ಮಾಜಿ ಶಾಸಕರ ಪುತ್ರಿ ಮದ್ವೆ ಬಳಿಕ 8 ಜನರಿಗೆ ತಗುಲಿದ ಕೊರೋನಾ

Published : Apr 27, 2021, 02:47 PM IST
ಮಾಜಿ ಶಾಸಕರ ಪುತ್ರಿ ಮದ್ವೆ ಬಳಿಕ 8 ಜನರಿಗೆ ತಗುಲಿದ ಕೊರೋನಾ

ಸಾರಾಂಶ

ಕರ್ನಾಟಕದಲ್ಲಿ ಕೊರೋನಾ ಎಡರನೇ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗಿದೆ. ಆದರೂ ಕೊವಿಡ್ ನಿಯಮದ ಪ್ರಕಾರವೇ ನಡೆದ ಮದುವೆಯಲ್ಲಿ ಭಾಗವಹಿಸಿದ್ದ 8 ಜನರಿಗೆ ಕೊರೋನಾ ಸೋಂಕು ಅಟ್ಯಾಕ್ ಆಗಿದೆ.

ಬಾಗಲಕೋಟೆ, (ಏ.27): ಮಾಜಿ ಶಾಸಕ ಪಿ.ಹೆಚ್.ಪೂಜಾರ ಪುತ್ರಿ ಮದುವೆ ಬಳಿಕ 8 ಜನರಿಗೆ ಕೊರೋನಾ ಸೋಂಕು ತಗುಲಿದೆ. 

ಬಾಗಲಕೋಟೆ ಮಾಜಿ ಶಾಸಕ ಪಿ.ಹೆಚ್.ಪೂಜಾರ ಕುಟುಂಬದಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ಆದರೆ ಮದುವೆಗೆ ಬಂದಿದ್ದ ಎಂಟು ಜನರಿಗೆ ಈಗ ಕೊರೊನಾ ಸೋಂಕು ದೃಢಪಟ್ಟಿದೆ.

ಬಾಗಲಕೋಟೆ: ಕೊರೋನಾ ನಿಯಮ ಮೀರಿ ಜನರ ಸೇರಿಸಿ ಮದುವೆ, ಕೇಸ್ ದಾಖಲು

ಏಪ್ರಿಲ್ 24ರಂದು ಮಾಜಿ ಶಾಸಕದ ಪುತ್ರಿಯ ಮದುವೆ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಮದುವೆ ನಡೆದಿತ್ತು. ಕೊವಿಡ್ ನಿಯಮದ ಪ್ರಕಾರವೇ ಮದುವೆ ಸಮಾರಂಭ ನಡೆದಿತ್ತು. ಆದರೂ ಕೂಡ 8 ಜನರಿಗೆ ಕೊರೊನಾ ತಗುಲಿದೆ. 

ಸದ್ಯ ಮಾಜಿ ಶಾಸಕರ ಮನೆ ಬಳಿ ಬ್ಯಾರಿಕೇಡ್‌ ಹಾಕಿ ಸೀಲ್‌ಡೌನ್‌ ಹಾಕಲಾಗಿದೆ. ಬಾಗಲಕೋಟೆಯ ಮನೆ ಮಿನಿ ಕಂಟೇನ್ಮೆಂಟ್ ಜೋನ್ ಆಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಸೋಂಕಿತರ ಸಂಪರ್ಕ ಪತ್ತೆ ಹಚ್ಚುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂದಿನಿಂದ ಕಾವೇರಲಿದೆ ಉತ್ತರ ಕರ್ನಾಟಕದ ಚರ್ಚೆ-3 ದಿನ ವಿಧಾನಮಂಡಲದಲ್ಲಿ ಈ ಬಗ್ಗೆ ಕಲಾಪ
ಅಧಿವೇಶನದಲ್ಲಿ ನಾವು ರಾಜ್ಯದ ರೈತರಿಗೋಸ್ಕರ ಹೋರಾಡುತ್ತೇವೆ: ಆರ್‌.ಅಶೋಕ್‌