ಬಿಜೆಪಿಯ 26 ಮಂದಿ ಸಂಸದರು ಗುಲಾಮಗಿರಿಯಲ್ಲಿದ್ದಾರೆ: ಮುಖ್ಯಮಂತ್ರಿ ಚಂದ್ರು

Published : Sep 03, 2023, 10:43 PM IST
ಬಿಜೆಪಿಯ 26 ಮಂದಿ ಸಂಸದರು ಗುಲಾಮಗಿರಿಯಲ್ಲಿದ್ದಾರೆ: ಮುಖ್ಯಮಂತ್ರಿ ಚಂದ್ರು

ಸಾರಾಂಶ

ಸರ್ವಪಕ್ಷ ಸಭೆ ಎಂದರೆ ಇರೋದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮಾತ್ರನಾ?. ನೀರು ಬಿಟ್ಟ ಕಳ್ಳರೆಲ್ಲರೂ ಒಟ್ಟಿಗೆ ಸೇರಿಕೊಂಡು ಮಾಡುವ ಸಭೆ ಸರ್ವಪಕ್ಷ ಸಭೆಯಾಗುವುದಿಲ್ಲ. ಅದೊಂದು ಕಣ್ಣೊರೆಸುವ ಸಭೆಯಷ್ಟೇ ಎಂದು ನಟ ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಂಗ್ಯವಾಡಿದರು.

ಮಂಡ್ಯ (ಸೆ.03): ಸರ್ವಪಕ್ಷ ಸಭೆ ಎಂದರೆ ಇರೋದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮಾತ್ರನಾ?. ನೀರು ಬಿಟ್ಟ ಕಳ್ಳರೆಲ್ಲರೂ ಒಟ್ಟಿಗೆ ಸೇರಿಕೊಂಡು ಮಾಡುವ ಸಭೆ ಸರ್ವಪಕ್ಷ ಸಭೆಯಾಗುವುದಿಲ್ಲ. ಅದೊಂದು ಕಣ್ಣೊರೆಸುವ ಸಭೆಯಷ್ಟೇ ಎಂದು ನಟ ಮತ್ತು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಂಗ್ಯವಾಡಿದರು.

ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಕಾವೇರಿ ಹೋರಾಟದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು. ಇವರು ಸಭೆಗೆ ರೈತ ಹೋರಾಟಗಾರರು, ಅವರಿಗೆ ಬೆಂಬಲಕೊಟ್ಟ ಸಂಘಟನೆಯವರು ಹಾಗೂ ಸಣ್ಣ ಸಣ್ಣ ಪಕ್ಷಗಳನ್ನು ಆಹ್ವಾನಿಸಬೇಕಿತ್ತು. ಅವರಿಗೆ ನೀರಿನ ಸಮಸ್ಯೆಯ ಸೂಕ್ಷ್ಮತೆ ಅರಿವಿತ್ತು. ಅದನ್ನೆಲ್ಲಾ ಬಿಟ್ಟು ಉದ್ಧಟತನ, ಉದಾಸೀನ ಮಾಡಿದ್ದಾರೆ. ನೀರಿನ ವಿಚಾರದಲ್ಲಿ ಮೂರು ಪಕ್ಷಗಳು ಏನು ತಪ್ಪು ಮಾಡಿದ್ದಾರೋ ಕಳ್ಳ-ಕಳ್ಳರು ಸಂತೆ ಸೇರಿಕೊಂಡು ಸಭೆ ನಡೆಸಿ ಮತ್ತೆ ಒಳ್ಳೆಯದು, ಅನ್ಯಾಯವಾಗದಂತೆ ನೋಡಿಕೊಳ್ಳೋಣ ಎಂದರೆ ದರೋಡೆ ಆಗುತ್ತೆ ಅಷ್ಟೇ ಎಂದು ಮೂದಲಿಸಿದರು.

ಕಾವೇರಿ ವಿಚಾರಕ್ಕೆ ನಿಮ್ಮ ಜೊತೆ ಜೈಲಿಗೆ ಬರಲು ಸಿದ್ಧ: ಶಾಸಕ ಜಿ.ಟಿ.ದೇವೇಗೌಡ

ಒಕ್ಕೂಟ ವ್ಯವಸ್ಥೆಯಲ್ಲಿ ಸಮಪಾಲು: ಕಾವೇರಿ ನೀರಿನ ವಿಚಾರದಲ್ಲಿ ತೊಂದರೆ ಇದ್ದದ್ದು ನಮಗೆ. ಹಾಗಾಗಿ ನಾವೇ ಮೊದಲೇ ಅರ್ಜಿ ಹಾಕಬೇಕಿತ್ತು. ಅಧಿಕಾರದ ಅಮಲು, ಸ್ವಾರ್ಥ ರಾಜಕಾರಣಕ್ಕೋಸ್ಕರ ನೀರಿನ ಸೂಕ್ಷ್ಮತೆಯನ್ನೇ ಅರಿಯದ ಕಾಂಗ್ರೆಸ್ ಸರ್ಕಾರ ಧಾರಾಳವಾಗಿ ನೀರು ಹರಿಸುತ್ತಿದೆ. ರೈತರು, ಜನ-ಜಾನುವಾರುಗಳಿಗೆ ಕುಡಿಯುವ ನೀರಿಲ್ಲ. ಬೆಳೆ ಬೆಳೆಯಲಾಗುತ್ತಿಲ್ಲ. ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಬುಡಕ್ಕೆ ಬೆಂಕಿ ಬಿದ್ದಾದ ಮೇಲೆ ಎದ್ದರೆ ಏನು ಪ್ರಯೋಜನ. ಸರ್ಕಾರದ ಬೇಜವಾಬ್ದಾರಿತನವೇ ಇಂದಿನ ಈ ಸ್ಥಿತಿಗೆ ಕಾರಣ. ಒಕ್ಕೂಟ ವ್ಯವಸ್ಥೆಯಲ್ಲಿ ಸರ್ವರಿಗೆ ಸಮಪಾಲು ಎಂಬುದಿದೆ. ತಾರತಮ್ಯ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಗುಲಾಮಗಿರಿಯಲ್ಲಿ ಬಿಜೆಪಿ: ತಮಿಳುನಾಡಿನವರು ಮೂರು ಬೆಳೆಗಾಗುವಷ್ಟು ನೀರನ್ನೂ ಸಂಗ್ರಹಿಸಿಟ್ಟುಕೊಂಡು ಕಾವೇರಿಯಿಂದ ಹೆಚ್ಚಿನ ನೀರನ್ನೂ ಕೇಳುತ್ತಿದ್ದಾರೆ. ಕೇಂದ್ರದ ಮೇಲೆ ರಾಜಕೀಯ ಒತ್ತಡವನ್ನೂ ತರುತ್ತಿದ್ದಾರೆ. ಆದರೆ, ಇಲ್ಲಿನ ಸಂಸದರು ಏನು ಮಾಡುತ್ತಿದ್ದಾರೆ. ಬಿಜೆಪಿಯ 26 ಮಂದಿ ಸಂಸದರು ಗುಲಾಮಗಿರಿಯಲ್ಲಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವಂತೆ ಮನವಿಯನ್ನೂ ಮಾಡುತ್ತಿಲ್ಲ. ನ್ಯಾಯಾಲಯದಿಂದ ಪ್ರಕರಣವನ್ನು ಹೊರಗೆ ತಂದು ಎರಡೂ ಸರ್ಕಾರಗಳೊಂದಿಗೆ ಕುಳಿತು ಚರ್ಚಿಸಿ ತೀರ್ಮಾನ ಮಾಡುವಂತೆ ಒತ್ತಾಯಿಸುತ್ತಲೂ ಇಲ್ಲ. ಅವರೂ ರಾಜಕೀಯ ದೊಂಬರಾಟದಲ್ಲಿ ತೊಡಗಿದ್ದಾರೆ. ಇನ್ನು ಅಧಿಕಾರದಲ್ಲಿರುವವರು ಜನರಿಗೆ, ರೈತರಿಗೆ ತೊಂದರೆಯಾದರೂ ಪರವಾಗಿಲ್ಲ ಕಾಂಗ್ರೆಸ್ ಹೈಕಮಾಂಡ್‌ನ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.

ಚಿತ್ರರಂಗ, ಕಿರುತೆರೆಯವರ ಬೇಜವಾಬ್ದಾರಿತನ: ನಾಡು, ನುಡಿ, ಗಡಿ, ನೀರಿನ ವಿಚಾರವಾಗಿ ಕನ್ನಡ ಚಿತ್ರರಂಗ, ಕಿರುತೆರೆ, ರಂಗಭೂಮಿ ಕಲಾವಿದರು ಮೊದಲು ಹೋರಾಟಕ್ಕಿಳಿಯಬೇಕಿತ್ತು. ಈ ವಿಚಾರದಲ್ಲಿ ಬೇಜವಾಬ್ದಾರಿ ಪ್ರದರ್ಶಿಸುತ್ತಿರುವುದು ಸರಿಯಲ್ಲ ಎಂದು ನಟ ಮುಖ್ಯಮಂತ್ರಿ ಚಂದ್ರು ಕಾವೇರಿ ಹೋರಾಟಕ್ಕಿಳಿಯದ ಚಿತ್ರರಂಗದವರನ್ನು ತರಾಟೆಗೆ ತೆಗೆದುಕೊಂಡರು. ಸಿನಿಮಾದ ಬಹುತೇಕ ಕಲಾವಿದರು ಜನಪ್ರಿಯರಾಗಿರುವುದು ಸಾರ್ವಜನಿಕರ ತೆರಿಗೆ ಹಣದಿಂದ. ಅದರಿಂದಲೇ ನಾವು ಬದುಕುತ್ತಿದ್ದೇವೆ. ನಮ್ಮ ಕುಟುಂಬ ಚೆನ್ನಾಗಿದೆ, ನಾನು ಚೆನ್ನಾಗಿದ್ದೇನೆ ಎಂದರೆ ಅದಕ್ಕೆ ಜನರೇ ಪ್ರಮುಖ ಕಾರಣರು. ಅವರ ಹಿತಕ್ಕೆ ಧಕ್ಕೆಯಾದಾಗ ಆದ್ಯತೆ ಮೇಲೆ ಅವರೊಂದಿಗೆ ನಿಲ್ಲಬೇಕಾದ್ದು ನಮ್ಮೆಲ್ಲರ ಕರ್ತವ್ಯ. ಇಲ್ಲಿನವರೇ ಎಂಪಿಯಾಗಿದ್ದುಕೊಂಡು ಸಿನಿಮಾದಲ್ಲಿದ್ದುಕೊಂಡು ಇದೇ ಜಿಲ್ಲೆಯವರಾಗಿ ಜನರಿಗೆ ಸ್ಪಂದಿಸುತ್ತಿಲ್ಲ. ಅಧಿಕಾರಕ್ಕಾಗಿ ಏನೇನೋ ಹೋರಾಟ ಮಾಡುತ್ತಿದ್ದಾರೆಂದರೆ ಬೇರೆಯವರ ಕತೆ ಏನು ಎಂದು ಸಂಸದೆ ಸುಮಲತಾ ಹೆಸರೇಳದೆ ಟೀಕಿಸಿದರು.

ನಾನು ಜೆಡಿಎಸ್‌ ಬಿಡುವುದಿಲ್ಲ, ಯಾರ ಬಗ್ಗೆಯೂ ಅಸಮಾಧಾನವಿಲ್ಲ: ಸಿ.ಎಸ್‌.ಪುಟ್ಟರಾಜು

ಸಿನಿಮಾದವರು ನಿತ್ಯ ಬಂದು ಹೋರಾಟ ಮಾಡಬೇಕಿಲ್ಲ. ಕನಿಷ್ಠ ಪಕ್ಷ ಬೆಂಬಲವನ್ನಾದರೂ ಸೂಚಿಸಬಹುದಲ್ಲವೇ. ನೀರಿನ ಹೋರಾಟಕ್ಕೆ ಕಲಾವಿದರು, ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಸ್ಪಂದಿಸದಿದ್ದರೆ ಇದಕ್ಕಿಂತ ದೊಡ್ಡ ದುರಂತ ಬೇರೊಂದಿಲ್ಲ. ರಾಜ್ಯದ ಜನರಿಂದ ಅನುಕೂಲ ಪಡೆದುಕೊಂಡು ಅನ್ಯಾಯ ಮಾಡುತ್ತಿದ್ದೀರಿ ಎಂದು ದೂಷಿಸಿದರು. ಸಿನಿಮಾ, ಕಿರುತೆರೆ, ರಂಗಭೂಮಿ ಕಲಾವಿದರಿಗೆ ನೀರಿಲ್ಲದೆ ರೈತರ ಸಂದಿಗ್ಧ ಪರಿಸ್ಥಿತಿ, ಜನರು ಎದುರಿಸುತ್ತಿರುವ ಸಂಕಷ್ಟ, ಜಾನುವಾರುಗಳು, ನೀರಿನ ಸಮಸ್ಯೆಯ ಅರಿವೇ ಇರುವುದಿಲ್ಲ. ಆ ರೀತಿಯ ಅನುಕೂಲದಲ್ಲಿ ಅವರೆಲ್ಲರೂ ಇದ್ದಾರೆ. ಹಾಗಾಗಿ ಅವರಲ್ಲಿ ಉದಾಸೀನ, ತಾತ್ಸಾರ ಮನೋಭಾವವಿದೆ. ಈಗಲಾದರೂ ಎಚ್ಚೆತ್ತುಕೊಂಡು ಹೋರಾಟಕ್ಕೆ ಧುಮುಕುವಂತೆ ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ