
ಚೆನ್ನೈ (ಡಿ. 13) ನೂತನ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಆದರೆ ಇದೆ ವಿಚಾರವನ್ನು ನಟ, ರಾಜಕಾರಣಿ ಕಮಲ್ ಹಾಸನ್ ವಿಭಿನ್ನವಾಗಿ ಪ್ರಶ್ನೆ ಮಾಡಿದ್ದಾರೆ.
ಸೋಶಿಯಲ್ ಮೀಡಿಯಾ ಮುಖೇನ ನೂತನ ಸಂಸತ್ ಭವನ ನಿರ್ಮಾಣದ ಅಗತ್ಯವಿತ್ತೇ ಎಂದು ಅವರು ಪ್ರಶ್ನಿಸಿದ್ದಾರೆ. ಕೊರೊನಾ ವೈರಸ್ನಿಂದಾಗಿ ದೇಶ ಆರ್ಥಿಕ ಸಂಕಷ್ಟದಲ್ಲಿದೆ, ಜನರಿಗೆ ಉದ್ಯೋಗವಿಲ್ಲ, ಹಸಿವಿನಿಂದ ಬಳಲುತ್ತಿದ್ಧಾರೆ. ಇಂಥಾ ಸಮಯದಲ್ಲಿ ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿ ನೂತನ ಸಂಸತ್ ಭವನ ನಿರ್ಮಿಸುವ ಅಗತ್ಯವಿತ್ತೆ ಎಂದು ಪ್ರಶ್ನೆ ಮಾಡಿದ್ದು ಪ್ರತಿಕ್ರಿಯೆಗಳನ್ನು ಎದುರಿಸಿದ್ದಾರೆ.
ಏಕಾಂಗಿ ಹೋರಾಟಕ್ಕೆ ಮುಂದಾದ ಕಮಲ್ ಹಾಸನ್
ವಿಡಂಬನಾತ್ಮಕವಾಗಿ ಮಾತನಾಡಿರುವ ಕಮಲ್ ಹಾಸನ್, ನೂತನ ಸಂಸತ್ ಭವನವನ್ನು ಚೀನಾದ ಮಹಾ ಗೋಡೆಗೆ ಹೋಲಿಕೆ ಮಾಡಿದ್ದಾರೆ. ಚೀನಾದ ಮಹಾ ಗೋಡೆ ನಿರ್ಮಾಣದ ವೇಳೆ ಸಾವಿರಾರು ಜನರು ಸಾವನ್ನಪ್ಪಿದರು. ಆದ್ರೆ, ಚೀನಾ ದೇಶ ಮಾತ್ರ ಈ ಮಹಾಗೋಡೆಯು ಜನರಿಗೆ ರಕ್ಷಣೆ ಕೊಡುತ್ತೆ ಎಂದು ವಾದ ಮಾಡಿಕೊಂಡು ಬಂದಿದ್ದರು. ಇದು ಹಾಗೆ ಆಗಿದೆ ಎಂದಿದ್ದಾರೆ.
ತಮಿಳುನಾಡಿನಲ್ಲಿಯೂ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಮಕ್ಕಳ್ ನೀದಿ ಮಯ್ಯಂ (ಎಂಎನ್ಎಂ) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಸಹ ಈ ಬಾರಿ ಅದೃಷ್ಟ ಪರೀಕ್ಷೆ ಮಾಡುವ ನಿರೀಕ್ಷೆ ಇದೆ. ಇನ್ನೊಂದು ಕಡೆ ರಜನೀಕಾಂತ್ ಸಹ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದರೆ ಬಿಜೆಪಿ ನಿರಂತರವಾಗಿ ಪಕ್ಷ ಸಂಘಟನೆ ಕೆಲಸ ಮಾಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.