
ವಿಜಯಪುರ(ಆ.20): ಎರಡೂವರೆ ವರ್ಷ ಬಳಿಕ ಸಂಪುಟದ ಹಿರಿಯ ಸಚಿವರು ಬೇರೆಯವರಿಗೆ ಅಧಿಕಾರ ಬಿಟ್ಟುಕೊಡಬೇಕೆಂಬ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿಕೆ ಬೆನ್ನಲ್ಲೇ ಇದೀಗ ಶಾಸಕ ವಿನಯ್ ಕುಲಕರ್ಣಿ ಕೂಡ ಸಚಿವ ಸಂಪುಟ ಬದಲಾವಣೆಯ ಸುಳಿವು ನೀಡಿದ್ದಾರೆ. ಎರಡೂವರೆ ವರ್ಷ ಬಳಿಕ ರಾಜ್ಯ ಸಚಿವ ಸಂಪುಟದ ಇಡೀ ತಂಡ ಬದಲಾಗಲಿದೆ. ಆಗ ಹೊಸಬರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ನಿಂದ ಈ ಬಾರಿ ನಿರೀಕ್ಷೆಗೂ ಮೀರಿ 136 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಪೈಕಿ ಕೇವಲ 34 ಶಾಸಕರಿಗೆ ಸಚಿವರಾಗಲು ಅವಕಾಶವಿದೆ. ಎಲ್ಲ ಶಾಸಕರನ್ನೂ ಸಚಿವರನ್ನಾಗಿ ಮಾಡಲು ಸಾಧ್ಯವಿಲ್ಲ. ಎರಡೂವರೆ ವರ್ಷ ನಂತರ ಸಚಿವ ಸಂಪುಟ ಬದಲಾವಣೆ ಆಗಲಿದೆ. ಆಗ ಹೊಸಬರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಇದರಿಂದಾಗಿ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡವರ ಅತೃಪ್ತಿ ಶಮನವಾಗಲಿದೆ ಎಂದರು.
ಸದ್ಯಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ: ಸಚಿವ ಮುನಿಯಪ್ಪ
ಸಚಿವ ಸಂಪುಟ ಬದಲಾವಣೆ ಕುರಿತು ಈಗಾಗಲೇ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಅವರು ಸಚಿವರ ತಂಡ ಬದಲಾವಣೆ ಆಗಬೇಕು ಎಂದಿರುವುದು ಸೂಕ್ತವಾಗಿದೆ. ಇದು ಸಂತಸದ ಸಂಗತಿ. ನಿಗಮ-ಮಂಡಳಿಗಳಿಗೆ 30 ಶಾಸಕರಂತೆ 2 ಬಾರಿ ನೇಮಕವಾದರೆ, ಎರಡು ಬಾರಿ ಸಚಿವರು ಬದಲಾವಣೆಯಾದರೆ ಬಹುತೇಕ ಎಲ್ಲ ಶಾಸಕರಿಗೂ ಅಧಿಕಾರ ಸಿಕ್ಕಂತಾಗಲಿದೆ ಎಂದರು.
ಇದೇ ವೇಳೆ ಮುಖ್ಯಮಂತ್ರಿ ಬದಲಾವಣೆ ಏನಿದ್ದರೂ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ ಅವರು, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಡಿ.ಕೆ.ಶಿವಕುಮಾರ್ ಯಾರ ಬಳಿಯೂ ಹೋಗಿಲ್ಲ. ಸಿದ್ದರಾಮಯ್ಯ ಅವರನ್ನು ದುರ್ಬಲ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ನುಡಿದಂತೆ ನಡೆದಿರುವ ಕಾಂಗ್ರೆಸ್ ಸರ್ಕಾರ: ಸಚಿವ ಮುನಿಯಪ್ಪ
ಮುನಿಯಪ್ಪ ಹೇಳಿದ್ದೆನು?
ಎರಡೂವರೆ ವರ್ಷ ಬಳಿಕ ಸಂಪುಟದ ಹಿರಿಯ ಸಚಿವರು ಬೇರೆಯವರಿಗೆ ಅಧಿಕಾರ ಬಿಟ್ಟುಕೊಡಬೇಕು ಎಂದು ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದರು. ಈ ಹೇಳಿಕೆಗೆ ಕೆಲ ಸಚಿವರಿಂದ ವಿರೋಧ ವ್ಯಕ್ತವಾಗಿತ್ತು.
ವಿನಯ್ ವಾದವೇನು?
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಈ ಬಾರಿ ನಿರೀಕ್ಷೆಗೂ ಮೀರಿ 136 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಪೈಕಿ ಕೇವಲ 34 ಶಾಸಕರಿಗೆ ಸಚಿವರಾಗಲು ಅವಕಾಶವಿದೆ. ಎಲ್ಲ ಶಾಸಕರನ್ನೂ ಸಚಿವರನ್ನಾಗಿ ಮಾಡಲು ಸಾಧ್ಯವಿಲ್ಲ. ಎರಡೂವರೆ ವರ್ಷ ನಂತರ ಸಚಿವ ಸಂಪುಟ ಬದಲಾವಣೆ ಆಗಲಿದೆ. ಆಗ ಹೊಸಬರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.