ಬ್ಲ್ಯಾಕ್ ಮೇಲ್, ಸಿಡಿ.. ಸೈನಿಕ ಮಾಧ್ಯಮಗಳಿಗೆ ನೀಡಿದ ಸಂದೇಶ!

Published : Jan 14, 2021, 04:23 PM IST
ಬ್ಲ್ಯಾಕ್ ಮೇಲ್, ಸಿಡಿ.. ಸೈನಿಕ  ಮಾಧ್ಯಮಗಳಿಗೆ ನೀಡಿದ ಸಂದೇಶ!

ಸಾರಾಂಶ

ನಾನು ಸದ್ಯಕ್ಕೆ ಮಾಧ್ಯಮಕ್ಕೆ ಮಾತಾಡಲ್ಲ ಎಂದ ಸಿಪಿ ಯೋಗೇಶ್ವರ್/ ರೇಣುಕಾಚಾರ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ಸಿಪಿ ಯೋಗೇಶ್ವರ್ ನಕಾರ/ ಇನ್ನೂ ಹದಿನೈದು ಇಪ್ಪತ್ತು ವರ್ಷ ಇರ್ತೀನಿ/ ನಿಧಾನಕ್ಕೆ ಮಾತಾಡ್ತೀನಿ, ಈಗಲೇ ಏನೂ ಹೇಳಲ್ಲ ಅಂದ ಯೋಗೇಶ್ವರ್

ಬೆಂಗಳೂರು( ಜ.  14)  ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ನಂತರ ಬಿಜೆಪಿಯ ರೆಬಲ್ ಶಾಸಕರಿಂದ ಅತಿ ಹೆಚ್ಚು ಕೋಪಕ್ಕೆ ಗುರಿಯಾಗಿರುವುದು ನೂತನ ಸಚಿವ ಸಿಪಿ ಯೋಗೇಶ್ವರ.  ಯತ್ನಾಳ್, ರೇಣುಕಾಚಾರ್ಯ, ವಿಶ್ವನಾಥ್ ಯೋಗೇಶ್ವರ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ.

ಈ ಬಗ್ಗೆ ಸೈನಿಕನನ್ನು ಕೇಳಿದರೆ ಅವರು ಜಾಣ್ಮೆ ಪ್ರದರ್ಶನ ಮಾಡಿದ್ದಾರೆ.  ನಾನು ಸದ್ಯಕ್ಕೆ ಮಾಧ್ಯಮಕ್ಕೆ ಮಾತಾಡಲ್ಲ ಎನ್ನುತ್ತಾ ರೇಣುಕಾಚಾರ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ಸಿಪಿ ನಿರಾಕರಿಸಿದರು. ಇನ್ನೂ ಹದಿನೈದು ಇಪ್ಪತ್ತು ವರ್ಷ ಇರ್ತೀನಿ.  ನಿಧಾನ ಕ್ಕೆ ಮಾತಾಡ್ತೀನಿ, ಈಗಲೇ ಏನೂ ಹೇಳಲ್ಲ ಅಂದ ಯೋಗೇಶ್ವರ್ ಎನ್ನುತ್ತ ಮುಂದೆ ಸಾಗಿದರು.

ಸಿಎಂ ವಿರುದ್ಧವೇ ನೋವು ತೋಡಿಕೊಂಡ ರೇಣುಕಾ

ಸೋತವರನ್ನು ಮಂತ್ರಿ ಮಾಡಲಾಗಿದೆ, ಸಿಡಿ ಇಟ್ಟುಕೊಂಡು, ಬ್ಲಾಕ್ ಮೇಲ್ ಮಾಡಿದವರನ್ನು ಮಂತ್ರಿ ಮಾಡಲಾಗಿದೆ ಎಂಬ ಆರೋಪವನ್ನು ನಾಯಕರು ಮಾಡಿದ್ದರು.  ಇದಾವುದೂ ತಮಗೆ ಸಂಬಂಧ ಇಲ್ಲ ಎಂದು ಯೋಗೇಶ್ವರ ಯಾವ ಖಾತೆ ಸಿಗಲಿದೆ ಎಂಬ ಆಸೆಕಣ್ಣಿನಿಂದ ಮುಂದೆ ಸಾಗಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ