ಮತ್ತೆ ಸಿದ್ದು, ಡಿಕೆಶಿ ಒಳಬೇಗುದಿ ಬಹಿರಂಗ: ಅಕ್ಕಪಕ್ಕ ಅರ್ಧಗಂಟೆ ಕೂತಿದ್ದರೂ ಮಾತಿಲ್ಲ..!

Published : Sep 18, 2022, 07:36 AM IST
ಮತ್ತೆ ಸಿದ್ದು, ಡಿಕೆಶಿ ಒಳಬೇಗುದಿ ಬಹಿರಂಗ: ಅಕ್ಕಪಕ್ಕ ಅರ್ಧಗಂಟೆ ಕೂತಿದ್ದರೂ ಮಾತಿಲ್ಲ..!

ಸಾರಾಂಶ

ಉಭಯ ನಾಯಕರ ನಡುವಿನ ಬಿಗುಮಾನ ಪ್ರದರ್ಶನಕ್ಕೆ ಮತ್ತೊಮ್ಮೆ ವೇದಿಕೆಯಾದ ಮಂಡ್ಯದಲ್ಲಿ ನಡೆದ ಭಾರತ್‌ ಜೋಡೋ ಯಾತ್ರೆಯ ಪೂರ್ವಭಾವಿ ಸಭೆ 

ಮಂಡ್ಯ(ಸೆ.18):  ಕಾಂಗ್ರೆಸ್‌ನೊಳಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಡುವಿನ ಒಳಬೇಗುದಿ ಮತ್ತೆ ಬಹಿರಂಗವಾಗಿದೆ. ಮಂಡ್ಯದಲ್ಲಿ ನಡೆದ ಭಾರತ್‌ ಜೋಡೋ ಯಾತ್ರೆಯ ಪೂರ್ವಭಾವಿ ಸಭೆ ಉಭಯ ನಾಯಕರ ನಡುವಿನ ಬಿಗುಮಾನ ಪ್ರದರ್ಶನಕ್ಕೆ ಮತ್ತೊಮ್ಮೆ ವೇದಿಕೆಯಾಯಿತು. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಶುಕ್ರವಾರವಷ್ಟೇ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯ ಮತ್ತು ಅವರ ಬಣದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದರ ಬೆನ್ನಲ್ಲೇ ಇದೀಗ ಮಂಡ್ಯದ ಸುಮರವಿ ಕಲ್ಯಾಣಮಂದಿರದಲ್ಲಿ ಶನಿವಾರ ನಡೆದ ಸಭೆಯಲ್ಲಿ ಉಭಯ ನಾಯಕರು ಪರಸ್ಪರ ಬಿಗುಮಾನ ಪ್ರದರ್ಶಿಸಿದರು.

ಪೂರ್ವಭಾವಿ ಸಭೆ ಬೆಳಗ್ಗೆ 11.30ಕ್ಕೆ ನಿಗದಿಯಾಗಿತ್ತು. ಮಧ್ಯಾಹ್ನ 1 ಗಂಟೆಗೆ ಸಿದ್ದರಾಮಯ್ಯ ಆಗಮಿಸಿದರು. ಸಿದ್ದರಾಮಯ್ಯ ವೇದಿಕೆಗೆ ಆಗಮಿಸಿದ ಅರ್ಧಗಂಟೆ ಬಳಿಕ ಡಿ.ಕೆ.ಶಿವಕುಮಾರ್‌ ಬಂದರು. ಆದರೆ, ಡಿ.ಕೆ.ಶಿವಕುಮಾರ್‌ ಬರುವಷ್ಟರಲ್ಲೇ ಸಭೆ ಆರಂಭವಾಗಿತ್ತು. ಶಿವಕುಮಾರ್‌ ಸಭಾಂಗಣಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರಿಂದ ಭಾರೀ ಜೈಕಾರಗಳೂ ಮೊಳಗಿದವು. ಇನ್ನು ಡಿ.ಕೆ.ಶಿವಕುಮಾರ್‌ ವೇದಿಕೆಗೆ ಆಗಮಿಸುವ ಕೆಲವೇ ಕ್ಷಣಗಳ ಮೊದಲು ಸಿದ್ದರಾಮಯ್ಯ ಹೊರ ಹೋಗಿದ್ದರು. ಡಿ.ಕೆ.ಶಿವಕುಮಾರ್‌ ವೇದಿಕೆಗೆ ಬರುತ್ತಿದ್ದಂತೆ ಮತ್ತೆ ವಾಪಸಾದರು. ವೇದಿಕೆಯಲ್ಲಿ ಇಬ್ಬರೂ ನೆಪಮಾತ್ರಕ್ಕೆ ಮಾತ್ರ ಕೈ ಕುಲುಕಿ ತಮ್ಮ ಕುರ್ಚಿಗಳಲ್ಲಿ ಆಸೀನರಾದರು.

ಮೋದಿ ಪ್ರಧಾನಿ ಆದ ಮೇಲೆ ಧರ್ಮ ರಾಜಕಾರಣಕ್ಕೆ ಕುಮ್ಮಕ್ಕು: ಸಿದ್ದರಾಮಯ್ಯ ಕಿಡಿ

ಡಿಕೆಶಿ ನಿಷ್ಠೆ ಪ್ರದರ್ಶನ:

ಇನ್ನೊಂದೆಡೆ ಡಿ.ಕೆ.ಶಿವಕುಮಾರ್‌ ಬರುವವರೆಗೂ ಸ್ಥಳೀಯ ಮುಖಂಡ ರವಿಕುಮಾರ್‌ ಗಣಿಗ ವೇದಿಕೆ ಹತ್ತದೆ ಕೆಳಗಿದ್ದರು. ಮೂರ್ನಾಲ್ಕು ಬಾರಿ ಮೈಕ್‌ನಲ್ಲಿ ಕರೆದರೂ ವೇದಿಕೆ ಮೇಲೆ ಹೋಗುವ ಮನಸ್ಸು ಮಾಡಲಿಲ್ಲ. ಆದರೆ ಡಿ.ಕೆ.ಶಿವಕುಮಾರ್‌ ಬರುತ್ತಿದ್ದಂತೆ ಅವರ ಜೊತೆ ವೇದಿಕೆ ಏರಿದ ಗಣಿಗ ರವಿಕುಮಾರ್‌ ನಾಯಕ ನಿಷ್ಠೆ ಪ್ರದರ್ಶಿಸಿದರು.

ಮೌನ ಮುರಿದ ಉಭಯ ನಾಯಕರು:

ಸಭೆಗೆ ಆಗಮಿಸಿ ಅರ್ಧಗಂಟೆಯಾದರೂ ಉಭಯ ನಾಯಕರು ಪರಸ್ಪರ ಮಾತನಾಡುವ ಗೋಜಿಗೂ ಹೋಗಲಿಲ್ಲ. ಭಾರತ್‌ ಜೋಡೋ ಯಾತ್ರೆಗೆ ಸಿದ್ಧವಾಗಿರೋ ಟೀ-ಶರ್ಟ್‌, ಟೋಪಿಗಳನ್ನು ಇಬ್ಬರೂ ಪ್ರತ್ಯೇಕವಾಗಿಯೇ ಪರಿಶೀಲಿಸಿದರು. ಈ ವೇಳೆ ಇಬ್ಬರೂ ಪರಸ್ಪರ ಕೆಲಕಾಲ ಗೌಪ್ಯ ಮಾತುಕತೆ ನಡೆಸಿದ್ದು ಕುತೂಹಲ ಮೂಡಿಸಿತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!