
ಬೆಂಗಳೂರು [ನ.06]: ನಾನು ನನ್ನ ಮಗನನ್ನು ಬೆಂಬಲಿಸಬೇಕೋ ಅಥವಾ ಬೇಡವೋ ಎಂಬುದನ್ನು ಅನರ್ಹ ಶಾಸಕರ ಕುರಿತು ಸುಪ್ರೀಂಕೋರ್ಟ್ ನೀಡುವ ತೀರ್ಪಿನ ನಂತರ ಪ್ರಕಟಿಸುತ್ತೇನೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಮಾರ್ಮಿಕವಾಗಿ ಹೇಳಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾನು ತಬ್ಬಲಿ ಮಗುವಾದೆ ಎಂಬ ಪುತ್ರ ಶರತ್ ಬಚ್ಚೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದರು.
ನನ್ನ ಕ್ಷೇತ್ರಕ್ಕೆ ಕೈ ಹಾಕಿದರೆ ಕೈ ಕತ್ತರಿಸುವೆ! ಎಚ್ಚರಿಸಿದ ಶಾಸಕ...
ಶರತ್ ಯಾಕೆ ಹಾಗೆ ಹೇಳಿದ್ದಾರೊ ಗೊತ್ತಿಲ್ಲ. ನಾನು ಬಿಜೆಪಿಯ ಸಂಸದನಾಗಿದ್ದೇನೆ. ನನ್ನ ಮಗನೂ ಬಿಜೆಪಿಯಲ್ಲಿಯೇ ಇದ್ದಾನೆ. ನಾನು ಮಗನಿಗೆ ಬೆಂಬಲ ಕೊಡಬೇಕೋ ಅಥವಾ ಬೇಡವೋ ಎಂಬುದನ್ನು ಸುಪ್ರೀಂಕೋರ್ಟ್ ಅನರ್ಹ ಶಾಸಕರ ಕುರಿತು ನೀಡುವ ತೀರ್ಪಿನ ನಂತರ ಪ್ರಕಟಿಸುತ್ತೇನೆ. ಈಗಲೇ ಬೆಂಬಲ ಕೊಡುವ ಮಾತು ಉದ್ಭವಿಸುವುದಿಲ್ಲ. ಪಕ್ಷ ಕೈಗೊಳ್ಳುವ ತೀರ್ಮಾನದ ಮೇಲೆ ನನ್ನ ನಿರ್ಧಾರ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಹೊಸಕೋಟೆಯಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಅನಾರೋಗ್ಯದ ಕಾರಣದಿಂದಾಗಿ ಆಗಮಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.