ಕೈ ಟಿಕೆಟ್ ಘೋಷಣೆ ಬೆನ್ನಲ್ಲೇ ಬೆಳಗಾವಿಯಲ್ಲಿ ಭಿನ್ನಮತ ಸ್ಫೋಟ, ಸಿದ್ದರಾಮಯ್ಯ ನಿವಾಸಕ್ಕೆ ಸ್ವಾಮೀಜಿಗಳ ದೌಡು!

By Gowthami KFirst Published Mar 25, 2023, 2:45 PM IST
Highlights

ಕಾಂಗ್ರೆಸ್ ಮೊದಲ ಅಭ್ಯರ್ಥಿ ಪಟ್ಟಿ ಘೋಷಣೆ ಮಾಡುತ್ತಿದ್ದಂತೆಯೇ  ಬೆಳಗಾವಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ರಾಮದುರ್ಗ ‌ಕ್ಷೇತ್ರದಿಂದ ಅಶೋಕ್ ಪಟ್ಟಣಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ಈಗ ಬಂಡಾಯದ ಕೂಗು ಕೇಳಿಸಿದೆ.

ಬೆಳಗಾವಿ (ಮಾ.25): ಕಾಂಗ್ರೆಸ್ ಮೊದಲ ಅಭ್ಯರ್ಥಿ ಪಟ್ಟಿ ಘೋಷಣೆ ಮಾಡುತ್ತಿದ್ದಂತೆಯೇ  ಬೆಳಗಾವಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ರಾಮದುರ್ಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅರ್ಜುನ ಗುಡ್ಡದ ಬಂಡಾಯ ಏಳುವ  ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶೋಕ ಪಟ್ಟಣ ಅವರು ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ವೈಯಕ್ತಿಕ ತೇಜೊವಧೆ ಮಾಡುತ್ತಿದ್ದಾರೆ. ನಾವು ಟಿಕೆಟ್ ಕೇಳಿದ ಹಿನ್ನೆಲೆ ಅವರು ನಮ್ಮ ಮೇಲೆ ತೇಜೋವಧೆ ಮಾಡುತ್ತಿದ್ದಾರೆ. ಅಶೋಕ ಪಟ್ಟಣ ಈ ಕೂಡಲೇ   ಕ್ಷಮೆ ಕೇಳಬೇಕು.  ಅಶೋಕ ಪಟ್ಟಣಗೆ ಯಾವ ಆಧಾರದ ಮೇಲೆ ಟಿಕೆಟ್ ಕೊಟ್ಟಿದ್ದಾರೆ ಗೊತ್ತಿಲ್ಲ.  ‌ಅವರು ಕಾಂಗ್ರೆಸ್ ಆಭ್ಯರ್ಥಿ ಆದರೆ ನಾನು ಬಂಡಾಯ ಅಭ್ಯರ್ಥಿ ಆಗಿ ಸ್ಪರ್ಧಿಸಿ, ಗೆಲ್ಲುವ ಮೂಲಕ ಅಶೋಕ ಪಟ್ಟಣಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ಚಾಲೆಂಜ್ ಹಾಕಿದ್ದಾರೆ.

ಕಾಂಗ್ರೆಸ್ ಮೊದಲ‌ ಪಟ್ಚಿಯಲ್ಲಿ ತಂದೆ-ಮಕ್ಕಳ ದರ್ಬಾರ್! ಯಾರಿಗೆಲ್ಲ ಸಿಕ್ತು ಟಿಕೆಟ್?

ರಾಮದುರ್ಗ ‌ಕ್ಷೇತ್ರದಿಂದ ಅಶೋಕ್ ಪಟ್ಟಣಗೆ ಟಿಕೆಟ್ ಘೋಷಣೆಯಾಗಿದೆ.  ಅಶೋಕ್ ಪಟ್ಟಣ ಸಿದ್ದರಾಮಯ್ಯ ಆಪ್ತನಾಗಿದ್ದಾರೆ. ಟಿಕೆಟ್ ಘೋಷಣೆ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಸ್ವಾಮೀಜಿಗಳು ದೌಡಾಯಿಸಿ ಚಿಕ್ಕರೇವಣ್ಣಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಬಂಡಾಯ ಅಭ್ಯರ್ಥಿ ಆಗಿ ಚಿಕ್ಕರೇವಣ್ಣ ಅವರನ್ನ ನಿಲ್ಲಿಸುತ್ತೇವೆ ಎಂದು  ಬೆಂಬಲಿಗರು ಹೇಳಿದ್ದಾರೆ.

ಜಾತಿವಾರು ಟಿಕೆಟ್ ಹಂಚಿದ ಕಾಂಗ್ರೆಸ್! ಯಾವ ಜಾತಿಗೆ ಎಷ್ಟು ಟಿಕೆಟ್ ಲಭಿಸಿದೆ? ವ್ಯಾಪಕ ಚರ್ಚೆ

ಕೆಲ ದಿನಗಳ ಹಿಂದೆ ಅಶೋಕ್ ಪಟ್ಟಣ ಹಾಗೂ ಚಿಕ್ಕರೇವಣ್ಣ ಜೊತೆ ಸಿದ್ದರಾಮಯ್ಯ ಸಂಧಾನ ಸಭೆ ನಡೆಸಿದ್ದರು. ಆದರೂ ಬೆಳಗಾವಿಯಲ್ಲಿ ಸಿದ್ದರಾಮಯ್ಯ ಮನೆಗೆ ಚಿಕ್ಕರೇವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಇದಾಗಿ ಈಗ ಸಿದ್ದರಾಮಯ್ಯ ‌ನಿವಾಸಕ್ಕೆ ಆಗಮಿಸಿದ ಸ್ವಾಮೀಜಿಗಳು, ಬೆಂಬಲಿಗರು ಬಂಡಾಯ ಅಭ್ಯರ್ಥಿ ಆಗಿ ಚಿಕ್ಕರೇವಣ್ಣ ಅವರನ್ನು ನಿಲ್ಲಿಸುತ್ತೇವೆ ಎಂದು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.

ಕಾಂಗ್ರೆಸ್‌ ಸಂಪೂರ್ಣ ಪಟ್ಟಿ
ಚಿಕ್ಕೋಡಿ - ಗಣೇಶ್ ಹುಕ್ಕೇರಿ
ಕಾಗವಾಡ - ಭೀಮಗಗೌಡ ಕಾಗೆ
ಕುಡಚಿ - ಮಹೇಂದ್ರ ಕೆ
ಹುಕ್ಕೇರಿ - ಎ.ಬಿ.ಪಾಟೀಲ್
ಯಮಕನಮಡಿ - ಸತೀಶ್ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ - ಲಕ್ಷ್ಮಿ ಹೆಬ್ಬಾಳ್ಕರ್
ದೇವನಹಳ್ಳಿ - ಕೆ.ಎಚ್.ಮುನಿಯಪ್ಪ
ಖಾನಾಪು - ಅಂಜಲಿ ನಿಂಬಾಳ್ಕರ್
ಬೈಲಹೊಂಗಲ - ಮಹಾಂತೇಶ್ ಕೌಜಲಗಿ
ರಾಮದುರ್ಗ - ಅಶೋಕ್ ಪಟ್ಟಣ್
ಜಮಖಂಡಿ - ಆನಂದ್ ನ್ಯಾಮಗೌಡ
ಹುನಗುಂದ - ವಿಜಯಾನಂದ ಕಾಶಪ್ಪನವರ್
ಮುದ್ದೇಬಿಹಾಳ - ಅಪ್ಪಾಜಿ ನಾಡಗೌಡ
ಬಸವನ ಬಾಗೇವಾಡಿ - ಶಿವಾನಂದ ಪಾಟೀಲ್
ಬಬಲೇಶ್ವರ್ - ಎಂ.ಬಿ.ಪಾಟೀಲ್
ಇಂಡಿ - ಯಶವಂತರಾಯ ಗೌಡ ಪಾಟೀಲ್
ಜೇವರ್ಗಿ - ಅಜಯ್ ಸಿಂಗ್
ಸುರಪುರ - ರಾಜಾವೆಂಕಟಪ್ಪ ನಾಯಕ
ಶಹಪುರ_ಶರಣಬಸಪ್ಪ ಗೌಡ
ಚಿತ್ತಾಪುರ - ಪ್ರಿಯಾಂಕ್ ಖರ್ಗೆ
ಸೇಡಂ - ಶರಣಪ್ರಕಾಶ್ ಪಾಟೀಲ್
ಚಿಂಚೋಳಿ - ಸುಭಾಷ್ ರಾಠೋಡ್
ಕಲಬುರಗಿ ಉತ್ತರ - ಕನಿಜ ಫಾತಿಮಾ
ಆಳಂದ - ಬಿ.ಎಆರ್.ಪಾಟೀಲ್
ಹುಮ್ನಾಬಾದ್ - ರಾಜಶೇಖರ್ ಪಾಟೀಲ್
ಬೀದರ್ ದಕ್ಷಿಣ - ಅಶೋಕ್ ಖೇಣಿ
ಬೀದರ್ - ರಹೀಂ ಖಾನ್
ಬಾಲ್ಕಿ - ಈಶ್ವರ್ ಖಂಡ್ರೆ
ರಾಯಚೂರು ಗ್ರಾಮೀಣ - ಬಸನಗೌಡ ದದ್ದಲ್
ಮಸ್ಕಿ - ಬಸನಗೌಡ ತುರ್ವಿಹಾಳ
ಕುಷ್ಟಗಿ - ಅಮರೇಗೌಡ ಬಯ್ಯಾಪುರ
ಕನಕಗಿರಿ - ಶಿವರಾಜ್ ತಂಗಡಗಿ
ಯಲಬುರ್ಗಾ - ಬಸವರಾಜ ರಾಯರೆಡ್ಡಿ
ಕೊಪ್ಪಳ - ರಾಘವೇಂದ್ರ ಹಿಟ್ನಾಳ್
ಗದಗ - ಎಚ್.ಕೆ.ಪಾಟೀಲ್
ರೋಣ - ಜಿ.ಎಸ್.ಪಾಟೀಲ್
ಹುಬ್ಬಳ್ಳಿ-ಧಾರವಾಡ (ಪೂರ್ವ) - ಪ್ರಸಾದ್ ಅಬ್ಬಯ್ಯ
ಹಳಿಯಾಳ- ಆರ್.ವಿ.ದೇಶಪಾಂಡೆ
ಕಾರವಾರ - ಸತೀಶ್ ಸೈಲ್
ಭಟ್ಕಳ - ಮಂಕಾಳ ವೈದ್ಯ
ಹಾನಗಲ್ - ಶ್ರೀನಿವಾಸ್ ಮಾನೆ
ಹಾವೇರಿ - ರುದ್ರಪ್ಪ ಲಮಾಣಿ
ಬ್ಯಾಡಗಿ - ಬಸವರಾಜ ಶಿವಣ್ಣನವರ್
ಹಿರೆಕೇರೂರು - ಯು.ಬಿ.ಬಣಕಾರ್
ರಾಣೆಬೆನ್ನೂರು - ಪ್ರಕಾಶ್ ಕೋಳಿವಾಡ
ಹೂವಿನ ಹಡಗಲಿ - ಪರಮೇಶ್ವರ್ ನಾಯ್ಕ್
ಹಗರಿಬೊಮ್ಮನಹಳ್ಳಿ - ಭೀಮಾನಾಯ್ಕ್
ವಿಜಯನಗರ - ಎಚ್.ಆರ್.ಗವಿಯಪ್ಪ
ಕಂಪ್ಲಿ - ಗಣೇಶ್
ಬಳ್ಳಾರಿ ಗ್ರಾಮೀಣ - ನಾಗೇಂದ್ರ
ಸಂಡೂರು - ತುಕಾರಾಂ
ಚಳ್ಳಕೆರೆ - ರಘುಮೂರ್ತಿ
ಹಿರಿಯೂರು - ಡಿ.ಸುಧಾಕರ್
ಹೊಸದುರ್ಗ - ಗೋವಿಂದಪ್ಪ
ದಾವಣಗೆರೆ ಉತ್ತರ- ಎಸ್.ಎಸ್ ಮಲ್ಲಿಕಾರ್ಜುನ್
ದಾವಣಗೆರೆ ದಕ್ಷಿಣ - ಶಾಮನೂರು ಶಿವಶಂಕರಪ್ಪ
ಮಾಯಕೊಂಡ - ಕೆ.ಎಸ್.ಬಸವರಾಜ್
ಭದ್ರಾವತಿ - ಸಂಗಮೇಶ್ವರ್
ಸೊರಬ - ಮಧು ಬಂಗಾರಪ್ಪ
ಸಾಗರ - ಬೇಳೂರು ಗೋಪಾಲಕೃಷ್ಣ
ಬೈಂದೂರು - ಗೋಪಾಲ್ ಪೂಜಾರಿ
ಕುಂದಾಪುರ - ದಿನೇಶ್ ಹೆಗಡೆ
ಕಾಪು - ವಿನಯ್ ಕುಮಾರ್ ಸೊರಕೆ
ಶೃಂಗೇರಿ - ಟಿಡಿ ರಾಜೇಗೌಡ
ಚಿಕ್ಕನಾಯಕನಹಳ್ಳಿ - ಕಿರಣ್ ಕುಮಾರ್
ತಿಪಟೂರು - ಷಡಕ್ಷರಿ
ತುರುವೆಕೆರೆ - ಬೆಮೆಲ್ ಕಾಂತರಾಜ್
ಕುಣಿಗಲ್ - ರಂಗನಾಥ್
ಕೊರಟಗೆರೆ - ಪರಮೇಶ್ವರ್
ಶಿರಾ - ಟಿಬಿ ಜಯಚಂದ್ರ
ಪಾವಗಡ - ಎಚ್ವಿ ವೆಂಕಟೇಶ್
ಮಧುಗಿರಿ - ಕೆಎನ್ ರಾಜಣ್ಣ
ಗೌರಿಬಿದನೂರು ಶಿವಶಂಕರ ರೆಡ್ಡಿ
ಬಾಗೇಪಲ್ಲಿ - ಎಸ್.ಎನ್.ಸುಬ್ಬಾರೆಡ್ಡಿ
ಚಿಂತಾಮಣಿ - ಎಂಸಿ ಸುಧಾಕರ್
ಶ್ರೀನಿವಾಸಪುರ - ರಮೇಶ್ ಕುಮಾರ್
ಕೆಜಿಎಫ್ - ರೂಪಾ ಶಶೀಧರ್
ಬಂಗಾರಪೇಟೆ - ನಾರಾಯಣಸ್ವಾಮಿ
ಮಾಲೂರು - ನಂಜೇಗೌಡ
ಬ್ಯಾಟರಾಯನಪುರ - ಕೃಷ್ಣಭೈರೇಗೌಡ
ಆರ್.ಆರ್.ನಗರ - ಕುಸುಮಾ
ಮಲ್ಲೇಶ್ವರಂ - ಅನೂಪ್ ಅಯ್ಯಂಗಾರ್
ಹೆಬ್ಬಾಳ - ಭೈರತಿ ಸುರೇಶ್
ಸರ್ವಜ್ಞನಗರ - ಕೆಜೆ ಜಾರ್ಜ್
ಶಿವಾಜಿನಗರ - ರಿಜ್ವಾನ್ ಅರ್ಷದ್
ಶಾಂತಿನಗರ - ಎನ್.ಎಹ್ಯಾರಿಸ್
ಗಾಂಧಿನಗರ - ದಿನೇಶ್ ಗುಂಡೂರಾವ್
ರಾಜಾಜಿನಗರ - ಪುಟ್ಟಣ್ಣ
ಗೋವಿಂದರಾಜನಗರ - ಪ್ರಿಯಾಕೃಷ್ಣ
ವಿಜಯನಗರ - ಎಂ.ಕೃಷ್ಣಪ್ಪ
ಚಾಮರಾಜಪೇಟೆ - ಜಮೀರ್ ಅಹ್ಮದ್ ಖಾನ್
ಬಸವನಗುಡಿ - ಯುಬಿ ವೆಂಕಟೇಶ್
ಬಿಟಿಎಂ ಲೇಔಟ್ - ರಾಮಲಿಂಗಾರೆಡ್ಡಿ
ಜಯನಗರ - ಸೌಮ್ಯಾ ರೆಡ್ಡಿ
ಮಹದೇವಪುರ - ನಾಗೇಶ್
ಆನೇಕಲ್ - ಶಿವಣ್ಣ
ಹೊಸಕೋಟೆ - ಶರತ್ ಬಚ್ಚೇಗೌಡ
ದೇವನಹಳ್ಳಿ - ಕೆ.ಎಚ್.ಮುನಿಯಪ್ಪ
ದೊಡ್ಡಬಳ್ಳಾಪುರ - ವೆಂಕಟರಾಮಯ್ಯ
ನೆಲಮಂಗಲ - ಶ್ರೀನಿವಾಸ್ ಎನ್
ಮಾಗಡಿ - ಬಾಲಕೃಷ್ಣ
ರಾಮನಗರ - ಇಕ್ಬಾಲ್ ಹುಸೇನ್
ಕನಕಪುರ - ಡಿಕೆ ಶಿವಕುಮಾರ್
ಮಳವಳ್ಳಿ - ನರೇಂದ್ರ ಸ್ವಾಮಿ
ಶ್ರೀರಂಗಪಟ್ಟಣ - ರಮೇಶ್ ಬಂಡಿಸಿದ್ದೇಗೌಡ
ನಾಗಮಂಗಲ - ಚಲುವರಾಯಸ್ವಾಮಿ
ಹೊಳೆನರಸೀಪುರ - ಶ್ರೇಯಸ್ ಪಟೇಲ್
ಸಕಲೇಶಪುರ - ಮುರಳಿ ಮೋಹನ್
ಬೆಳ್ತಂಗಡಿ - ರಕ್ಷಿತ್ ಶಿವರಾಮ್
ಮೂಡಬಿದ್ರೆ - ಮಿಥುನ್ ರೈ
ಮಂಗಳೂರು - ಯುಟಿ ಖಾದರ್
ಬಂಟ್ವಾಳ - ರಮಾನಾಥ್ ರೈ
ಸುಳ್ಯ - ಕೃಷ್ಣಪ್ಪ ಜಿ
ವಿರಾಜಪೇಟೆ - ಪೊನ್ನಣ್ಣ
ಪಿರಿಯಾಪಟ್ಟಣ - ಕೆ.ವೆಂಕಟೇಶ್
ಕೆ.ಆರ್.ನಗರ - ಡಿ.ರವಿಶಂಕರ್
ಹುಣಸೂರು - ಎಚ್.ಪಿ.ಮಂಜುನಾಥ್
ಎಚ್.ಡಿ.ಕೋಟೆ - ಅನಿಲ್ ಚಿಕ್ಕಮಾದು
ನಂಜನಗೂರು -ದರ್ಶನ್ ಧ್ರುವನಾರಾಯಣ
ನರಸಿಂಹರಾಜ - ತನ್ವೀರ್ ಸೇಠ್
ವರುಣಾ - ಸಿದ್ದರಾಮಯ್ಯ
ಟಿ.ನರಸಿಪುರ - ಎಚ್.ಸಿ.ಮಹದೇವಪ್ಪ
ಹನೂರು - ನರೇಂದ್ರ
ಚಾಮರಾಜನಗರ - ಪುಟ್ಟರಂಗಶೆಟ್ಟಿ
ಗುಂಡ್ಲುಪೇಟೆ - ಗಣೇಶ್ ಪ್ರಸಾದ್

click me!