ಅಗತ್ಯ ಬಂದಾಗ ಸೂಕ್ತ ನಿರ್ಧಾರ ಕೈಗೊಳ್ಳೋ ಸಾಮರ್ಥ್ಯ ಪಕ್ಷಕ್ಕಿದೆ: ಕೆ.ಸಿ.ವೇಣುಗೋಪಾಲ್‌

Published : Oct 04, 2025, 07:59 AM IST
KC Venugopal

ಸಾರಾಂಶ

ನಿಮ್ಮದು ಒಂದೇ ಅಜೆಂಡನಾ, ಐದು ವರ್ಷ, ಎರಡುವರೆ ವರ್ಷ ಅಂತ ಬರೀ ಇದೇ ಪ್ರಶ್ನೆ ಕೇಳುತ್ತೀರಿ. ಪಕ್ಷದಲ್ಲಿ ಯಾವಾಗ ಏನಾಗಬೇಕು ಅನ್ನುವುದನ್ನು ನಿರ್ಧರಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಸಮರ್ಥವಾಗಿದೆ ಎಂದರು ಕೆ.ಸಿ.ವೇಣುಗೋಪಾಲ್‌.

ಬೆಂಗಳೂರು (ಅ.04): ‘ನಾನು ಯಾವಾಗ ಕರ್ನಾಟಕಕ್ಕೆ ಬಂದರೂ ನಿಮ್ಮದು (ಮಾಧ್ಯಮದವರದ್ದು) ಒಂದೇ ಅಜೆಂಡಾನಾ? ಈ ಸರ್ಕಾರ, ಮುಖ್ಯಮಂತ್ರಿ ಐದು ವರ್ಷ ಇರ್ತಾರಾ?, ಎರಡೂವರೆ ವರ್ಷಕ್ಕೆ ಸರ್ಕಾರ ಬದಲಾಗುತ್ತಾ? ಅಂತ ಬರೀ ಇದೇ ಪ್ರಶ್ನೆ ಕೇಳುತ್ತೀರಿ. ಪಕ್ಷದಲ್ಲಿ ಯಾವಾಗ ಏನಾಗಬೇಕೆಂದು ನಿರ್ಧರಿಸುವ ಸಾಮರ್ಥ್ಯ ಕಾಂಗ್ರೆಸ್‌ಗಿದೆ. ನಿಮಗೆ ಅದರ ಚಿಂತೆ ಬೇಡ...’ ಇದು, ಮುಖ್ಯಮಂತ್ರಿ ಬದಲಾವಣೆ, ಅಧಿಕಾರ ಹಂಚಿಕೆ ಕುರಿತು ಕಾಂಗ್ರೆಸ್‌ ನಾಯಕರಿಂದ ನಿಲ್ಲದ ಹೇಳಿಕೆಗಳ ಕುರಿತ ಮಾಧ್ಯಮದವರ ಪ್ರಶ್ನೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ನೀಡಿದ ಉತ್ತರ.

ಗುರುವಾರವಷ್ಟೇ ಉಸಿರಾಟ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೊಳಗಾಗಿ ಮನೆಗೆ ಮರಳಿ ಚೇತರಿಸಿಕೊಳ್ಳುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶುಕ್ರವಾರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ವೇಣುಗೋಪಾಲ್‌ ಅವರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷ ನಾನೇ ಮುಖ್ಯಮಂತ್ರಿ ಎಂದಿದ್ದಾರೆ, ಕೆಲ ಶಾಸಕರು ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರಲ್ಲಾ ಎಂಬ ಪ್ರಶ್ನೆ ಎತ್ತುತ್ತಿದ್ದಂತೆ ಮಾಧ್ಯಮದವರ ಮೇಲೆಯೇ ಗರಂ ಆದಂತೆ ಕಂಡುಬಂದ ವೇಣುಗೋಪಾಲ್‌ ಅವರು..

ಇದರ ಚಿಂತೆ ಬೇಡ

ನಾನು ಯಾವಾಗ ಕರ್ನಾಟಕಕ್ಕೆ ಬಂದರೂ ನಿಮ್ಮದು ಒಂದೇ ಅಜೆಂಡನಾ, ಐದು ವರ್ಷ, ಎರಡುವರೆ ವರ್ಷ ಅಂತ ಬರೀ ಇದೇ ಪ್ರಶ್ನೆ ಕೇಳುತ್ತೀರಿ. ಪಕ್ಷದಲ್ಲಿ ಯಾವಾಗ ಏನಾಗಬೇಕು ಅನ್ನುವುದನ್ನು ನಿರ್ಧರಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಸಮರ್ಥವಾಗಿದೆ. ಅದನ್ನು ದಯವಿಟ್ಟು ನಮ್ಮ ಪಕ್ಷಕ್ಕೆ ಬಿಡಿ, ಮಾಧ್ಯಮಗಳಿಗೆ ಇದರ ಚಿಂತೆ ಬೇಡ. ಯಾವಾಗ ಅಂತಹ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿರುತ್ತದೆಯೋ ಆಗ ಪಕ್ಷ ಅದನ್ನು ತೆಗೆದುಕೊಳ್ಳಲು ಸಮರ್ಥವಾಗಿದೆ ಅಷ್ಟೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ
India Latest News Live: ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ - ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ