಕ್ಷಪ್ಪಗೆ ಬಿಗ್‌ ರಿಲೀಫ್‌: ಜಾಮೀನು ಮಂಜೂರು ಮಾಡಿದ ಕೋರ್ಟ್

ರಾಜ್ಯ ಬಿಜೆಪಿಗೆ ಭಾರಿ ಮುಜುಗರ: ಇನ್ನು ಶಾಸಕ ಮಾಡಾಳು ವಿರುಪಾಕ್ಷಪ್ಪ ಲೋಕಾಯುಕ್ತ ಪೊಲೀಸರಿಂದ ತಲೆ ಮರೆಸಿಕೊಂಡು ಒಬ್ಬ ಆರೋಪಿಯಾಗಿ ಜಾಮೀನು ಪಡೆದು ಮನೆಗೆ ಹೋಗುತ್ತಿರುವ ವೇಳೆ ಅದ್ಧೂರಿ ಮೆರವಣಿಗೆ ಮಾಡಿಸಿಕೊಳ್ಳುತ್ತಿರುವುದು ರಾಜ್ಯ ಬಿಜೆಪಿಗೆ ಭಾರಿ ಪ್ರಮಾಣದ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷಗಳಿಂದ ಮುಜುಗರ ತಪ್ಪಿಸಿಕೊಳ್ಳಲು ಮೆರವಣಿಗೆ ಮಾಡದಂತೆ ರಾಜ್ಯ ಬಿಜೆಪಿ ನಾಯಕರು ಶಾಸಕರಿಗೆ ಸೂಚನೆ ನೀಡಿದ್ದಾರೆ. ಕೂಡಲೇ, ಮೆರವಣಿಗೆ ಮಾಡುವುದನ್ನು ನಿಲ್ಲಿಸಿ ಪಕ್ಷಕ್ಕೆ ಮತ್ತಷ್ಟು ಮುಜುಗರ ಆಗವುದನ್ನು ತಪ್ಪಿಸುವಂತೆ ಸೂಚನೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ