ಬಿಜೆಪಿಗೆ ಬರುವ 5 ಶಾಸಕರು ಯಾರ್ಯಾರು..? : ಲಕ್ಷ್ಮೀ ಸ್ವಾಗತಿಸ್ತಿನಿ ಎಂದ ರಮೇಶ್‌

Kannadaprabha News   | Asianet News
Published : Feb 17, 2021, 08:36 AM ISTUpdated : Feb 17, 2021, 08:43 AM IST
ಬಿಜೆಪಿಗೆ ಬರುವ 5 ಶಾಸಕರು ಯಾರ್ಯಾರು..? :  ಲಕ್ಷ್ಮೀ ಸ್ವಾಗತಿಸ್ತಿನಿ ಎಂದ ರಮೇಶ್‌

ಸಾರಾಂಶ

ಮತ್ತೊಮ್ಮೆ ಸಚಿವ ರಮೇಶ್ ಜಾರಕಿಹೊಳಿ ಐವರು ಕಾಂಗ್ರೆಸ್ ಶಾಸಕರ ರಾಜೀನಾಮೆ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರವನ್ನೂ ಪ್ರಸ್ತಾಪಿಸಿದ್ದಾರೆ. 

ಚಿಕ್ಕೋಡಿ (ಫೆ.17): 5 ಜನ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಬರುವ ವಿಚಾರ ಮಾತನಾಡಿದ್ದೆ. ಹೆಸರು ಬಹಿರಂಗಪಡಿಸಲು ಹಲವರು ಸವಾಲು ಹಾಕಿದ್ದಾರೆ. 

ಆದರೆ, ರಾಜಕೀಯದಲ್ಲಿ ಹಾಗೆಲ್ಲ ಹೆಸರು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ತಿಳಿಸಿದರು. 

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳ್ಕರ್‌ ಗೋಕಾಕ್‌ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಸ್ವಾಗತಿಸುತ್ತೇನೆ. ಅವರಿಗೆ ಮೈಂಡ್‌ ಔಟ್‌ ಆಗಿದೆ.  ಇನ್ನು ಮುಂದೆ ಅವರಿಗೆ ಹೆಚ್ಚು ಮಹತ್ವ ಕೊಡುವುದು ಬೇಡ ಎಂದು ಹೇಳಿದರು. 

24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ: ಹೊಸ ಬಾಂಬ್ ಸಿಡಿಸಿದ ಸಚಿವ .

ನಾನು ಬೆಳಗಾವಿ ಲೋಕಸಭಾ ಟಿಕೆಟ್‌ ಸುರೇಶ್‌ ಅಂಗಡಿಯವರ ಕುಟುಂಬಕ್ಕೆ ನೀಡಲು ಮನವಿ ಮಾಡಿದ್ದೇನೆ. ಆದರೆ, ಯಾರಿಗೆ ಟಿಕೆಟ್‌ ಕೊಡಬೇಕು ಎನ್ನುವುದು ಹೈಕಮಾಂಡ್‌ಗೆ ಬಿಟ್ಟವಿಚಾರ. ಯಾರೇ ಸ್ಪರ್ಧಿಸಲಿ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ