
ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇಂದು ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ದಿಢೀರ್ ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. 'ಎದ್ದೇಳು ಕರ್ನಾಟಕ' ಸಂಘಟನೆಯ ನಿಯೋಗದೊಂದಿಗೆ ಆಗಮಿಸಿದ್ದ ಪ್ರಕಾಶ್ ರಾಜ್, ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಗಂಭೀರ ಲೋಪಗಳ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಎಲ್.ಕೆ.ಅಥೀಕ್ ಉಪಸ್ಥಿತರಿದ್ದರು. ಇತ್ತೀಚೆಗೆ ವೋಟರ್ ಐಡಿ ವಿವಾದ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದ ಪ್ರಕಾಶ್ ರಾಜ್ ಅವರ ಈ ಭೇಟಿ ಈಗ ಹೊಸ ಚರ್ಚೆಗೆ ಕಾರಣವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ SIR (Special Integrated Revision) ಪ್ರಕ್ರಿಯೆಯಿಂದಾಗಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಮಾಯವಾಗುವ ಆತಂಕ ಎದುರಾಗಿದೆ ಎಂದು ನಿಯೋಗವು ಸಿಎಂಗೆ ಮನವರಿಕೆ ಮಾಡಿಕೊಟ್ಟಿದೆ.
ಸಮಯ ವಿಸ್ತರಣೆ: ತರಾತುರಿಯಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯನ್ನು ಕನಿಷ್ಠ ಮೂರು ತಿಂಗಳು ವಿಸ್ತರಿಸುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಬೇಕು.
ಫಾರ್ಮ್ 6 ಮತ್ತು 8 ವಿತರಣೆ: ಮತ್ತೊಮ್ಮೆ ಮನೆಮನೆಗೆ ತೆರಳಿ ಸ್ಥಳಾಂತರಗೊಂಡ ಮತದಾರರಿಗೆ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅವಕಾಶ ನೀಡಬೇಕು.
ಜಾಗೃತಿ ಅಭಿಯಾನ: ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ಸರ್ಕಾರದಿಂದಲೇ ವ್ಯಾಪಕ ಜನಜಾಗೃತಿ ಅಭಿಯಾನ ನಡೆಸಬೇಕು.
ಅರ್ಹ ಮತದಾರರ ಹಕ್ಕು ಕಸಿದುಕೊಳ್ಳಲು ಕರ್ನಾಟಕ ಒಪ್ಪುವುದಿಲ್ಲ ಎಂದು ಈ ಸಂದರ್ಭದಲ್ಲಿ ನಿಯೋಗವು ಖಡಕ್ ಆಗಿ ಹೇಳಿದೆ. ಪ್ರಕಾಶ್ ರಾಜ್ ಅವರ ಈ ನಡೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.