DK ಶಿವಕುಮಾರ್ ಮತ್ತು ಪ್ರಕಾಶ್ ರಾಜ್ ದಿಢೀರ್ ಭೇಟಿ.. ಭಾರೀ ಕುತೂಹಲ

Published : Aug 17, 2026, 05:31 PM IST
prakash raj meet cm dk shivakumar

ಸಾರಾಂಶ

ನಟ ಪ್ರಕಾಶ್ ರಾಜ್ ನೇತೃತ್ವದ ನಾಗರಿಕ ಸಂಘಟನೆಗಳ ನಿಯೋಗ ಡಿಕೆಶಿ ಅವರನ್ನು ಭೇಟಿಯಾಗಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗುತ್ತಿರುವ ಬಗ್ಗೆ ಗಂಭೀರ ಆತಂಕ ವ್ಯಕ್ತಪಡಿಸಿತು. ಮತದಾನದ ಹಕ್ಕನ್ನು ರಕ್ಷಿಸಲು ಈ ಪ್ರಕ್ರಿಯೆಯ ಕಾಲಾವಕಾಶವನ್ನು ವಿಸ್ತರಿಸುವಂತೆ ಮತ್ತು ಲೋಪದೋಷಗಳನ್ನು ಸರಿಪಡಿಸುವಂತೆ ಅವರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇಂದು ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ದಿಢೀರ್ ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. 'ಎದ್ದೇಳು ಕರ್ನಾಟಕ' ಸಂಘಟನೆಯ ನಿಯೋಗದೊಂದಿಗೆ ಆಗಮಿಸಿದ್ದ ಪ್ರಕಾಶ್ ರಾಜ್, ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಗಂಭೀರ ಲೋಪಗಳ ಕುರಿತು ಚರ್ಚೆ ನಡೆಸಿದರು.

ಗಮನ ಸೆಳೆದ ಪ್ರಮುಖರ ಭೇಟಿ

ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಎಲ್.ಕೆ.ಅಥೀಕ್ ಉಪಸ್ಥಿತರಿದ್ದರು. ಇತ್ತೀಚೆಗೆ ವೋಟರ್ ಐಡಿ ವಿವಾದ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದ ಪ್ರಕಾಶ್ ರಾಜ್ ಅವರ ಈ ಭೇಟಿ ಈಗ ಹೊಸ ಚರ್ಚೆಗೆ ಕಾರಣವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ SIR (Special Integrated Revision) ಪ್ರಕ್ರಿಯೆಯಿಂದಾಗಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಮಾಯವಾಗುವ ಆತಂಕ ಎದುರಾಗಿದೆ ಎಂದು ನಿಯೋಗವು ಸಿಎಂಗೆ ಮನವರಿಕೆ ಮಾಡಿಕೊಟ್ಟಿದೆ.

ನಿಯೋಗದ ಪ್ರಮುಖ ಆಕ್ಷೇಪಗಳು

  • ಲಕ್ಷಾಂತರ ಹೆಸರು ಡಿಲೀಟ್: ಕರ್ನಾಟಕದ ಸುಮಾರು 1.9 ಕೋಟಿಗೂ ಹೆಚ್ಚು ಮತದಾರರ ಹೆಸರುಗಳ ಪರಿಷ್ಕರಣೆ ನಡೆಯುತ್ತಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಸಹಜವಾಗಿ ಹೆಚ್ಚಿನ ಪ್ರಮಾಣದಲ್ಲಿ ಹೆಸರುಗಳನ್ನು ಕೈಬಿಡಲಾಗುತ್ತಿದೆ.
  • ಶೇ. 60ರಷ್ಟು ಡಿಲೀಷನ್ (deletion): ರಾಜ್ಯದ ಸುಮಾರು 3 ಸಾವಿರಕ್ಕೂ ಹೆಚ್ಚು ಬೂತ್‌ಗಳಲ್ಲಿ ಶೇ. 60ಕ್ಕೂ ಅಧಿಕ ಹೆಸರುಗಳನ್ನು ಡಿಲೀಟ್ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
  • ಬದುಕಿರುವವರೇ 'ಡೆಡ್'!: ಅಚ್ಚರಿಯೆಂದರೆ, ಬದುಕಿರುವವರನ್ನೇ 'ಮೃತರು' (Dead) ಎಂದು ತೋರಿಸಲಾಗುತ್ತಿದೆ. ಇನ್ನು ಬಾಡಿಗೆ ಮನೆ ಬದಲಿಸಿದವರು ಅಥವಾ ಉದ್ಯೋಗಕ್ಕಾಗಿ ಬೇರೆಡೆ ಹೋದವರನ್ನು 'ಗೈರು ಹಾಜರು' (Absent) ಎಂದು ತೋರಿಸಿ ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ.
  • ತರಬೇತಿ ಇಲ್ಲದ ಬಿಎಲ್‌ಒಗಳು: BLOಗಳಿಗೆ ಸರಿಯಾದ ತರಬೇತಿ ನೀಡದೆ ತರಾತುರಿಯಲ್ಲಿ ಈ ಪ್ರಕ್ರಿಯೆ ನಡೆಸಲಾಗುತ್ತಿದೆ. ಒಂದು ತಿಂಗಳ ಅಲ್ಪಾವಧಿಯಲ್ಲಿ ಮನೆಮನೆಗೆ ತೆರಳಿ ನಿಖರ ಪರಿಷ್ಕರಣೆ ಮಾಡುವುದು ಅಸಾಧ್ಯ ಎಂದು ಸಂಘಟನೆ ದೂರಿದೆ.

ಸಿಎಂಗೆ ಸಲ್ಲಿಸಿದ ಪ್ರಮುಖ ಬೇಡಿಕೆಗಳು

ಸಮಯ ವಿಸ್ತರಣೆ: ತರಾತುರಿಯಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯನ್ನು ಕನಿಷ್ಠ ಮೂರು ತಿಂಗಳು ವಿಸ್ತರಿಸುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಬೇಕು.

ಫಾರ್ಮ್ 6 ಮತ್ತು 8 ವಿತರಣೆ: ಮತ್ತೊಮ್ಮೆ ಮನೆಮನೆಗೆ ತೆರಳಿ ಸ್ಥಳಾಂತರಗೊಂಡ ಮತದಾರರಿಗೆ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅವಕಾಶ ನೀಡಬೇಕು.

ಜಾಗೃತಿ ಅಭಿಯಾನ: ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ಸರ್ಕಾರದಿಂದಲೇ ವ್ಯಾಪಕ ಜನಜಾಗೃತಿ ಅಭಿಯಾನ ನಡೆಸಬೇಕು.

ಅರ್ಹ ಮತದಾರರ ಹಕ್ಕು ಕಸಿದುಕೊಳ್ಳಲು ಕರ್ನಾಟಕ ಒಪ್ಪುವುದಿಲ್ಲ ಎಂದು ಈ ಸಂದರ್ಭದಲ್ಲಿ ನಿಯೋಗವು ಖಡಕ್ ಆಗಿ ಹೇಳಿದೆ. ಪ್ರಕಾಶ್ ರಾಜ್ ಅವರ ಈ ನಡೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಚ್ಚರಿಯ ಕಾರಣ ಕೊಟ್ಟು ಬಿಜೆಪಿಗೆ ಗುಡ್‌ಬೈ ಹೇಳಿದ ಖ್ಯಾತ ನಟ ದೇವನ್; ಕೇರಳ ರಾಜಕೀಯದಲ್ಲಿ ಸಂಚಲನ
ಅತ್ಯಂತ ವಿದ್ಯಾವಂತೆ.. ನಲಪಾಡ್ ಕೈಹಿಡಿದ ಮಲಿಹಾ ಫಾತಿಮಾ ಯಾರು?