ಲೋಕಸಭಾ ಚುನಾವಣೆಗೆ 4 ರಾಜ್ಯಗಳಲ್ಲಿ ಹೊಂದಾಣಿಕೆ ಸೀಟು ಅಂತಿಮಗೊಳಿಸಿದ ಕಾಂಗ್ರೆಸ್

Published : Feb 24, 2024, 09:12 AM IST
ಲೋಕಸಭಾ ಚುನಾವಣೆಗೆ 4 ರಾಜ್ಯಗಳಲ್ಲಿ ಹೊಂದಾಣಿಕೆ ಸೀಟು ಅಂತಿಮಗೊಳಿಸಿದ ಕಾಂಗ್ರೆಸ್

ಸಾರಾಂಶ

ಬಿಜೆಪಿ ಸರ್ಕಾರವನ್ನು ಕೆಡವಲು ರಚಿಸಲಾಗಿರುವ ಇಂಡಿಯಾ ಕೂಟದ ಆಪ್‌ ಹಾಗೂ ಕಾಂಗ್ರೆಸ್‌ ನಾಲ್ಕು ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಅಂತಿಮಗೊಳಿಸಿದೆ ಎಂದು ಹೇಳಲಾಗಿದೆ.

ನವದೆಹಲಿ (ಫೆ.24): ಬಿಜೆಪಿ ಸರ್ಕಾರವನ್ನು ಕೆಡವಲು ರಚಿಸಲಾಗಿರುವ ಇಂಡಿಯಾ ಕೂಟದ ಆಪ್‌ ಹಾಗೂ ಕಾಂಗ್ರೆಸ್‌ ನಾಲ್ಕು ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಅಂತಿಮಗೊಳಿಸಿದೆ ಎಂದು ಹೇಳಲಾಗಿದೆ.

ಈ ಪೈಕಿ ದೆಹಲಿಯ7 ಕ್ಷೇತ್ರಗಳಲ್ಲಿ ಆಪ್‌ 4, ಕಾಂಗ್ರೆಸ್‌ 3 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಇನ್ನು ಗೋವಾದಲ್ಲಿ ಒಂದು ಆಪ್‌ ಹಾಗೂ ಇನ್ನೊಂದರಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ.

ಗುಜರಾತ್‌ನಲ್ಲಿ 2 ಕ್ಷೇತ್ರದಲ್ಲಿ ಆಪ್‌ ಹಾಗೂ ಮಿಕ್ಕ 24 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧೆ ಮಾಡಲಿದೆ. ಹರ್ಯಾಣದಲ್ಲಿ ಆಪ್‌ 1 ಸೀಟು ಹಾಗೂ ಕಾಂಗ್ರೆಸ್‌ 9 ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಯಲಿದೆ. ಇದರೊಂದಿಗೆ ಚಂಡೀಗಢದ ಏಕೈಕ ಲೋಕಸಭೆ ಕ್ಷೇತ್ರದಲ್ಲಿ ಆಪ್‌ ಕಣಕ್ಕಿಳಿಯಲಿದೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳ: ವೇಶ್ಯಾವಾಟಿಕೆ ಕೇಸಲ್ಲಿ ಬಿಜೆಪಿ ನಾಯಕ ಬಂಧನ, ಅಮಾಯಕರ ಮೇಲೆ ಟಿಎಂಸಿ ನಾಯಕರ ಅತ್ಯಾಚಾರ!

ಮಾ.13 ಬಳಿಕ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ: ಲೋಕಸಭೆಯ ಸಾರ್ವತ್ರಿಕ ಚುನಾವಣೆ ಏಪ್ರಿಲ್‌, ಮೇ ತಿಂಗಳಿನಲ್ಲಿ ನಡೆಯುವ ನಿರೀಕ್ಷೆ ಇದ್ದು, ಮಾ.13ರ ಬಳಿಕ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. 

ಚುನಾವಣೆ ಸಿದ್ಧತೆ ಪರಿಶೀಲನೆ ಸಲುವಾಗಿ ಆಯೋಗ ಈಗಾಗಲೇ ಹಲವಾರು ರಾಜ್ಯಗಳಿಗೆ ಭೇಟಿ ನೀಡುತ್ತಿದೆ. ಆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ದಿನಾಂಕ ಘೋಷಿಸಲಾಗುತ್ತದೆ.  ಸದ್ಯ ತಮಿಳುನಾಡಿನಲ್ಲಿ ಆಯೋಗ ಪರಿಶೀಲನೆ ಸಭೆ ನಡೆಸುತ್ತಿದೆ. ಬಳಿಕ ಉತ್ತರಪ್ರದೇಶ ಹಾಗೂ ಜಮ್ಮು-ಕಾಶ್ಮೀರಕ್ಕೆ ತೆರಳಲಿದೆ. 

ಸಂದೇಶ್‌ಖಾಲಿ ಸಾಮೂಹಿಕ ರೇಪ್‌ ಕೇಸ್‌, ಬಂಗಾಳದಲ್ಲಿ ಭುಗಿಲೆದ್ದ ಸಂಘರ್ಷ ಟಿಎಂಸಿ ನಾಯಕರ ಆಸ್ತಿಗಳಿಗೆ ಬೆಂಕಿ

ಈ ಭೇಟಿಗಳು ಮುಗಿದ ಬಳಿಕ ದಿನಾಂಕ ಪ್ರಕಟ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. 2014ರಲ್ಲಿ ಮಾ.5ಕ್ಕೆ ಚುನಾವಣೆ ಘೋಷಣೆಯಾಗಿತ್ತು.  2019ರಲ್ಲಿ ಮಾ.10ಕ್ಕೆ ಚುನಾವಣೆ ಘೋಷಣೆಯಾಗಿತ್ತು. 

ಪ್ರಧಾನಿ ನರೇಂದ್ರ ಮೋದಿಯವರು ಮಾ.3ರಂದು ಮಂತ್ರಿ ಪರಿಷತ್‌ ಸಭೆ ಕರೆದಿದ್ದು, ಅದರಲ್ಲಿ ಚುನಾವಣೆಯ ಬಗ್ಗೆ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ