ಕೋಮುಗಲಭೆ ಮಾಡಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯ

Published : Oct 04, 2023, 04:09 PM IST
ಕೋಮುಗಲಭೆ ಮಾಡಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿಎಂ ಸಿದ್ದರಾಮಯ್ಯ

ಸಾರಾಂಶ

ನಮ್ಮ ಸರ್ಕಾರದ ಅವಧಿಯಲ್ಲಿ ಕೋಮು ಗಲಭೆ ಮಾಡಿದವರ ಮೇಲೆ ಯಾವುದೇ ಮುಲ್ಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಬೆಳಗಾವಿ (ಅ.04): ನಮ್ಮ ಸರ್ಕಾರದ ಅವಧಿಯಲ್ಲಿ ಕೋಮು ಗಲಭೆ ಮಾಡಿದವರ ಮೇಲೆ ಯಾವುದೇ ಮುಲ್ಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಗಲಭೆ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕೋಮುಗಲಭೆ ಹೆಚ್ಚು ಎಂಬ ವಿಪಕ್ಷಗಳ ಆರೋಪ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಯಿಸಿದ ಅವರು, ಅವರಿಗೆ ಆರೋಪ ಮಾಡೋದು ಬಿಟ್ಟು ಬೇರೇನು ಕೆಲಸ ಇದೆ? ಆರೋಪ ಮಾಡೋದೆ ಅವರ ಕೆಲಸ. ಆರೋಪ ಸತ್ಯ ಅಲ್ಲ, ಎಲ್ಲ ಸುಳ್ಳು ಆರೋಪಗಳು. ಎಲ್ಲಿ ಕೋಮು ಗಲಭೆ ಆಗಿದೆ ಎಂದು ಪ್ರಶ್ನಿಸಿದರು.

ದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮೋದಿಯೇ ಬರಬೇಕಾಯಿತು: ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗದಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಅವರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರದಲ್ಲಿ ಕೋಮುಗಲಭೆಯನ್ನು ತಕ್ಷಣ ಹತ್ತಿಕ್ಕುವ ಕೆಲಸ ಮಾಡುತ್ತೇವೆ. ಯಾರೇ ಕೋಮುಗಲಭೆ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದ ಅವರು, ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ ಮಾಡಿದರೆ ಮಾಡಲಿ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಹಕ್ಕಿದೆ. ಅದು ಶಾಂತಿಯುತವಾಗಿ ಮಾಡಲಿ. ಬಿಜೆಪಿಯವರಿಗೆ ಪ್ರತಿಭಟನೆ ಮಾಡುವುದೇ ಕೆಲಸವಾಗಿದೆ ಎಂದು ವ್ಯಂಗ್ಯವಾಡಿದರು.

ನಮ್ಮ ಸರ್ಕಾರದಲ್ಲಿ ಯಾವ ಸಮುದಾಯದವರಿಗೂ ಅನ್ಯಾಯವಾಗಿಲ್ಲ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿದ್ದಾರೆ. ಆದರೆ ನಾವು ಎಲ್ಲ ಸಮುದಾಯದವರಿಗೆ ನ್ಯಾಯ ದೊರೆಕಿಸಿಕೊಟ್ಟಿದ್ದೇವೆ. ನಮ್ಮ ಸರ್ಕಾರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಸರ್ಕಾರ ಎಂದ ಅವರು, ಶಾಮನೂರು ಶಿವಶಂಕರಪ್ಪ ಜೊತೆ ನಾನು ಮಾತನಾಡುತ್ತೇನೆ ಎಂದರು.

ರಾಜ್ಯದಲ್ಲಿ ಇಸ್ಲಾಮಿಕ್‌ ಮತಾಂಧರು ತಲೆ ಎತ್ತುತ್ತಿದ್ದಾರೆ: ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುವಂತೆ ಪೊಲೀಸ್‌ ಮಹಾನಿರ್ದೇಶಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ ಪತ್ರ ಬರೆದಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪ್ರಕರಣಗಳನ್ನು ಹಿಂದೆ ಪಡೆಯುವ ಯಾವುದೆ ಪ್ರಸ್ತಾವ ನಮ್ಮ ಮುಂದೆ ಇಲ್ಲ. ವಕೀಲರು, ಹೋರಾಟಗಾರರು ಡಿಕೆಶಿಗೆ ಒಂದು ಪತ್ರ ಬರೆದಿದ್ದರು. ಅದರ ಮೇಲೆ ಪೊಲೀಸ್‌ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಆ ಪತ್ರವನ್ನು ನಾನು ಇವತ್ತೆ ನೋಡಿದ್ದು. ಪ್ರಕರಣ ಹಿಂಪಡೆಯುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಬೆಳಗಾವಿ ಜಿಲ್ಲೆ ವಿಭಜನೆ ಮಾಡುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಅದರ ಬಗ್ಗೆ ಶಾಸಕರ ಚರ್ಚೆ ಮಾಡಲಾಗುವುದು ಎಂದು ಹೇಳಿ ತೆರಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?